ಬ್ರೇಕಿಂಗ್ ನ್ಯೂಸ್
08-06-23 01:48 pm Source: news18 ಕ್ರೀಡೆ
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ಇಂಗ್ಲೆಂಡ್ನ ಓವಲ್ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುಯುತ್ತಿದೆ. ಇದು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಎರಡನೇ ಸೀಸನ್. ಭಾರತ ತಂಡವೂ ಮೊದಲ ಋತುವಿನ ಫೈನಲ್ ತಲುಪಿತ್ತು. ನಂತರ ಅವರು ನ್ಯೂಜಿಲೆಂಡ್ ವಿರುದ್ಧ ಪ್ರಶಸ್ತಿ ಜಯಿಸಿತ್ತು. ಈ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಮಾಡಲು ನಿರ್ಧರಿಸಿತು. ಅದರಂತೆ ಆರಂಭದಲ್ಲಿ ಭಾರತೀಯ ಬೌಲರ್ಗಳು ಪಿಚ್ನ ಲಾಭ ಪಡೆಯುವ ಮೂಲಕ ಆಸೀಸ್ ಬ್ಯಾಟರ್ಗಳ ಮೇಲೆ ದಾಳಿ ನಡೆಸಿದರು.
ಭೋಜನ ವಿರಾಮದ ನಂತರ ಮೊಹಮ್ಮದ್ ಶಮಿ ಮಾರ್ನಸ್ ಲಬುಶೆನ್ ಅವರನ್ನು ಔಟ್ ಮಾಡಿದಾಗ ಆಸ್ಟ್ರೇಲಿಯಾದ ಮೂರನೇ ವಿಕೆಟ್ ಪತನವಾಯಿತು. ಲಬುಶೆನ್ ಬದಲಿಗೆ ಟ್ರಾವಿಸ್ ಹೆಡ್ ಕ್ರೀಸ್ಗೆ ಬಂದರು. 76 ರನ್ಗಳಿಗೆ ಮೂರನೇ ವಿಕೆಟ್ ಕಳೆದುಕೊಂಡಿದ್ದ ಆಸೀಸ್ಗೆ ಸ್ಮಿತ್ ಮತ್ತು ಹೆಡ್ ಉತ್ತಮ ಜೊತೆಯಾಟ ನೀಡಿದರು. ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಬಂದ ಟ್ರಾವಿಸ್ ಹೆಡ್ ಭಾರತ ತಂಡದ ಉದ್ದೇಶವನ್ನು ಹಾಳು ಮಾಡಿದರು.


ಟ್ರಾವಿಸ್ ಹೆಡ್ ಅಬ್ಬರದ ಶತಕ ಬಾರಿಸಿದರು. ಕೇವಲ 106 ಎಸೆತಗಳಲ್ಲಿ ಶತಕ ಪೂರೈಸಿದರು. 29 ವರ್ಷದ ಟ್ರಾವಿಸ್ ಹೆಡ್ ಅವರ ಶತಕದಲ್ಲಿ 15 ಬೌಂಡರಿ ಮತ್ತು ಒಂದು ಸಿಕ್ಸರ್ ಸೇರಿತ್ತು. ಅಂದರೆ, ಅವರ 100 ರನ್ಗಳಲ್ಲಿ ಅವರು ಬೌಂಡರಿಯಿಂದ 66 ರನ್ ಗಳಿಸಿದರು. ಶತಕ ಪೂರೈಸಲು ಸುಮಾರು 3 ಗಂಟೆಗಳ ಕಾಲ ಬ್ಯಾಟಿಂಗ್ ಮಾಡಬೇಕಾಯಿತು. ಟೆಸ್ಟ್ ಪಂದ್ಯದ ದೃಷ್ಟಿಯಿಂದ ಇದು ಅತ್ಯಂತ ವೇಗದ ಶತಕ. ಟ್ರಾವಿಸ್ ಹೆಡ್ ಅವರ ಈ ಶತಕ ಭಾರತ ತಂಡಕ್ಕೆ ಸಾಕಷ್ಟು ನಷ್ಟವನ್ನು ಉಂಟುಮಾಡಿದೆ.


ಇದರ ನಡುವೆ ಶತಕ ಸಿಡಿಸುವ ಮೂಲಕ ಆಸೀಸ್ ಆಟಗಾರ ಟ್ರಾವಿಸ್ ಹೆಡ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಇತಿಹಾಸದಲ್ಲಿ ಶತಕ ಬಾರಿಸಿದ ಮೊದಲ ಬ್ಯಾಟರ್ ಎನಿಸಿಕೊಂಡರು. ಓವಲ್ನಲ್ಲಿ ನಡೆದ WTC ಫೈನಲ್ 2023ರ ಆರಂಭಿಕ ದಿನದ ಮೂರನೇ ಸೆಷನ್ನಲ್ಲಿ ಅವರು ಭಾರತದ ವಿರುದ್ಧ ಶತಕ ಸಿಡಿಸಿದರು.
![,[object Object], ರೋಹಿತ್ ಶರ್ಮಾ( C), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (WK), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.](https://images.news18.com/kannada/uploads/2023/06/1686156688_Team-India-AP1010-C.jpg?im=Resize,width=904,aspect=fit,type=normal)
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ( C), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (WK), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
Ind vs Aus travis head century against india on icc world test championship final.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm