ಬ್ರೇಕಿಂಗ್ ನ್ಯೂಸ್
03-06-23 02:37 pm Source: news18 ಕ್ರೀಡೆ
ಭಾರತ ಮತ್ತು ಟೀಂ ಇಂಡಿಯಾ ಎರಡೂ ತಂಡಗಳು ಈಗಾಗಲೇ ಲಂಡನ್ ತಲುಪಿದ್ದು ಅಭ್ಯಾಸ ನಡೆಸುತ್ತಿವೆ. ಮತ್ತೊಂದೆಡೆ ಅಂತಿಮ ತಂಡದ ಬಗ್ಗೆ ಟೀಂ ಇಂಡಿಯಾ ಚಿಂತನೆ ನಡೆಸುತ್ತಿದೆ. ಯಾರನ್ನು ಆಡಿಸಬೇಕು? ಯಾರನ್ನು ಬೆಂಚ್ ಮೇಲೆ ಹಾಕಬೇಕು ಎಂದು ಕಾದುನೋಡಬೇಕಿದೆ. ಫೈನಲ್ ಇಂಗ್ಲೆಂಡ್ ನಲ್ಲಿ ನಡೆಯಲಿರುವುದರಿಂದ ವೇಗಿಗಳಿಗೆ ಇದು ಸೂಕ್ತವಾಗಿದೆ. ಭಾರತ ಮೂರು ಸೀಮರ್ಗಳು ಮತ್ತು ಇಬ್ಬರು ಸ್ಪಿನ್ನರ್ಗಳೊಂದಿಗೆ ಕಣಕ್ಕೆ ಇಳಿಯುವ ಸಾಧ್ಯತೆಯಿದೆ. ಪಿಚ್ ಕಳೆದ ಎರಡು ದಿನಗಳಿಂದ ಸ್ಪಿನ್ಗೆ ಒಲವು ತೋರುವ ಸಾಧ್ಯತೆಯಿದೆ. ಭಾರತ ಇಬ್ಬರು ಸ್ಪಿನ್ನರ್ಗಳೊಂದಿಗೆ ಆಡಬೇಕಿದೆ.
ಈ ವರ್ಷದ ಮಾರ್ಚ್ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಮಿಂಚಿದ್ದ ಅಕ್ಷರ್ ಪಟೇಲ್ ಅವರನ್ನು ಬೆಂಚ್ಗೆ ಸೀಮಿತಗೊಳಿಸುವ ಸಾಧ್ಯತೆಯಿದೆ. ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಅಕ್ಷರ್ ಪಟೇಲ್ 4 ಟೆಸ್ಟ್ ಪಂದ್ಯಗಳಲ್ಲಿ 264 ರನ್ ಗಳಿಸಿದ್ದರು. ಇದರಲ್ಲಿ 3 ಅರ್ಧಶತಕಗಳೂ ಸೇರಿವೆ. ಕೆಳ ಕ್ರಮಾಂಕದಲ್ಲಿ ಅಕ್ಷರ್ ಪಟೇಲ್ ಪ್ರತಿ ಬಾರಿ ಬ್ಯಾಟಿಂಗ್ನಲ್ಲಿ ಸಹಾ ಮಾಡಿದ್ದಾರೆ. ಆದರೆ ಅಕ್ಷರ್ ಪಟೇಲ್ ಆಸ್ಟ್ರೇಲಿಯಾ ವಿರುದ್ಧದ ಫೈನಲ್ ನಲ್ಲಿ ಆಡುವುದು ಅನುಮಾನ. ಏಕೆಂದರೆ ಭಾರತ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಕಡೆಗೆ ವಾಲುತ್ತಿರುವಂತೆ ಕಾಣುತ್ತಿದೆ. ಹಾಗೂ ಆಲ್ ರೌಂಡರ್ ಕೋಟಾದಲ್ಲಿ ಜಡೇಜಾ ಕಣಕ್ಕೆ ಇಳಿಯಲಿದ್ದಾರೆ.


ಫಿನಾಲೆಯಲ್ಲಿ ಅಕ್ಷರ್ ಪಟೇಲ್ ಡ್ರಿಂಕ್ಸ್ ಬಾಯ್ ಪಾತ್ರಕ್ಕೆ ಸೀಮಿತವಾಗುವ ಸಾಧ್ಯತೆ ಇದೆ. ಈ ಬಗ್ಗೆ ಅಭಿಮಾನಿಗಳು ವಿಭಿನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಐಪಿಎಲ್ 2023 ರಲ್ಲಿ ಅಶ್ವಿನ್ ಯಾವುದೇ ಪ್ರಭಾವ ಬೀರಲು ಸಾಧ್ಯವಾಗಲಿಲ್ಲ. ಭಾರತ ಫೈನಲ್ನಲ್ಲಿ ನಾಲ್ವರು ಸೀಮರ್ಗಳೊಂದಿಗೆ ಕಣಕ್ಕೆ ಇಳಿಯಬೇಕು ಎಂದು ಸೂಚಿಸಲಾಗಿದೆ. ಶಮಿ, ಸಿರಾಜ್, ಉಮೇಶ್ ಯಾದವ್ ಜತೆ ಶಾರ್ದೂಲ್ ಠಾಕೂರ್ ಅವರನ್ನು ಕಣಕ್ಕಿಳಿಸಿದರೆ, ಇತ್ತ ಜಡೇಜಾ ಅವರನ್ನು ಸ್ಪಿನ್ನರ್ ಆಗಿ ಕಣಕ್ಕಿಳಿಸಬಹುದು.


ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಭಾರತ ತಂಡ ಸತತ ಎರಡನೇ ಬಾರಿಗೆ ಫೈನಲ್ಗೆ ಲಗ್ಗೆ ಇಟ್ಟಿದೆ. ಕಳೆದ ಬಾರಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ತಂಡವು ನ್ಯೂಜಿಲೆಂಡ್ ವಿರುದ್ಧ ಸೋಲನ್ನು ಎದುರಿಸಬೇಕಾಯಿತು. ಐಸಿಸಿ ಟೆಸ್ಟ್ ವಿಶ್ವ ಚಾಂಪಿಯನ್ಷಿಪ್ ಟೂರ್ನಿಯ ಫೈನಲ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದ ಹೊಸ ಜರ್ಸಿಯನ್ನು ಅಡಿಡಾಸ್ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅನಾವರಣಗೊಳಿಸಿದೆ. ಬಿಸಿಸಿಐ ಅಡಿಡಾಸ್ನೊಂದಿಗೆ 5 ವರ್ಷಗಳ ಒಪ್ಪಂದಕ್ಕೆ ಸಹಿ ಹಾಕಿದ್ದು, ಒಪ್ಪಂದ 2028ರವರೆಗೆ ಇರಲಿದೆ. ಐದು ವರ್ಷಗಳ ಅವಧಿಯಲ್ಲಿ ಸುಮಾರು 350 ಕೋಟಿಗಳಷ್ಟು ಒಪ್ಪಂದವನ್ನು ನಿರೀಕ್ಷಿಸಲಾಗಿದೆ ಎಂದು ಅಂದಾಜಿಸಲಾಗಿದೆ.
ind vs aus axar patel may bebenched in wtc final.
06-06-26 12:49 pm
HK News Staffer
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
ಬೆಂಗಳೂರು ಖಾತೆಗಾಗಿ ರಾಮಲಿಂಗಾರೆಡ್ಡಿ ಬಂಡಾಯ: ಮನವೊಲ...
05-06-26 06:19 pm
ರಾಮಲಿಂಗಾ ರೆಡ್ಡಿ ಕಚೇರಿ ಎದುರಲ್ಲಿ ಪ್ರತಿಭಟನೆ ; ಕಾ...
05-06-26 05:23 pm
ಡಿಕೆಶಿ ಸಂಪುಟದಲ್ಲಿ ಮೊದಲ ವಿಕೆಟ್ ಪತನ ; ಖಾತೆ ಹಂಚಿ...
05-06-26 10:29 am
06-06-26 10:42 pm
HK News Desk
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
20 ವರ್ಷಗಳ ಹಿಂದೆ ಬರೆದಿದ್ದ ಪರೀಕ್ಷೆಗೆ ಈಗ ಬಂತು ಸರ...
03-06-26 09:17 pm
07-06-26 03:38 pm
Mangalore Correspondent
Apex Capital Fraud Investment, Mangalore: ಬಿಜ...
07-06-26 01:57 pm
ಮುರಿನಕಟ್ಟೆ ಧ್ವಂಸ ಪ್ರಕರಣಕ್ಕೆ ಮತ್ತೆ ಕಾವು ; ಭಟ್ಕ...
05-06-26 01:25 pm
ಪಿನಾಕಿನಿ ಹೊಳೆಯಲ್ಲಿ ಹೆಚ್ಚಾದ ಹೂಳು, ಬದಲಾದ ಹರಿವಿನ...
04-06-26 12:51 pm
ಇನ್ನು ವಿಧಾನಮಂಡಲದಲ್ಲೂ ಡಿಜಿಟಲ್ ಟಚ್ ! 6 ತಿಂಗಳಲ್ಲ...
02-06-26 04:18 pm
07-06-26 03:08 pm
HK News Desk
ಉಡುಪಿಗೆ ತೆರಳುತ್ತಿದ್ದ ಬಸ್ಗೆ ಹುಲಿಕಲ್ ಘಾಟ್ನಲ್...
06-06-26 09:01 pm
ನ್ಯಾಯಾಲಯದ ವಾರಂಟ್ ತಪ್ಪಿಸಿ ತಲೆಮರೆಸಿಕೊಂಡಿದ್ದ ಇಬ್...
06-06-26 05:04 pm
ಐಸಿಸ್ ಉಗ್ರನೊಂದಿಗೆ ಸಂಪರ್ಕ; ತುಮಕೂರಿನಲ್ಲಿ ಇಬ್ಬರ...
06-06-26 04:59 pm
ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ ; ವಿದ...
06-06-26 01:18 pm