ಬ್ರೇಕಿಂಗ್ ನ್ಯೂಸ್
13-07-23 01:42 pm Source: News18 Kannada ಕ್ರೀಡೆ
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಬುಧವಾರ ಆರಂಭವಾಗಿದೆ. ಈ ಪಂದ್ಯದಲ್ಲಿ ಆತಿಥೇಯ ತಂಡದ ನಾಯಕ ಕ್ರೇಗ್ ಬ್ರಾತ್ವೈಟ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ನ ಆರಂಭಿಕ ಜೋಡಿ ಮೊದಲ 10 ಓವರ್ಗಳಲ್ಲಿ ಎಚ್ಚರಿಕೆಯಿಂದ ಬ್ಯಾಟಿಂಗ್ ಮಾಡಿತ್ತು. ಆದರೆ ನಾಯಕ ಬ್ರೈತ್ವೈಟ್ ಜೊತೆಗೂಡಿ ತೇಜ್ನಾರಾಯಣ್ ಚಂದ್ರಪಾಲ್ ವಿಕೆಟ್ ಉಡಾಯಿಸಿದರು.
ಬಹುಬೇಗನೆ ನಾಯಕ ರೋಹಿತ್ ಶರ್ಮಾ ಸ್ಪಿನ್ನರ್ ಆರ್ಅಶ್ವಿನ್ ಕೈಗೆ ಚೆಂಡನ್ನು ನೀಡಿರು. ಅಶ್ವಿನ್ ತಮ್ಮ ಸ್ಪಿನ್ ಮೋಡಿಯಿಂದ ಭಾರತಕ್ಕೆ ಮೊದಲ ಯಶಸ್ಸು ತಂದುಕೊಟ್ಟರು. ಭಾರತೀಯ ದೈತ್ಯ ಸ್ಪಿನ್ನ ಬಲೆಗೆ ತೇಜ್ನಾರಾಯಣ ಬಲೆಗೆ ಬಿದ್ದರು. ತೇಜ್ 12 ರನ್ ಗಳಿಸಿದ್ದಾಗ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿಕೊಂಡರು. ಭಾರತ ತಂಡದ ಅನುಭವಿ ಸ್ಪಿನ್ನರ್ ಈ ಪಂದ್ಯದಲ್ಲಿ ಮೊದಲ ವಿಕೆಟ್ ಪಡೆಯುವ ಮೂಲಕ ವಿಶೇಷ ಸಾಧನೆ ಮಾಡಿದರು. ಅವರು ಅಂತಾರಾಷ್ಟ್ರೀಯ ತಂಡದಲ್ಲಿ ಆಡಿದ ತಂದೆ ಮತ್ತು ಮಗನ ವಿಕೆಟ್ ಪಡೆದ ಮೊದಲ ಭಾರತೀಯರಾದರು. ಇದಕ್ಕೂ ಮುನ್ನ ಅಶ್ವಿನ್ ಟೆಸ್ಟ್ ಪಂದ್ಯದಲ್ಲಿ ಶಿವನಾರಾಯಣ ಚಂದ್ರಪಾಲ್ ಅವರನ್ನು ಔಟ್ ಮಾಡಿದ್ದರು.


2011ರಲ್ಲಿ ತಂದೆ ಶಿವನಾರಾಯಣ್ ಚಂದ್ರಪಾಲ್ ವಿಕೆಟ್ ಪಡೆದಿದ್ದ ಆರ್ ಅಶ್ವಿನ್, ಡೊಮಿನಿಕಾ ಟೆಸ್ಟ್ನಲ್ಲಿ ಪುತ್ರ ತೇಜ್ನಾರಾಯಣ್ ಅವರನ್ನು ಔಟ್ ಮಾಡುವ ಮೂಲಕ ಇತಿಹಾಸ ಸೃಷ್ಟಿಸಿದ್ದರು. ಅಶ್ವಿನ್ 2011ರ ಸರಣಿಯಲ್ಲಿ ದೆಹಲಿ ಮತ್ತು ಕೋಲ್ಕತ್ತಾ ಟೆಸ್ಟ್ ಪಂದ್ಯಗಳಲ್ಲಿ ತೇಜ್ ತಂದೆ ತಂದೆ ಚಂದ್ರಪಾಲ್ ಅವರ ವಿಕೆಟ್ ಪಡೆದಿದ್ದರು 2011 ರಲ್ಲಿ, ಶಿವನಾರಾಯಣ್ ಚಂದ್ರಪಾಲ್ ದೆಹಲಿ ಟೆಸ್ಟ್ ಪಂದ್ಯದಲ್ಲಿ 47 ರನ್ಗಳಿಗೆ ಅಶ್ವಿನ್ ಬೌಲಿಂಗ್ನಲ್ಲಿ ಎಲ್ಬಿಡಬ್ಲ್ಯೂ ಆಗಿದ್ದರು. ಕೋಲ್ಕತ್ತಾ ಟೆಸ್ಟ್ ಪಂದ್ಯದಲ್ಲಿ ಅವರು 2 ರನ್ಗಳಿಗೆ ವಿಕೆಟ್ನ ವಿಕೆಟ್ ಒಪ್ಪಿಸಿದ್ದರು. ಎರಡೂ ಬಾರಿ ಅಶ್ವಿನ್ ಅವರನ್ನು ಎಲ್ಬಿ ಬಲೆಗೆ ಬೀಳಿಸಿದ್ದರು. ಇದೀಗ ಅವರ ಮಗ ಮೊದಲ ಪಂದ್ಯದಲ್ಲೇ ಕ್ಲೀನ್ ಬೌಲ್ಡ್ ಆಗಿದ್ದಾರೆ
ಪ್ರಸ್ತುತ ವೆಸ್ಟ್ ಇಂಡೀಸ್ 46 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 105 ರನ್ಗಳಿಸಿದೆ. ಅಶ್ವಿನ್ ಹಾಗೂ ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದರೆ, ಶಾರ್ದೂಲ್ ಠಾಕೂರ್ ಒಂದು ವಿಕೆಟ್ ಪಡೆದಿದ್ದಾರೆ.
Cricket India vs West Indies 1st Test live score r Ashwin becomes 1st Indian Bowler to take Wicket of Father and Son in Test.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm