ಬ್ರೇಕಿಂಗ್ ನ್ಯೂಸ್
06-06-23 01:10 pm Source: news18 ಕ್ರೀಡೆ
ಏಷ್ಯಾಕಪ್ 2023ರ ಆಯೋಜನೆಗೆ ಸಂಬಂಧಿಸಿದಂತೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಂದರೆ ಪಿಸಿಬಿಗೆ ದೊಡ್ಡ ಹೊಡೆತ ಬಿದ್ದಿದೆ. ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರದಿದ್ದರೆ ಏಷ್ಯಾಕಪ್ ಅನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸಲು ಪಿಸಿಬಿ ಅಧ್ಯಕ್ಷ ನಜಮ್ ಸೇಥಿ ಪ್ರಸ್ತಾಪಿಸಿದ್ದರು. ಆದರೆ ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿಗಳು ಹೈಬ್ರಿಡ್ ಮಾದರಿಯನ್ನು ಸ್ವೀಕರಿಸಲು ನಿರಾಕರಿಸಿವೆ. ಈಗ ಪಾಕಿಸ್ತಾನಕ್ಕೆ ಕೇವಲ 2 ಆಯ್ಕೆಗಳು ಮಾತ್ರ ಬಾಕಿ ಉಳಿದವೆ.
ಮೊದಲನೆಯದು ಪಂದ್ಯಾವಳಿಯನ್ನು ತಟಸ್ಥ ಸ್ಥಳದಲ್ಲಿ ನಡೆಸುವುದು ಮತ್ತು ಪಂದ್ಯಾವಳಿಯಿಂದ ಹಿಂದೆ ಸರಿಯುವುದು ಎರಡನೆಯ ಆಯ್ಕೆಯಾಗಿದೆ. ಈ ಹಿಂದೆಯೂ ಪಾಕಿಸ್ತಾನ ಇಲ್ಲದ ಏಷ್ಯಾಕಪ್ ಪಂದ್ಯಗಳು ನಡೆದಿದ್ದವು. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, 3 ದೇಶಗಳು ಪಿಸಿಬಿ ಹೈಬ್ರಿಡ್ ಮಾದರಿಯನ್ನು ತಿರಸ್ಕರಿಸಿವೆ. ಈ ಹಿಂದೆ ನಜಮ್ ಸೇಥಿ ಅವರು ಇಡೀ ಪಂದ್ಯಾವಳಿಯನ್ನು ತಟಸ್ಥ ಸ್ಥಳದಲ್ಲಿ ನಡೆಸುವಂತೆ ಕೇಳಿಕೊಂಡಾಗ ಪಂದ್ಯಾವಳಿಯಿಂದ ಹಿಂದೆ ಸರಿಯುತ್ತೇವೆ ಎಂದು ಹೇಳಿದ್ದರು.


ಈಗಾಗಲೇ ಪಿಸಿಬಿ 4 ಪಂದ್ಯಗಳನ್ನು ಪಾಕಿಸ್ತಾನದಲ್ಲಿ ಹಾಗೂ ಪಾಕಿಸ್ತಾನದ ಹೊರತಾಗಿ ಯುಎಇಯಲ್ಲಿಯೂ ಟೂರ್ನಿ ನಡೆಸಲು ಸಿದ್ಧತೆ ನಡೆಸಿದೆ. ಆದರೆ ಈವರೆಗೂ ಏಷ್ಯಾಕಪ್ ಕುರಿತು ಒಂದು ನಿರ್ಧಿಷ್ಟ ಸ್ಪಷ್ಟನೆ ಸಿಕ್ಕಿಲ್ಲ. ಶ್ರೀಲಂಕಾ ಜೊತೆಗಿನ ಸಂಬಂಧ ಹದಗೆಟ್ಟಿದ್ದು, ಏಷ್ಯಾಕಪ್ ನಡೆಸಲು ಶ್ರೀಲಂಕಾ ಕ್ರಿಕೆಟ್ ಮಂಡಳಿ ಸಿದ್ಧವಾಗಿದೆ. ಆತಿಥ್ಯ ವಹಿಸಲು ಶ್ರೀಲಂಕಾ ಮುಂದೆ ಬಂದಿದ್ದಕ್ಕೆ ಕೋಪಗೊಂಡ ಪಾಕಿಸ್ತಾನ ಕ್ರಿಕೆಟ್ ಮಂಡಳಿ ತನ್ನ ವಿರುದ್ಧದ ಏಕದಿನ ಸರಣಿಯನ್ನು ರದ್ದುಗೊಳಿಸಿದೆ.


ಒಂದು ವೇಳೆ ಪಾಕಿಸ್ತಾನ ಟೂರ್ನಿಯಿಂದ ಹಿಂದೆ ಸರಿದರೆ ಏಷ್ಯಾಕಪ್ಗೆ 6ರ ಬದಲಾಗಿ 5 ದೇಶಗಳು ಮಾತ್ರ ಪ್ರವೇಶಿಸಲಿವೆ. ಇದರಲ್ಲಿ ಭಾರತವಲ್ಲದೆ ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ, ನೇಪಾಳ ಕೂಡ ಸ್ಥಾನ ಪಡೆದಿವೆ. ಇದಕ್ಕೂ ಮುನ್ನ 1990-91ರಲ್ಲಿ ಭಾರತದಲ್ಲಿ ನಡೆದ ಏಷ್ಯಾಕಪ್ನಲ್ಲಿ ಪಾಕಿಸ್ತಾನ ತಂಡ ಪ್ರವೇಶಿಸಿರಲಿಲ್ಲ.
Afghanistan Sri Lanka and Bangladesh have Rejected the hybrid model of pakistan for asia cup 2023.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm