ಬ್ರೇಕಿಂಗ್ ನ್ಯೂಸ್
15-05-23 12:57 pm Source: news18 ಕ್ರೀಡೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ (RCB vs RR) ವಿರುದ್ಧ ನಡೆದ ಪಂದ್ಯದಲ್ಲಿ ಆರ್ಸಿಬಿ ತಂಡ ಭರ್ಜರಿ ಜಯ ದಾಖಲಿಸಿತು. ರಾಜಸ್ಥಾನ್ ವಿರುದ್ಧ ಆರ್ಸಿಬಿ 112 ರನ್ ಗಳಿಂದ ಭರ್ಜರಿ ಗೆಲುವು ದಾಖಲಿಸಿತು. ಈ ಮೂಲಕ ಆರ್ಸಿಬಿ ತಂಡದ ಪ್ಲೇಆಫ್ ಕನಸು ಇನ್ನೂ ಜೀವಂತವಾಗಿದೆ. ರಾಜಸ್ಥಾನ್ ತಂಡ 59 ರನ್ಗಳಿಗೆ ಆಲೌಟ್ ಮಾಡಿರುವ ಆರ್ಸಿಬಿ ಇದೀಗ +0.166 ನೆಟ್ ರನ್ರೇಟ್ ಹೊಂದುವ ಮೂಲಕ ಪ್ಲೇಆಫ್ ರೇಸ್ನಲ್ಲಿ ಜೀವಂತವಾಗಿದೆ.

ಆರ್ಸಿಬಿ 12 ಪಂದ್ಯಗಳಲ್ಲಿ 6ರಲ್ಲಿ ಸೋತು 6ರಲ್ಲಿ ಗೆದ್ದು 12 ಅಂಕ ಗಳಿಸಿದೆ. ಈ ವೇಳೆ +0.116 ನೆಟ್ ರನ್ರೇಟ್ ಮೂಲಕ 5ನೇ ಸ್ಥಾನಕ್ಕೇರಿದೆ. ಈ ಮೂಲಕ ರಾಜಸ್ಥಾನ್ ತಂಡವು 6ನೇ ಸ್ಥಾನಕ್ಕೆ ಕುಸಿದಿದೆ. ರಾಜಸ್ಥಾನ್ +0.140 ನೆಟ್ ರನ್ರೇಟ್ ಹೊಂದಿದೆ. ರಾಜಸ್ಥಾನ್ ಗೆಲುವಿನ ಮೂಲಕ ಆರ್ಸಿಬಿ ತಂಡದ ಪ್ಲೇಆಫ್ ಆಸೆ ಉಳಿದಿದ್ದರೂ ಸಹ ಆರ್ಸಿಬಿ ತಂಡಕ್ಕೆ ಇನ್ನು ಕೇವಲ 2 ಪಂದ್ಯಗಳು ಮಾತ್ರ ಬಾಕಿ ಉಳಿದಿದೆ. ಉಳಿದಿರುವ ಪಂದ್ಯಗಳಲ್ಲಿ ಆರ್ಸಿಬಿ ಭರ್ಜರಿ ಜಯ ಸಾಧಿಸಲೇಬೇಕಿದೆ.

ಈ ರೀತಿ ಆದ್ದಲ್ಲಿ ಮಾತ್ರ ತಂಡ ಪ್ಲೇಆಫ್ ಪ್ರವೇಶಿಸುವ ಅವಕಾಶ ಸಿಗುವ ಸಾಧ್ಯತೆ ಇದೆ. ಆದರೆ ಕೇವಲ ಆರ್ಸಿಬಿ ತಂಡ ತಾನು ಮಾತ್ರ ಗೆದ್ದರೆ ಸಾಕಾಗುವುದಿಲ್ಲ. ಹೌದು, ಆರ್ಸಿಬಿ ಗೆಲುವಿನ ಜೊತೆ ಲಕ್ನೋ ಸೂಪರ್ ಜೈಂಟ್ಸ್ ಕನಿಷ್ಠ ಒಂದು ಪಂದ್ಯವನ್ನಾದರೂ ಸೋಲಲೇಬೇಕಿದೆ. ಇನ್ನು, ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿರುವ ಮುಂಬೈ 14 ಅಂಕ ಇರುವುದರಿಂದ ಮುಂದಿನ 2 ಪಂದ್ಯ ಗೆದ್ದು 18 ಅಂಕದ ಮೂಲಕ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ. ಹೀಗೆ ಆದರೆ ಆರ್ಸಿಬಿ 4ನೇ ಸ್ಥಾನದ ಮೂಲಕ 16 ಅಂಕ ಗಳಿಸಿ ಪ್ಲೇಆಫ್ಗೆ ಬರಲಿದೆ. ಅತ್ತ ಲಕ್ನೋ ತಂಡಕ್ಕೆ 2 ಪಂದ್ಯವಿದ್ದು, ಒಂದರಲ್ಲಿ ಸೋತು ಒಂದರಲ್ಲಿ ಗೆದ್ದರೂ ಸಹ 15 ಅಂಕ ಆಗಲಿದೆ. ಆಗ 3 ಪಂದ್ಯಗಳನ್ನು ಆರ್ಸಿಬಿ ಗೆದ್ದರೆ 16 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿ ಉಳಿಯಲಿದೆ. ಈ ಮೂಲಕ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ.
ipl 2023 rcb playoff scenario chances after won rr.
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm