ಬ್ರೇಕಿಂಗ್ ನ್ಯೂಸ್
06-07-23 01:43 pm Source: News18 Kannada ಕ್ರೀಡೆ
ಕಳೆದ ವರ್ಷ ಟೀಂ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ರಿಷಭ್ ಪಂತ್ ರೂರ್ಕಿ ಬಳಿ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಅವರು ಗಾಯದಿಂದ ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ. ಏತನ್ಮಧ್ಯೆ, ಇದೇ ರೀತಿಯ ಅಪಘಾತದಲ್ಲಿ ಮತ್ತೊಬ್ಬ ಭಾರತೀಯ ಕ್ರಿಕೆಟಿಗ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಈ ಕ್ರಿಕೆಟಿಗ ಬೇರೆ ಯಾರೂ ಅಲ್ಲ ಮಾಜಿ ವೇಗಿ ಪ್ರವೀಣ್ ಕುಮಾರ್.
ಮಂಗಳವಾರ ತಡರಾತ್ರಿ ಮೀರತ್ನ ಆಯುಕ್ತರ ನಿವಾಸದ ಬಳಿ ವೇಗವಾಗಿ ಬಂದ ಕ್ಯಾಂಟರ್ ಅವರ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಪ್ರವೀಣ್ ಕುಮಾರ್ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಅಪಘಾತದ ಮಾಹಿತಿ ತಿಳಿದ ತಕ್ಷಣ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿ ಚಾಲಕನನ್ನು ಬಂಧಿಸಿದ್ದಾರೆ. ಅಪಘಾತದ ನಂತರ ಅವರ ಮಗ ಕೂಡ ಕಾರಿನಲ್ಲಿ ಪ್ರವೀಣ್ ಕುಮಾರ್ ಜೊತೆಗಿದ್ದರು ಎಂದು ತಿಳಿದಿಬಂದಿದೆ. ಅದೃಷ್ಟವಶಾತ್ ಇಬ್ಬರಿಗೂ ಗಂಭೀರ ಗಾಯಗಳಾಗಿಲ್ಲ. ವಾಸ್ತವವಾಗಿ ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ತಮ್ಮ ಕಾರಿನಲ್ಲಿ ಪಾಂಡವನಗರದಿಂದ ಬರುತ್ತಿದ್ದರು. ಅಷ್ಟರಲ್ಲಿ ಕಮಿಷನರ್ ನಿವಾಸದ ಬಳಿ ಬಂದ ಕೂಡಲೇ ಎದುರಿನಿಂದ ವೇಗವಾಗಿ ಬಂದ ಕ್ಯಾಂಟರ್ ಅವರ ಕಾರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ.



ಇದರಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ಕ್ಯಾಂಟರ್ ಚಾಲಕ ಸಿಕ್ಕಿಬಿದ್ದಿದ್ದು, ಪ್ರವೀಣ್ ಕುಮಾರ್ ಮತ್ತು ಅವರ ಮಗ ಸುರಕ್ಷಿತವಾಗಿರುವುದು ಒಳ್ಳೆಯದು ಎಂದು ನಗರ ಎಸ್ಪಿ ಪಿಯೂಷ್ ಕುಮಾರ್ ತಿಳಿಸಿದ್ದಾರೆ. ಪ್ರವೀಣ್ ಕುಮಾರ್ ಅಪಘಾತಕ್ಕೆ ಒಳಗಾಗಿರುವುದು ಇದೇ ಮೊದಲಲ್ಲ. 2007ರಲ್ಲಿ ಕೂಡ ವಿದೇಶಿ ಪ್ರವಾಸ ಮುಗಿಸಿ ಮನೆಗೆ ತೆರಳುವಾಗ ಅಪಘಾತಕ್ಕೆ ಒಳಗಾಗಿದ್ದರು. ಭಾರತದ ಪರ 36 ವರ್ಷದ ಪ್ರವೀಣ್ ಕುಮಾರ್ 6 ಟೆಸ್ಟ್ ಪಂದ್ಯಗಳಲ್ಲಿ 27 ವಿಕೆಟ್, 68 ODIಗಳಲ್ಲಿ 77 ವಿಕೆಟ್ ಪಡೆದಿದ್ದಾರೆ. ಗಾಯದ ಕಾರಣ ಪ್ರವೀಣ್ 2011ರ ಏಕದಿನ ವಿಶ್ವಕಪ್ ಆಡಲಾಗಲಿಲ್ಲ.
Former Indian Pacer Praveen Kumar Car Accident in Meerut.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm