ಬ್ರೇಕಿಂಗ್ ನ್ಯೂಸ್
15-05-23 12:57 pm Source: news18 ಕ್ರೀಡೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ (RCB vs RR) ವಿರುದ್ಧ ನಡೆದ ಪಂದ್ಯದಲ್ಲಿ ಆರ್ಸಿಬಿ ತಂಡ ಭರ್ಜರಿ ಜಯ ದಾಖಲಿಸಿತು. ರಾಜಸ್ಥಾನ್ ವಿರುದ್ಧ ಆರ್ಸಿಬಿ 112 ರನ್ ಗಳಿಂದ ಭರ್ಜರಿ ಗೆಲುವು ದಾಖಲಿಸಿತು. ಈ ಮೂಲಕ ಆರ್ಸಿಬಿ ತಂಡದ ಪ್ಲೇಆಫ್ ಕನಸು ಇನ್ನೂ ಜೀವಂತವಾಗಿದೆ. ರಾಜಸ್ಥಾನ್ ತಂಡ 59 ರನ್ಗಳಿಗೆ ಆಲೌಟ್ ಮಾಡಿರುವ ಆರ್ಸಿಬಿ ಇದೀಗ +0.166 ನೆಟ್ ರನ್ರೇಟ್ ಹೊಂದುವ ಮೂಲಕ ಪ್ಲೇಆಫ್ ರೇಸ್ನಲ್ಲಿ ಜೀವಂತವಾಗಿದೆ.

ಆರ್ಸಿಬಿ 12 ಪಂದ್ಯಗಳಲ್ಲಿ 6ರಲ್ಲಿ ಸೋತು 6ರಲ್ಲಿ ಗೆದ್ದು 12 ಅಂಕ ಗಳಿಸಿದೆ. ಈ ವೇಳೆ +0.116 ನೆಟ್ ರನ್ರೇಟ್ ಮೂಲಕ 5ನೇ ಸ್ಥಾನಕ್ಕೇರಿದೆ. ಈ ಮೂಲಕ ರಾಜಸ್ಥಾನ್ ತಂಡವು 6ನೇ ಸ್ಥಾನಕ್ಕೆ ಕುಸಿದಿದೆ. ರಾಜಸ್ಥಾನ್ +0.140 ನೆಟ್ ರನ್ರೇಟ್ ಹೊಂದಿದೆ. ರಾಜಸ್ಥಾನ್ ಗೆಲುವಿನ ಮೂಲಕ ಆರ್ಸಿಬಿ ತಂಡದ ಪ್ಲೇಆಫ್ ಆಸೆ ಉಳಿದಿದ್ದರೂ ಸಹ ಆರ್ಸಿಬಿ ತಂಡಕ್ಕೆ ಇನ್ನು ಕೇವಲ 2 ಪಂದ್ಯಗಳು ಮಾತ್ರ ಬಾಕಿ ಉಳಿದಿದೆ. ಉಳಿದಿರುವ ಪಂದ್ಯಗಳಲ್ಲಿ ಆರ್ಸಿಬಿ ಭರ್ಜರಿ ಜಯ ಸಾಧಿಸಲೇಬೇಕಿದೆ.

ಈ ರೀತಿ ಆದ್ದಲ್ಲಿ ಮಾತ್ರ ತಂಡ ಪ್ಲೇಆಫ್ ಪ್ರವೇಶಿಸುವ ಅವಕಾಶ ಸಿಗುವ ಸಾಧ್ಯತೆ ಇದೆ. ಆದರೆ ಕೇವಲ ಆರ್ಸಿಬಿ ತಂಡ ತಾನು ಮಾತ್ರ ಗೆದ್ದರೆ ಸಾಕಾಗುವುದಿಲ್ಲ. ಹೌದು, ಆರ್ಸಿಬಿ ಗೆಲುವಿನ ಜೊತೆ ಲಕ್ನೋ ಸೂಪರ್ ಜೈಂಟ್ಸ್ ಕನಿಷ್ಠ ಒಂದು ಪಂದ್ಯವನ್ನಾದರೂ ಸೋಲಲೇಬೇಕಿದೆ. ಇನ್ನು, ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿರುವ ಮುಂಬೈ 14 ಅಂಕ ಇರುವುದರಿಂದ ಮುಂದಿನ 2 ಪಂದ್ಯ ಗೆದ್ದು 18 ಅಂಕದ ಮೂಲಕ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ. ಹೀಗೆ ಆದರೆ ಆರ್ಸಿಬಿ 4ನೇ ಸ್ಥಾನದ ಮೂಲಕ 16 ಅಂಕ ಗಳಿಸಿ ಪ್ಲೇಆಫ್ಗೆ ಬರಲಿದೆ. ಅತ್ತ ಲಕ್ನೋ ತಂಡಕ್ಕೆ 2 ಪಂದ್ಯವಿದ್ದು, ಒಂದರಲ್ಲಿ ಸೋತು ಒಂದರಲ್ಲಿ ಗೆದ್ದರೂ ಸಹ 15 ಅಂಕ ಆಗಲಿದೆ. ಆಗ 3 ಪಂದ್ಯಗಳನ್ನು ಆರ್ಸಿಬಿ ಗೆದ್ದರೆ 16 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿ ಉಳಿಯಲಿದೆ. ಈ ಮೂಲಕ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ.
ipl 2023 rcb playoff scenario chances after won rr.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm