ಬ್ರೇಕಿಂಗ್ ನ್ಯೂಸ್
27-06-23 02:09 pm Source: News18 Kannada ಕ್ರೀಡೆ
ವೆಸ್ಟ್ ಇಂಡೀಸ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ 16 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಮುಂಬರುವ ಪ್ರವಾಸಕ್ಕಾಗಿ, ಅನೇಕ ಅನುಭವಿ ಆಟಗಾರರನ್ನು ಭಾರತ ತಂಡದಿಂದ ಕೈ ಬಿಡಲಾಗಿದೆ. ಬದಲಾಗಿ ಅನೇಕ ಯುವ ಆಟಗಾರರಿಗೆ ಅವಕಾಶ ನೀಡಲಾಗಿದೆ.
ಮುಂಬರುವ ಟೆಸ್ಟ್ ಪ್ರವಾಸಕ್ಕೆ ಸೇರ್ಪಡೆಗೊಂಡಿರುವ ಹೊಸ ಆಟಗಾರರಲ್ಲಿ ಯಶಸ್ವಿ ಜೈಸ್ವಾಲ್, ರಿತುರಾಜ್ ಗಾಯಕ್ವಾಡ್ ಮತ್ತು ಮುಖೇಶ್ ಕುಮಾರ್ ಅವರ ಹೆಸರುಗಳು ಪ್ರಮುಖವಾಗಿವೆ. ಈ ಮೂವರು ಆಟಗಾರರ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ.
21 ವರ್ಷದ ಯುವ ಬ್ಯಾಟ್ಸ್ಮನ್ ಯಶಸ್ವಿ ಜೈಸ್ವಾಲ್ ಭಾರತ ತಂಡಕ್ಕಾಗಿ ಇದುವರೆಗೆ ಒಟ್ಟು 15 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ. ಏತನ್ಮಧ್ಯೆ, ಅವರ ಬ್ಯಾಟ್ 26 ಇನ್ನಿಂಗ್ಸ್ಗಳಲ್ಲಿ 80.21 ಸರಾಸರಿಯಲ್ಲಿ 1845 ರನ್ ಗಳಿಸಿದೆ. ಜೈಸ್ವಾಲ್ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಒಂಬತ್ತು ಶತಕ ಮತ್ತು ಎರಡು ಅರ್ಧಶತಕಗಳನ್ನು ಸಿಡಿಸಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ರುತುರಾಜ್ ಗಾಯಕ್ವಾಡ್ ಕೂಡ ಭಾರತೀಯ ಪಡೆಯಲ್ಲಿ ಸೇರ್ಪಡೆಗೊಂಡಿದ್ದಾರೆ. ಗಾಯಕ್ವಾಡ್ ಇದುವರೆಗೆ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಒಟ್ಟು 28 ಪಂದ್ಯಗಳನ್ನು ಆಡಿದ್ದಾರೆ. ಏತನ್ಮಧ್ಯೆ, ಅವರ ಬ್ಯಾಟ್ 47 ಇನ್ನಿಂಗ್ಸ್ಗಳಲ್ಲಿ 42.19 ಸರಾಸರಿಯಲ್ಲಿ 1941 ರನ್ ಗಳಿಸಿದೆ. ಗಾಯಕ್ವಾಡ್ ಇಲ್ಲಿ ಆರು ಶತಕ ಮತ್ತು ಒಂಬತ್ತು ಅರ್ಧಶತಕಗಳನ್ನು ದಾಖಲಿಸಿದ್ದಾರೆ.
ಟೆಸ್ಟ್ ಸರಣಿಯ ತಂಡದಲ್ಲಿ ಬಿಹಾರದ ವೇಗದ ಬೌಲರ್ ಮುಖೇಶ್ ಕುಮಾರ್ ಕೂಡ ಆಯ್ಕೆಯಾಗಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ ಇದುವರೆಗೆ ಒಟ್ಟು 39 ಪಂದ್ಯಗಳನ್ನು ಆಡಿದ್ದಾರೆ. ಏತನ್ಮಧ್ಯೆ, ಅವರು 70 ಇನ್ನಿಂಗ್ಸ್ಗಳಲ್ಲಿ 21.55 ಸರಾಸರಿಯಲ್ಲಿ 149 ವಿಕೆಟ್ಗಳನ್ನು ಪಡೆದಿದ್ದಾರೆ. ಕುಮಾರ್ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 6 ಬಾರಿ 4 ವಿಕೆಟ್ ಹಾಗೂ 6 ಬಾರಿ 5 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.
ಈ ಮೂವರು ಆಟಗಾರರ ಹೊರತಾಗಿ ಮತ್ತೊಮ್ಮೆ ಇಶಾನ್ ಕಿಶನ್ ಟೆಸ್ಟ್ ಮಾದರಿಗೆ ಟೀಂ ಇಂಡಿಯಾದಲ್ಲಿ ಆಯ್ಕೆಯಾಗಿದ್ದಾರೆ. ಈ ಬಾರಿ ಕೆಂಪು ಚೆಂಡು ಕ್ರಿಕೆಟ್ಗೆ ಪದಾರ್ಪಣೆ ಮಾಡುವ ಅವಕಾಶ ಸಿಗುವ ನಿರೀಕ್ಷೆಯಿದೆ. ಕಿಶನ್ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 48 ಪಂದ್ಯಗಳನ್ನು ಆಡುವಾಗ 82 ಇನ್ನಿಂಗ್ಸ್ಗಳಲ್ಲಿ 38.76 ಸರಾಸರಿಯಲ್ಲಿ 2985 ರನ್ ಗಳಿಸಿದ್ದಾರೆ. ಏತನ್ಮಧ್ಯೆ, ಅವರ ಬ್ಯಾಟ್ನಿಂದ ಆರು ಶತಕಗಳು ಮತ್ತು 16 ಅರ್ಧಶತಕಗಳು ಹೊರಬಂದಿದೆ.
ಇನ್ನು, ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 2 ಪಮದ್ಯಗಳ ಟೆಸ್ಟ್ ಸರಣಿಯು ಮುಂದಿನ ತಿಂಗಳು ಜುಲೈ 12ರಿಂದ ಆರಂಭವಾಗಲಿದೆ. ಟೆಸ್ಟ್ ಸರರಣಿ ಬಳಿಕ 3 ಏಕದಿನ ಮತ್ತು 5 ಟಿ20 ಸರಣಿ ನಡೆಯಲಿದೆ.
Ind vs Wi first class performance by team India young players skb.
01-09-25 06:59 pm
Bangalore Correspondent
ಎಸ್.ಐ.ಟಿ ರಚನೆ ಮಾಡಿದಾಗಲೇ ಬಿಜೆಪಿ ಯಾಕೆ ವಿರೋಧ ಮಾಡ...
01-09-25 05:03 pm
Yadagiri, Raid, Heart Attack: ಯಾದಗಿರಿ ; ಇಸ್ಪೀ...
01-09-25 04:55 pm
Sujatha Bhat, Latest News, Dharmasthala: ಚಿನ್...
01-09-25 01:25 pm
R. Ashoka: ಸೆ.01 ಧರ್ಮಸ್ಥಳ ಚಲೋ ಕಾರ್ಯಕ್ರಮಕ್ಕೆ ಎ...
31-08-25 07:17 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
01-09-25 05:05 pm
Mangalore Correspondent
Mangalore Pothole, Accident, Video Viral: ಕೆಪ...
31-08-25 10:34 pm
Ullal, Mangalore, UT Khader: ಹಡಿಲು ಬಿದ್ದ ಗದ್ದ...
31-08-25 08:20 pm
“Mangaluru’s Biggest Heart Care Offer: Indian...
31-08-25 01:56 pm
Udupi, Diksha Sets New World Record, Bharatan...
31-08-25 12:49 pm
01-09-25 03:07 pm
Udupi Correspondent
Mangalore Crime, Konaje Police, Raid, Liquor:...
01-09-25 01:58 pm
Mangalore Crime, Falnir Attack: ಪೊಲೀಸರಿಗೆ ಭಾರ...
31-08-25 10:55 pm
Mangalore Court, Sexual Abuse: ಮೂರೂವರೆ ವರ್ಷದ...
30-08-25 03:22 pm
Santosh Shetty Murder, Karkala, Pune: ಹಣಕ್ಕಾಗ...
27-08-25 10:23 pm