ಬ್ರೇಕಿಂಗ್ ನ್ಯೂಸ್
08-07-23 01:39 pm Source: News18 Kannada ಕ್ರೀಡೆ
ಕ್ರಿಕೆಟ್ನಲ್ಲಿ ವೃತ್ತಿಜೀವನ ಆರಂಭಿಸಿದಾಗಿನಿಂದಲೂ ಅನೇಕ ಸವಾಲುಗಳನ್ನು ಮೀರಿ ಬಂದಿದ್ದ ತಿಲಕ್ ವರ್ಮಾಗೆ ಪ್ರಸ್ತುತ ಸುವರ್ಣಾವಕಾಶವೊಂದು ಅರಸಿ ಬಂದಿದೆ. ಸೆಲೆಕ್ಷನ್ ಕಮಿಟಿಯು ಟೀಂ ಇಂಡಿಯಾಕ್ಕೆ ತಿಲಕ್ ವರ್ಮಾ ಅವರನ್ನು ಆಯ್ಕೆ ಮಾಡಿದೆ. ಬುಧವಾರ ಸಂಜೆ, ವರ್ಮಾ ಆಯ್ಕೆಯಾದ ಬಗ್ಗೆ ಸ್ನೇಹಿತರೊಬ್ಬರು ಕರೆ ಮಾಡಿ ತಿಳಿಸಿದ್ದರು.
ನಂತರ ಟಿ 20 ತಂಡಕ್ಕೆ ಆಯ್ಕೆಯಾದ ಸಂತೋಷವನ್ನು ವರ್ಮಾ ತನ್ನ ಪೋಷಕರಿಗೆ ವಿಡಿಯೋ ಕಾಲ್ ಮೂಲಕ ತಿಳಿಸಿದ್ದಾರೆ. ತಂದೆ ತಾಯಿಯ ಖುಷಿಗೂ ಪಾರವಿಲ್ಲದೇ ಫೋನ್ನಲ್ಲೇ ಆನಂದಬಾಷ್ಪ ಸುರಿಸಿದರು. ನನ್ನ ತಂದೆ-ತಾಯಿ, ತರಬೇತುದಾರ ಎಲ್ಲರೂ ಖುಷಿಗೆ ಕಣ್ಣೀರು ಹಾಕಿ ಅಭಿನಂದನೆ ತಿಳಿಸಿದರು ಎಂದು ವರ್ಮಾ ಹೇಳಿದರು.
ಮುಂಬೈ ಇಂಡಿಯನ್ಸ್ ಪರ ಮಿಂಚಿದ್ದ ಬ್ಯಾಟರ್
ಮುಂಬೈ ಇಂಡಿಯನ್ಸ್ ಪರ ಭರ್ಜರಿ ಬ್ಯಾಟಿಂಗ್ ಬೀಸಿದ ಇವರು ಪಂದ್ಯವೊಂದರಲ್ಲಿ 46 ಎಸೆತಗಳಲ್ಲಿ ಅಜೇಯ 84 ರನ್ ಗಳಿಸಿದ್ದರು. ಐಪಿಎಲ್ನಲ್ಲಿನ ಪ್ರದರ್ಶನ ನೋಡಿ ಭಾರತ ಟೀಂಗೆ ಯಾವಾಗ ಇವರ ಎಂಟ್ರಿ ಆಗುತ್ತದೆ ಎಂದು ಹಲವರು ಕಾತುರದಿಂದ ಕಾಯುತ್ತಿದ್ದರು.
ಆಯ್ಕೆ ಬಗ್ಗೆ ಮಾತನಾಡಿದ ವರ್ಮಾ "ನಾನು ನನ್ನ ಕೆಲಸದ ಬಗ್ಗೆ ಅಷ್ಟೇ ಯೋಚಿಸುತ್ತಿದ್ದೆ ವಿನಃ ಬೇರೆ ಯಾವುದರ ಬಗ್ಗೆಯೂ ಯೋಚಿಸುತ್ತಿರಲಿಲ್ಲ. ನನಗೆ ಯಾವ ಪಂದ್ಯ ಸಿಗಬಹುದು ಎಂದು ಯೋಚಿಸುತ್ತಿದ್ದೆ ಮತ್ತು ಅದರ ಮೇಲೆ ಕೇಂದ್ರೀಕರಿಸಬೇಕು ಎಂದು ಅಭ್ಯಾಸ ಮಾಡುತ್ತಿದ್ದೆ.
ಆದರೆ ಈಗ ಬಂದ ಅವಕಾಶ ನನಗೆ ಸಾಕಷ್ಟು ಖುಷಿ ನೀಡಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ವರ್ಮಾ ಬಾಲ್ಯದ ಸ್ನೇಹಿತರು ಮತ್ತು ತರಬೇತುದಾರರಿಗೆ ಧನ್ಯವಾದ ವ್ಯಕ್ತಪಡಿಸಿದರು.
ತಿಲಕ್ ಆಟದ ಜವಾಬ್ದಾರಿ ವಹಿಸಿಕೊಂಡಿದ್ದ ಕೋಚ್
ವರ್ಮಾ ತಂದೆ, ನಮ್ಮೂರಿ ನಾಗರಾಜು ಎಲೆಕ್ಟ್ರಿಷಿಯನ್ ಆಗಿದ್ದು, ತಾಯಿ ಗಾಯತ್ರಿ ದೇವಿ ಗೃಹಿಣಿ. ಮೊದಲಿಗೆ ತಂದೆಗೆ ವರ್ಮಾ ಕ್ರಿಕೆಟ್ ಆಡುವುದು ಇಷ್ಟ ಇರಲಿಲ್ಲ. ಆರ್ಥಿಕ ಸ್ಥಿತಿಯ ಕಾರಣವೂ ವರ್ಮಾ ಅವರನ್ನು ತರಬೇತಿಗೆ ಹಾಕಿರಲಿಲ್ಲ. ಆದರೆ ನಂತರ ವರ್ಮಾ ಅವರ ಸಾಮರ್ಥ್ಯ ನೋಡಿ ಸಲಾಮ್ ಬಯಾಶ್ ಎಲ್ಲಾ ವೆಚ್ಚಗಳನ್ನು ಭರಿಸಿ ಆತನಿಗೆ ತರಬೇತಿ ನೀಡಿದರು.
ಭಾರತ ತಂಡಕ್ಕೆ ಆಯ್ಕೆಯಾಗುವುದೇ ಒಂದು ದೊಡ್ಡ ವಿಷಯ. ಈ ನನ್ನ ಜರ್ನಿಯಲ್ಲಿ ನನ್ನೊಂದಿಗೆ ಇದ್ದ ಎಲ್ಲರ ಜೊತೆ ವಿಷಯ ಹಂಚಿಕೊಂಡೆ ಎಂದು ವರ್ಮಾ ಹೇಳಿದರು. ಭಾರತದ T20 ತಂಡವು ಅಗ್ರಸ್ಥಾನದಲ್ಲಿ ನೆಲೆಸಿರುವ ಬ್ಯಾಟಿಂಗ್ ಲೈನ್-ಅಪ್ ಅನ್ನು ಹೊಂದಿರುವುದರಿಂದ, ವರ್ಮಾ ಅವರು ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ಗಾಗಿ ಮಾಡಿದಂತೆಯೇ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬೇಕಾಗಬಹುದು.
"ಪೋಲಾರ್ಡ್ ಅವರಿಂದ ಸಾಕಷ್ಟು ಕಲಿತಿದ್ದೇನೆ"
ಮುಂಬೈ ಫ್ರಾಂಚೈಸಿಯಲ್ಲಿ ಬ್ಯಾಟಿಂಗ್ ತರಬೇತುದಾರರಾಗಿದ್ದ ಕೀರಾನ್ ಪೊಲಾರ್ಡ್ ಅವರು ನನಗೆ ಉತ್ತಮ ಸಲಹೆಗಳನ್ನು ನೀಡಿದ್ದಾರೆ. ಯಾವುದೇ ಪರಿಸ್ಥಿತಿಯಲ್ಲಿ ಶಾಂತವಾಗಿರಿ ಮತ್ತು ಮುಂದಿನ ಚೆಂಡಿನ ಬಗ್ಗೆ ಮಾತ್ರ ಯೋಚಿಸಿ ಎಂದು ಅವರು ಹೇಳುತ್ತಿದ್ದರು. ಅವರ ಈ ಸಲಹೆ ನನಗೆ ಸಾಕಷ್ಟು ಧೈರ್ಯ ನೀಡುತ್ತಿತ್ತು ಎಂದು ಪೊಲಾರ್ಡ್ಗೆ ಧನ್ಯವಾದ ಹೇಳಿದರು.
"ದಿಗ್ಗಜರ ಸಲಹೆ ನನ್ನನ್ನು ಇಲ್ಲಿಗೆ ಕರೆ ತಂದಿದೆ"
ವರ್ಮಾ ಅವರು ಸಚಿನ್ ತೆಂಡೂಲ್ಕರ್, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯಂತಹ ಲೆಜೆಂಡರಿ ಆಟಗಾರರಿಂದಲೂ ನಾನು ಸಲಹೆ ಪಡೆದಿದ್ದೇನೆ ಇದು ನನಗೆ ಆಡಲು ಮತ್ತಷ್ಟು ಸ್ಪೂರ್ತಿ ಎಂದಿದ್ದಾರೆ.
ಡ್ರೆಸ್ಸಿಂಗ್ ರೂಮ್ನಲ್ಲಿ ಸಚಿನ್ ತೆಂಡೂಲ್ಕರ್, ರೋಹಿತ್ ಶರ್ಮಾ ಎಲ್ಲರೂ ಆಟದ ಬಗ್ಗೆ ಹೇಳುತ್ತಿದ್ದರು. ಅವರುಸಲಹೆಗಳು ನನಗೆ ತುಂಬಾ ಅಮೂಲ್ಯವಾಗಿವೆ ಮತ್ತು ಭಾರತ ತಂಡಕ್ಕೆ ಆಯ್ಕೆ ಆಗಲು ಸಹಾಯ ಮಾಡಿವೆ ಎಂದು ವರ್ಮಾ ಹೇಳಿದರು. ದುಲೀಪ್ ಟ್ರೋಫಿ, 2020ರ ಅಂಡರ್-19 ವಿಶ್ವಕಪ್, ಐಪಿಎಲ್ನಲ್ಲಿ ಅಬ್ಬರಿಸಿರುವ ತಿಲಕ್ ವರ್ಮಾ ಈಗ ಅಧಿಕೃತವಾಗಿ ಭಾರತದ ಪರ ಬ್ಯಾಟ್ ಬೀಸಲಿದ್ದಾರೆ.
Tilak Varma believes the advise given by Tendulkar Kohli and Pollard will help his India Stint.
17-10-25 08:39 pm
HK News Desk
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
17-10-25 05:25 pm
HK News Desk
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
17-10-25 09:36 pm
Mangalore Correspondent
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
17-10-25 03:27 pm
Bangalore Correspondent
Vitla Honeytrap case, Police, Mangalore: ಬಶೀರ...
17-10-25 03:23 pm
ಆತ್ಮಶಕ್ತಿ ಬೆನ್ನಲ್ಲೇ ಒಡಿಯೂರು ಸಹಕಾರಿ ಬ್ಯಾಂಕಿಗೂ...
17-10-25 11:56 am
ಕೆಪಿಸಿಸಿಯಲ್ಲಿ ಕೆಲಸ ಮಾಡುತ್ತಿದ್ದೇನೆಂದು ಹೇಳಿ ಹಲವ...
17-10-25 11:53 am
ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್...
15-10-25 04:51 pm