ಬ್ರೇಕಿಂಗ್ ನ್ಯೂಸ್
06-07-23 01:43 pm Source: News18 Kannada ಕ್ರೀಡೆ
ಕಳೆದ ವರ್ಷ ಟೀಂ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ರಿಷಭ್ ಪಂತ್ ರೂರ್ಕಿ ಬಳಿ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಅವರು ಗಾಯದಿಂದ ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ. ಏತನ್ಮಧ್ಯೆ, ಇದೇ ರೀತಿಯ ಅಪಘಾತದಲ್ಲಿ ಮತ್ತೊಬ್ಬ ಭಾರತೀಯ ಕ್ರಿಕೆಟಿಗ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಈ ಕ್ರಿಕೆಟಿಗ ಬೇರೆ ಯಾರೂ ಅಲ್ಲ ಮಾಜಿ ವೇಗಿ ಪ್ರವೀಣ್ ಕುಮಾರ್.
ಮಂಗಳವಾರ ತಡರಾತ್ರಿ ಮೀರತ್ನ ಆಯುಕ್ತರ ನಿವಾಸದ ಬಳಿ ವೇಗವಾಗಿ ಬಂದ ಕ್ಯಾಂಟರ್ ಅವರ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಪ್ರವೀಣ್ ಕುಮಾರ್ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಅಪಘಾತದ ಮಾಹಿತಿ ತಿಳಿದ ತಕ್ಷಣ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿ ಚಾಲಕನನ್ನು ಬಂಧಿಸಿದ್ದಾರೆ. ಅಪಘಾತದ ನಂತರ ಅವರ ಮಗ ಕೂಡ ಕಾರಿನಲ್ಲಿ ಪ್ರವೀಣ್ ಕುಮಾರ್ ಜೊತೆಗಿದ್ದರು ಎಂದು ತಿಳಿದಿಬಂದಿದೆ. ಅದೃಷ್ಟವಶಾತ್ ಇಬ್ಬರಿಗೂ ಗಂಭೀರ ಗಾಯಗಳಾಗಿಲ್ಲ. ವಾಸ್ತವವಾಗಿ ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ತಮ್ಮ ಕಾರಿನಲ್ಲಿ ಪಾಂಡವನಗರದಿಂದ ಬರುತ್ತಿದ್ದರು. ಅಷ್ಟರಲ್ಲಿ ಕಮಿಷನರ್ ನಿವಾಸದ ಬಳಿ ಬಂದ ಕೂಡಲೇ ಎದುರಿನಿಂದ ವೇಗವಾಗಿ ಬಂದ ಕ್ಯಾಂಟರ್ ಅವರ ಕಾರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ.



ಇದರಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ಕ್ಯಾಂಟರ್ ಚಾಲಕ ಸಿಕ್ಕಿಬಿದ್ದಿದ್ದು, ಪ್ರವೀಣ್ ಕುಮಾರ್ ಮತ್ತು ಅವರ ಮಗ ಸುರಕ್ಷಿತವಾಗಿರುವುದು ಒಳ್ಳೆಯದು ಎಂದು ನಗರ ಎಸ್ಪಿ ಪಿಯೂಷ್ ಕುಮಾರ್ ತಿಳಿಸಿದ್ದಾರೆ. ಪ್ರವೀಣ್ ಕುಮಾರ್ ಅಪಘಾತಕ್ಕೆ ಒಳಗಾಗಿರುವುದು ಇದೇ ಮೊದಲಲ್ಲ. 2007ರಲ್ಲಿ ಕೂಡ ವಿದೇಶಿ ಪ್ರವಾಸ ಮುಗಿಸಿ ಮನೆಗೆ ತೆರಳುವಾಗ ಅಪಘಾತಕ್ಕೆ ಒಳಗಾಗಿದ್ದರು. ಭಾರತದ ಪರ 36 ವರ್ಷದ ಪ್ರವೀಣ್ ಕುಮಾರ್ 6 ಟೆಸ್ಟ್ ಪಂದ್ಯಗಳಲ್ಲಿ 27 ವಿಕೆಟ್, 68 ODIಗಳಲ್ಲಿ 77 ವಿಕೆಟ್ ಪಡೆದಿದ್ದಾರೆ. ಗಾಯದ ಕಾರಣ ಪ್ರವೀಣ್ 2011ರ ಏಕದಿನ ವಿಶ್ವಕಪ್ ಆಡಲಾಗಲಿಲ್ಲ.
Former Indian Pacer Praveen Kumar Car Accident in Meerut.
22-01-26 10:27 pm
Bangalore Correspondent
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
22-01-26 10:16 pm
HK News Desk
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 10:12 pm
Mangalore Correspondent
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm