ಬ್ರೇಕಿಂಗ್ ನ್ಯೂಸ್
27-06-23 02:09 pm Source: News18 Kannada ಕ್ರೀಡೆ
ವೆಸ್ಟ್ ಇಂಡೀಸ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ 16 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಮುಂಬರುವ ಪ್ರವಾಸಕ್ಕಾಗಿ, ಅನೇಕ ಅನುಭವಿ ಆಟಗಾರರನ್ನು ಭಾರತ ತಂಡದಿಂದ ಕೈ ಬಿಡಲಾಗಿದೆ. ಬದಲಾಗಿ ಅನೇಕ ಯುವ ಆಟಗಾರರಿಗೆ ಅವಕಾಶ ನೀಡಲಾಗಿದೆ.
ಮುಂಬರುವ ಟೆಸ್ಟ್ ಪ್ರವಾಸಕ್ಕೆ ಸೇರ್ಪಡೆಗೊಂಡಿರುವ ಹೊಸ ಆಟಗಾರರಲ್ಲಿ ಯಶಸ್ವಿ ಜೈಸ್ವಾಲ್, ರಿತುರಾಜ್ ಗಾಯಕ್ವಾಡ್ ಮತ್ತು ಮುಖೇಶ್ ಕುಮಾರ್ ಅವರ ಹೆಸರುಗಳು ಪ್ರಮುಖವಾಗಿವೆ. ಈ ಮೂವರು ಆಟಗಾರರ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ.

21 ವರ್ಷದ ಯುವ ಬ್ಯಾಟ್ಸ್ಮನ್ ಯಶಸ್ವಿ ಜೈಸ್ವಾಲ್ ಭಾರತ ತಂಡಕ್ಕಾಗಿ ಇದುವರೆಗೆ ಒಟ್ಟು 15 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ. ಏತನ್ಮಧ್ಯೆ, ಅವರ ಬ್ಯಾಟ್ 26 ಇನ್ನಿಂಗ್ಸ್ಗಳಲ್ಲಿ 80.21 ಸರಾಸರಿಯಲ್ಲಿ 1845 ರನ್ ಗಳಿಸಿದೆ. ಜೈಸ್ವಾಲ್ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಒಂಬತ್ತು ಶತಕ ಮತ್ತು ಎರಡು ಅರ್ಧಶತಕಗಳನ್ನು ಸಿಡಿಸಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ರುತುರಾಜ್ ಗಾಯಕ್ವಾಡ್ ಕೂಡ ಭಾರತೀಯ ಪಡೆಯಲ್ಲಿ ಸೇರ್ಪಡೆಗೊಂಡಿದ್ದಾರೆ. ಗಾಯಕ್ವಾಡ್ ಇದುವರೆಗೆ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಒಟ್ಟು 28 ಪಂದ್ಯಗಳನ್ನು ಆಡಿದ್ದಾರೆ. ಏತನ್ಮಧ್ಯೆ, ಅವರ ಬ್ಯಾಟ್ 47 ಇನ್ನಿಂಗ್ಸ್ಗಳಲ್ಲಿ 42.19 ಸರಾಸರಿಯಲ್ಲಿ 1941 ರನ್ ಗಳಿಸಿದೆ. ಗಾಯಕ್ವಾಡ್ ಇಲ್ಲಿ ಆರು ಶತಕ ಮತ್ತು ಒಂಬತ್ತು ಅರ್ಧಶತಕಗಳನ್ನು ದಾಖಲಿಸಿದ್ದಾರೆ.
ಟೆಸ್ಟ್ ಸರಣಿಯ ತಂಡದಲ್ಲಿ ಬಿಹಾರದ ವೇಗದ ಬೌಲರ್ ಮುಖೇಶ್ ಕುಮಾರ್ ಕೂಡ ಆಯ್ಕೆಯಾಗಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ ಇದುವರೆಗೆ ಒಟ್ಟು 39 ಪಂದ್ಯಗಳನ್ನು ಆಡಿದ್ದಾರೆ. ಏತನ್ಮಧ್ಯೆ, ಅವರು 70 ಇನ್ನಿಂಗ್ಸ್ಗಳಲ್ಲಿ 21.55 ಸರಾಸರಿಯಲ್ಲಿ 149 ವಿಕೆಟ್ಗಳನ್ನು ಪಡೆದಿದ್ದಾರೆ. ಕುಮಾರ್ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 6 ಬಾರಿ 4 ವಿಕೆಟ್ ಹಾಗೂ 6 ಬಾರಿ 5 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

ಈ ಮೂವರು ಆಟಗಾರರ ಹೊರತಾಗಿ ಮತ್ತೊಮ್ಮೆ ಇಶಾನ್ ಕಿಶನ್ ಟೆಸ್ಟ್ ಮಾದರಿಗೆ ಟೀಂ ಇಂಡಿಯಾದಲ್ಲಿ ಆಯ್ಕೆಯಾಗಿದ್ದಾರೆ. ಈ ಬಾರಿ ಕೆಂಪು ಚೆಂಡು ಕ್ರಿಕೆಟ್ಗೆ ಪದಾರ್ಪಣೆ ಮಾಡುವ ಅವಕಾಶ ಸಿಗುವ ನಿರೀಕ್ಷೆಯಿದೆ. ಕಿಶನ್ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 48 ಪಂದ್ಯಗಳನ್ನು ಆಡುವಾಗ 82 ಇನ್ನಿಂಗ್ಸ್ಗಳಲ್ಲಿ 38.76 ಸರಾಸರಿಯಲ್ಲಿ 2985 ರನ್ ಗಳಿಸಿದ್ದಾರೆ. ಏತನ್ಮಧ್ಯೆ, ಅವರ ಬ್ಯಾಟ್ನಿಂದ ಆರು ಶತಕಗಳು ಮತ್ತು 16 ಅರ್ಧಶತಕಗಳು ಹೊರಬಂದಿದೆ.
ಇನ್ನು, ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 2 ಪಮದ್ಯಗಳ ಟೆಸ್ಟ್ ಸರಣಿಯು ಮುಂದಿನ ತಿಂಗಳು ಜುಲೈ 12ರಿಂದ ಆರಂಭವಾಗಲಿದೆ. ಟೆಸ್ಟ್ ಸರರಣಿ ಬಳಿಕ 3 ಏಕದಿನ ಮತ್ತು 5 ಟಿ20 ಸರಣಿ ನಡೆಯಲಿದೆ.
Ind vs Wi first class performance by team India young players skb.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 08:30 pm
HK News Desk
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm