ಬ್ರೇಕಿಂಗ್ ನ್ಯೂಸ್
06-06-23 01:10 pm Source: news18 ಕ್ರೀಡೆ
ಏಷ್ಯಾಕಪ್ 2023ರ ಆಯೋಜನೆಗೆ ಸಂಬಂಧಿಸಿದಂತೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಂದರೆ ಪಿಸಿಬಿಗೆ ದೊಡ್ಡ ಹೊಡೆತ ಬಿದ್ದಿದೆ. ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರದಿದ್ದರೆ ಏಷ್ಯಾಕಪ್ ಅನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸಲು ಪಿಸಿಬಿ ಅಧ್ಯಕ್ಷ ನಜಮ್ ಸೇಥಿ ಪ್ರಸ್ತಾಪಿಸಿದ್ದರು. ಆದರೆ ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿಗಳು ಹೈಬ್ರಿಡ್ ಮಾದರಿಯನ್ನು ಸ್ವೀಕರಿಸಲು ನಿರಾಕರಿಸಿವೆ. ಈಗ ಪಾಕಿಸ್ತಾನಕ್ಕೆ ಕೇವಲ 2 ಆಯ್ಕೆಗಳು ಮಾತ್ರ ಬಾಕಿ ಉಳಿದವೆ.
ಮೊದಲನೆಯದು ಪಂದ್ಯಾವಳಿಯನ್ನು ತಟಸ್ಥ ಸ್ಥಳದಲ್ಲಿ ನಡೆಸುವುದು ಮತ್ತು ಪಂದ್ಯಾವಳಿಯಿಂದ ಹಿಂದೆ ಸರಿಯುವುದು ಎರಡನೆಯ ಆಯ್ಕೆಯಾಗಿದೆ. ಈ ಹಿಂದೆಯೂ ಪಾಕಿಸ್ತಾನ ಇಲ್ಲದ ಏಷ್ಯಾಕಪ್ ಪಂದ್ಯಗಳು ನಡೆದಿದ್ದವು. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, 3 ದೇಶಗಳು ಪಿಸಿಬಿ ಹೈಬ್ರಿಡ್ ಮಾದರಿಯನ್ನು ತಿರಸ್ಕರಿಸಿವೆ. ಈ ಹಿಂದೆ ನಜಮ್ ಸೇಥಿ ಅವರು ಇಡೀ ಪಂದ್ಯಾವಳಿಯನ್ನು ತಟಸ್ಥ ಸ್ಥಳದಲ್ಲಿ ನಡೆಸುವಂತೆ ಕೇಳಿಕೊಂಡಾಗ ಪಂದ್ಯಾವಳಿಯಿಂದ ಹಿಂದೆ ಸರಿಯುತ್ತೇವೆ ಎಂದು ಹೇಳಿದ್ದರು.


ಈಗಾಗಲೇ ಪಿಸಿಬಿ 4 ಪಂದ್ಯಗಳನ್ನು ಪಾಕಿಸ್ತಾನದಲ್ಲಿ ಹಾಗೂ ಪಾಕಿಸ್ತಾನದ ಹೊರತಾಗಿ ಯುಎಇಯಲ್ಲಿಯೂ ಟೂರ್ನಿ ನಡೆಸಲು ಸಿದ್ಧತೆ ನಡೆಸಿದೆ. ಆದರೆ ಈವರೆಗೂ ಏಷ್ಯಾಕಪ್ ಕುರಿತು ಒಂದು ನಿರ್ಧಿಷ್ಟ ಸ್ಪಷ್ಟನೆ ಸಿಕ್ಕಿಲ್ಲ. ಶ್ರೀಲಂಕಾ ಜೊತೆಗಿನ ಸಂಬಂಧ ಹದಗೆಟ್ಟಿದ್ದು, ಏಷ್ಯಾಕಪ್ ನಡೆಸಲು ಶ್ರೀಲಂಕಾ ಕ್ರಿಕೆಟ್ ಮಂಡಳಿ ಸಿದ್ಧವಾಗಿದೆ. ಆತಿಥ್ಯ ವಹಿಸಲು ಶ್ರೀಲಂಕಾ ಮುಂದೆ ಬಂದಿದ್ದಕ್ಕೆ ಕೋಪಗೊಂಡ ಪಾಕಿಸ್ತಾನ ಕ್ರಿಕೆಟ್ ಮಂಡಳಿ ತನ್ನ ವಿರುದ್ಧದ ಏಕದಿನ ಸರಣಿಯನ್ನು ರದ್ದುಗೊಳಿಸಿದೆ.


ಒಂದು ವೇಳೆ ಪಾಕಿಸ್ತಾನ ಟೂರ್ನಿಯಿಂದ ಹಿಂದೆ ಸರಿದರೆ ಏಷ್ಯಾಕಪ್ಗೆ 6ರ ಬದಲಾಗಿ 5 ದೇಶಗಳು ಮಾತ್ರ ಪ್ರವೇಶಿಸಲಿವೆ. ಇದರಲ್ಲಿ ಭಾರತವಲ್ಲದೆ ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ, ನೇಪಾಳ ಕೂಡ ಸ್ಥಾನ ಪಡೆದಿವೆ. ಇದಕ್ಕೂ ಮುನ್ನ 1990-91ರಲ್ಲಿ ಭಾರತದಲ್ಲಿ ನಡೆದ ಏಷ್ಯಾಕಪ್ನಲ್ಲಿ ಪಾಕಿಸ್ತಾನ ತಂಡ ಪ್ರವೇಶಿಸಿರಲಿಲ್ಲ.
Afghanistan Sri Lanka and Bangladesh have Rejected the hybrid model of pakistan for asia cup 2023.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm