ಬ್ರೇಕಿಂಗ್ ನ್ಯೂಸ್
06-07-23 01:43 pm Source: News18 Kannada ಕ್ರೀಡೆ
ಕಳೆದ ವರ್ಷ ಟೀಂ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ರಿಷಭ್ ಪಂತ್ ರೂರ್ಕಿ ಬಳಿ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಅವರು ಗಾಯದಿಂದ ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ. ಏತನ್ಮಧ್ಯೆ, ಇದೇ ರೀತಿಯ ಅಪಘಾತದಲ್ಲಿ ಮತ್ತೊಬ್ಬ ಭಾರತೀಯ ಕ್ರಿಕೆಟಿಗ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಈ ಕ್ರಿಕೆಟಿಗ ಬೇರೆ ಯಾರೂ ಅಲ್ಲ ಮಾಜಿ ವೇಗಿ ಪ್ರವೀಣ್ ಕುಮಾರ್.
ಮಂಗಳವಾರ ತಡರಾತ್ರಿ ಮೀರತ್ನ ಆಯುಕ್ತರ ನಿವಾಸದ ಬಳಿ ವೇಗವಾಗಿ ಬಂದ ಕ್ಯಾಂಟರ್ ಅವರ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಪ್ರವೀಣ್ ಕುಮಾರ್ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಅಪಘಾತದ ಮಾಹಿತಿ ತಿಳಿದ ತಕ್ಷಣ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿ ಚಾಲಕನನ್ನು ಬಂಧಿಸಿದ್ದಾರೆ. ಅಪಘಾತದ ನಂತರ ಅವರ ಮಗ ಕೂಡ ಕಾರಿನಲ್ಲಿ ಪ್ರವೀಣ್ ಕುಮಾರ್ ಜೊತೆಗಿದ್ದರು ಎಂದು ತಿಳಿದಿಬಂದಿದೆ. ಅದೃಷ್ಟವಶಾತ್ ಇಬ್ಬರಿಗೂ ಗಂಭೀರ ಗಾಯಗಳಾಗಿಲ್ಲ. ವಾಸ್ತವವಾಗಿ ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ತಮ್ಮ ಕಾರಿನಲ್ಲಿ ಪಾಂಡವನಗರದಿಂದ ಬರುತ್ತಿದ್ದರು. ಅಷ್ಟರಲ್ಲಿ ಕಮಿಷನರ್ ನಿವಾಸದ ಬಳಿ ಬಂದ ಕೂಡಲೇ ಎದುರಿನಿಂದ ವೇಗವಾಗಿ ಬಂದ ಕ್ಯಾಂಟರ್ ಅವರ ಕಾರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ.



ಇದರಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ಕ್ಯಾಂಟರ್ ಚಾಲಕ ಸಿಕ್ಕಿಬಿದ್ದಿದ್ದು, ಪ್ರವೀಣ್ ಕುಮಾರ್ ಮತ್ತು ಅವರ ಮಗ ಸುರಕ್ಷಿತವಾಗಿರುವುದು ಒಳ್ಳೆಯದು ಎಂದು ನಗರ ಎಸ್ಪಿ ಪಿಯೂಷ್ ಕುಮಾರ್ ತಿಳಿಸಿದ್ದಾರೆ. ಪ್ರವೀಣ್ ಕುಮಾರ್ ಅಪಘಾತಕ್ಕೆ ಒಳಗಾಗಿರುವುದು ಇದೇ ಮೊದಲಲ್ಲ. 2007ರಲ್ಲಿ ಕೂಡ ವಿದೇಶಿ ಪ್ರವಾಸ ಮುಗಿಸಿ ಮನೆಗೆ ತೆರಳುವಾಗ ಅಪಘಾತಕ್ಕೆ ಒಳಗಾಗಿದ್ದರು. ಭಾರತದ ಪರ 36 ವರ್ಷದ ಪ್ರವೀಣ್ ಕುಮಾರ್ 6 ಟೆಸ್ಟ್ ಪಂದ್ಯಗಳಲ್ಲಿ 27 ವಿಕೆಟ್, 68 ODIಗಳಲ್ಲಿ 77 ವಿಕೆಟ್ ಪಡೆದಿದ್ದಾರೆ. ಗಾಯದ ಕಾರಣ ಪ್ರವೀಣ್ 2011ರ ಏಕದಿನ ವಿಶ್ವಕಪ್ ಆಡಲಾಗಲಿಲ್ಲ.
Former Indian Pacer Praveen Kumar Car Accident in Meerut.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm