ಬ್ರೇಕಿಂಗ್ ನ್ಯೂಸ್
24-05-23 03:31 pm Source: news18 ಕ್ರೀಡೆ
ಈ ವರ್ಷದ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಭಾರತದಲ್ಲಿ ಏಕದಿನ ವಿಶ್ವಕಪ್ (ICC World Cup 2023) ನಡೆಯಲಿದೆ ಎಂದು ವರದಿಯಾಗಿದೆ. ಮೊದಲ ಬಾರಿಗೆ ಭಾರತ ಏಕಾಂಗಿಯಾಗಿ ಏಕದಿನ ವಿಶ್ವಕಪ್ಗೆ ಆತಿಥ್ಯ ವಹಿಸಲಿದೆ. ಈಗಾಗಲೇ 8 ತಂಡಗಳು ಏಕದಿನ ವಿಶ್ವಕಪ್ಗೆ ಅರ್ಹತೆ ಪಡೆದಿವೆ. ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್, ನ್ಯೂಜಿಲೆಂಡ್, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ವಿಶ್ವಕಪ್ಗೆ ಅರ್ಹತೆ ಪಡೆದಿವೆ.
ಆದರೆ ಇನ್ನೆರಡು ತಂಡಗಳು ಬೇಕಾಗಿದ್ದು, ಈ ವಿಶ್ವಕಪ್ ಕ್ವಾಲಿಫೈಯರ್ ಟೂರ್ನಿ ಜಿಂಬಾಬ್ವೆಯಲ್ಲಿ ನಡೆಯಲಿದೆ. ಕೆಲ ಸಮಯದ ಹಿಂದೆಯೇ ಐಸಿಸಿ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಶ್ರೀಲಂಕಾ ಮತ್ತು ವೆಸ್ಟ್ ಇಂಡೀಸ್ಗೆ ಈ ಪಂದ್ಯಾವಳಿ ಅತ್ಯಂತ ಮಹತ್ವದ್ದಾಗಿದೆ. ಇದರಲ್ಲಿ ಒಟ್ಟು 10 ತಂಡಗಳು ಸ್ಪರ್ಧಿಸಲಿವೆ. ಗ್ರೂಪ್ 'ಎ' ವೆಸ್ಟ್ ಇಂಡೀಸ್, ಜಿಂಬಾಬ್ವೆ, ನೆದರ್ಲ್ಯಾಂಡ್ಸ್, ನೇಪಾಳ, ಯುನೈಟೆಡ್ ಸ್ಟೇಟ್ಸ್ ಅನ್ನು ಒಳಗೊಂಡಿದೆ.'ಬಿ' ಗುಂಪಿನಲ್ಲಿ ಶ್ರೀಲಂಕಾ, ಐರ್ಲೆಂಡ್, ಸ್ಕಾಟ್ಲೆಂಡ್, ಓಮನ್ ಮತ್ತು ಯುಎಇ ಸೇರಿವೆ.



ಈ ಪಂದ್ಯಾವಳಿಯು ಜೂನ್ 18 ರಿಂದ ಜುಲೈ 9ರ ವರೆಗೆ ನಡೆಯಲಿದೆ. ಮೊದಲು ಗುಂಪು ಹಂತದಲ್ಲಿ ನಡೆಯಲಿದೆ. ಪ್ರತಿ ತಂಡವು ತಮ್ಮ ಗುಂಪಿನ ಇತರ ನಾಲ್ಕು ತಂಡಗಳ ವಿರುದ್ಧ ಒಂದು ಪಂದ್ಯವನ್ನು ಆಡುತ್ತದೆ. ಎರಡೂ ಗುಂಪಿನಲ್ಲಿ ಅಗ್ರ 3 ತಂಡಗಳು ಸೂಪರ್ ಸಿಕ್ಸ್ಗೆ ಅರ್ಹತೆ ಪಡೆಯುತ್ತವೆ. ಸೂಪರ್ 6 ರಲ್ಲಿ ಪ್ರತಿ ತಂಡವು 4 ತಂಡಗಳ ವಿರುದ್ಧ ಆಡಲಿದೆ. ಆ ಬಳಿಕ ಅಗ್ರ 2 ಸ್ಥಾನ ಪಡೆಯುವ ತಂಡಗಳು ಫೈನಲ್ಗೆ ಅರ್ಹತೆ ಪಡೆಯಲಿವೆ. ಇದಲ್ಲದೆ, ಅವರು ಭಾರತದಲ್ಲಿ ನಡೆಯಲಿರುವ 2023ರ ODI ವಿಶ್ವಕಪ್ಗೆ ಅರ್ಹತೆ ಪಡೆಯುತ್ತಾರೆ.



ಭಾರತದಲ್ಲಿ ನಡೆಯಲಿರುವ 2023ರ ODI ವಿಶ್ವಕಪ್ನಲ್ಲಿ ಒಟ್ಟು 10 ತಂಡಗಳು ಭಾಗವಹಿಸಲಿವೆ. ಅಕ್ಟೋಬರ್ 5ರಂದು ಟೂರ್ನಿ ಆರಂಭವಾಗುವ ಸಾಧ್ಯತೆ ಇದೆ ಎಂಬ ವರದಿಗಳಿವೆ. ಆದರೆ ಶೀಘ್ರದಲ್ಲೇ ವೇಳಾಪಟ್ಟಿಯ ಬಗ್ಗೆ ಐಸಿಸಿ ಅಧಿಕೃತ ಘೋಷಣೆ ಮಾಡುವ ಸಾಧ್ಯತೆಯಿದೆ. ಇನ್ನು, ಈ ಬಾರಿ ವಿಶ್ವಕಪ್ ಭಾರತದಲ್ಲಿ ನಡೆಯುವುದರಿಂದ ಪಾಕಿಸ್ತಾನ್ ಮತ್ತು ಭಾರತ ನಡುವಿನ ಪಂದ್ಯಕ್ಕಾಗಿ ಕೋಟ್ಯಾಂತರ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
icc announces schedule for world cup 2023 qualifiers.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm