ಬ್ರೇಕಿಂಗ್ ನ್ಯೂಸ್
17-05-23 12:46 pm Source: news18 ಕ್ರೀಡೆ
ಸನ್ ರೈಸರ್ಸ್ ಹೈದರಾಬಾದ್ 2017ರಲ್ಲಿ ಮೊಹಮ್ಮದ್ ಸಿರಾಜ್ ಅವರನ್ನು ಭಾರಿ ಮೊತ್ತಕ್ಕೆ ಖರೀದಿಸಿತು. ಆಗ ಸಿರಾಜ್ ಜನಮಾನಸದಲ್ಲಿ ಅಷ್ಟಾಗಿ ಗುರುತಿಸಿಕೊಳ್ಳಲಿಲ್ಲ. ಆದರೆ ಅವರ ಕೌಶಲ್ಯ ಮತ್ತು ಪ್ರತಿಭೆಯನ್ನು ಗುರುತಿಸಿ ಅವರನ್ನು ತಂಡಕ್ಕೆ ತೆಗೆದುಕೊಳ್ಳಲಾಗಿತ್ತು. ಒಂದು ವರ್ಷದ ನಂತರ, RCB ಅವರನ್ನು ತಮ್ಮ ತಂಡಕ್ಕೆ ತೆಗೆದುಕೊಂಡಿತು. 19ನೇ ವಯಸ್ಸಿನವರೆಗೂ ಟೆನಿಸ್ ಬಾಲ್ ಕ್ರಿಕೆಟ್ ಆಡಿದ್ದ ಸಿರಾಜ್ 23ನೇ ವಯಸ್ಸಿನಲ್ಲಿ ಆರ್ಸಿಬಿ ತಂಡದಲ್ಲಿ ಆಡುತ್ತಿದ್ದರು.
ಆರಂಭದಲ್ಲಿ ಅವರ ಬೌಲಿಂಗ್ನಲ್ಲಿ ಉತ್ತಮ ಹಿಡಿತವಿರಲಿಲ್ಲ. ಆದರೆ ಕ್ರಮೇಣ ಸ್ಟಾರ್ ಬೌಲರ್ ಆಗಿ ಬದಲಾದರು. ಭಾರತ ತಂಡದಲ್ಲಿಯೂ ಅವಕಾಶ ಸಿಕ್ಕಿತು. ಈಗ ಅವರು ತಮ್ಮ ಜೀವನದಲ್ಲಿ ಸಾವಿನ ಬಾಗಿಲಿನಿಂದ ಹಿಂತಿರುಗಿದ ಘಟನೆಯ ಬಗ್ಗೆ ಹೇಳಿಕೊಂಡಿದ್ದರು. ಬ್ರೇಕ್ಫಾಸ್ಟ್ ವಿತ್ ಚಾಂಪಿಯನ್ಸ್ ಶೋನಲ್ಲಿ ಮಾತನಾಡಿದ ಮೊಹಮ್ಮದ್ ಸಿರಾಜ್, ನನಗೆ ಒಮ್ಮೆ ಡೆಂಗ್ಯೂ ಜ್ವರ ಬಂದಿತ್ತು. ಆ ಸಮಯದಲ್ಲಿ ಪ್ಲೇಟ್ಲೆಟ್ಗಳು ವೇಗವಾಗಿ ಕಡಿಮೆಯಾಗುತ್ತಿತ್ತು.
U-23 ತಂಡದ ಜೊತೆ ಮರುದಿನ ಪಂದ್ಯಕ್ಕಾಗಿ ನಾನು ಹೊರಡಬೇಕಿತ್ತು. ನಾನು ಟೆನ್ಶನ್ ನಲ್ಲಿ ಓಡಾಡುತ್ತಿದ್ದೆ. ನನ್ನ ಹೆಸರು ತಂಡದಲ್ಲಿದ್ದರೂ ಸಹ ನಾನು ಮಾತ್ರ ಆಸ್ಪತ್ರೆಯಲ್ಲಿದ್ದೆ. ನನಗೆ ಡೆಂಗ್ಯೂ ಲಕ್ಷಣ ಇದೆ ಎಂದು ಆಸ್ಪತ್ರೆಯಲ್ಲಿ ವೈದ್ಯರು ಹೇಳಿದ್ದರು. ಆ ವೇಳೆಗಾಗಲೇ ನನ್ನ ರಕ್ತ ಕಣಗಳೂ ಕಡಿಮೆ ಆಗಿದ್ದವು. ಆಸ್ಪತ್ರೆಗೆ ಸೇರಿಸದೇ ಇದ್ದಿದ್ದರೆ ನಾನು ಸಾಯುತ್ತಿದ್ದೆ ಎಂದು ವೈದ್ಯರು ಹೇಳಿದ್ದರು ಎಂದು ಸಿರಾಜ್ ಹೇಳಿಕೊಂಡಿದ್ದಾರೆ. ಇದರ ನಡುವೆ ನನ್ನ ಸ್ಥಿತಿಯ ಬಗ್ಗೆ ತರಬೇತುದಾರರ ಬಳಿಯೂ ಹೇಳಿದ್ದೆ.
ಆದರೆ ನಾನು ತಂಡಕ್ಕೆ ಹೊಸಬನಾಗಿದ್ದರಿಂದ ಕೆಲವರು ನನ್ನ ಮಾತನ್ನು ನಂಬಲಿಲ್ಲ. ನಾನು ಸುಳ್ಳು ಹೇಳುತ್ತಿದ್ದೇನೆ ಎಂದು ಎಲ್ಲರೂ ಭಾವಿಸಿದ್ದರು. ಏಕೆಂದರೆ ನಾನು ಸುಳ್ಳು ಹೇಳಿ ಅಭ್ಯಾಸದಿಂದ ದೂರವಿರುತ್ತೇನೆ ಎಂದು ಅವರು ಅವರುಗಳು ಅಂದುಕೊಂಡಿದ್ದರು ಎಂದು ಸಿರಾಜ್ ಹೇಳಿದ್ದಾರೆ. ಪ್ರಸ್ತುತ ಆರ್ಸಿಬಿ ತಂಡದಲ್ಲಿರುವ ಮೊಹಮ್ಮದ್ ಸಿರಾಜ್ ಈ ಋತುವಿನಲ್ಲಿ ಫಾರ್ಮ್ನಲ್ಲಿದ್ದಾರೆ. ಈ ಬಾರಿ ಮೊಹಮ್ಮದ್ ಸಿರಾಜ್ 12 ಪಂದ್ಯಗಳಲ್ಲಿ 15 ವಿಕೆಟ್ ಪಡೆದಿದ್ದಾರೆ. ಅತಿ ಹೆಚ್ಚು ಡಾಟ್ ಬೌಲ್ ಮಾಡಿದ ಬೌಲರ್ಗಳಲ್ಲಿ ಅವರು ಅಗ್ರಸ್ಥಾನದಲ್ಲಿದ್ದಾರೆ.
ipl 2023 rcb star bowler mohammad siraj is suffering from dengue fever.
20-04-24 06:48 pm
Bangalore Correspondent
Neha Murder Hubballi, Mother: ನನ್ನ ಮಗಳು ಹೊಲಸು...
20-04-24 03:37 pm
Hubballi Neha Murder, Accused Mother: ನೇಹಾಳೇ...
20-04-24 02:30 pm
Bhatkal boat: ಭಟ್ಕಳ ; ಗಾಳಿ ಮಳೆಗೆ ಮೀನುಗಾರಿಕಾ ಬ...
20-04-24 12:54 pm
Neha murder hubballi, Father: ಬಿಜೆಪಿ ಬಿಟ್ಟು ಕ...
20-04-24 12:53 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
20-04-24 08:16 pm
Mangalore Correspondent
Harikrishna Bantwal, Mangalore, BJP: ಕಾಂಗ್ರೆಸ...
20-04-24 07:42 pm
Congress Kavitha Sanil joins BJP: ಮಾಜಿ ಮೇಯರ್,...
20-04-24 04:45 pm
Rain in Mangalore, Udupi: ದಕ್ಷಿಣ ಕನ್ನಡ ಜಿಲ್ಲೆ...
20-04-24 12:12 pm
Mangalore Yedapadavu accident: ಮಣ್ಣು ಸಾಗಾಟದ ಕ...
19-04-24 10:11 pm
19-04-24 10:25 pm
Mangalore Correspondent
Mangalore Acid Attack, EXAM: ಆ್ಯಸಿಡ್ ದಾಳಿಗೀಡಾ...
19-04-24 09:25 pm
Hubballi student Neha murder: ಹುಬ್ಬಳ್ಳಿ ಕಾಲೇ...
19-04-24 03:43 pm
Gadag Murder news, four killed; ನಗರ ಸಭೆ ಉಪಾಧ್...
19-04-24 09:27 am
Bangalore Double Murder: 'ಕರಿಮಣಿ ಮಾಲೀಕ'ನಿಗೆ ತ...
18-04-24 10:03 pm