ಬ್ರೇಕಿಂಗ್ ನ್ಯೂಸ್
13-07-23 01:42 pm Source: News18 Kannada ಕ್ರೀಡೆ
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಬುಧವಾರ ಆರಂಭವಾಗಿದೆ. ಈ ಪಂದ್ಯದಲ್ಲಿ ಆತಿಥೇಯ ತಂಡದ ನಾಯಕ ಕ್ರೇಗ್ ಬ್ರಾತ್ವೈಟ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ನ ಆರಂಭಿಕ ಜೋಡಿ ಮೊದಲ 10 ಓವರ್ಗಳಲ್ಲಿ ಎಚ್ಚರಿಕೆಯಿಂದ ಬ್ಯಾಟಿಂಗ್ ಮಾಡಿತ್ತು. ಆದರೆ ನಾಯಕ ಬ್ರೈತ್ವೈಟ್ ಜೊತೆಗೂಡಿ ತೇಜ್ನಾರಾಯಣ್ ಚಂದ್ರಪಾಲ್ ವಿಕೆಟ್ ಉಡಾಯಿಸಿದರು.
ಬಹುಬೇಗನೆ ನಾಯಕ ರೋಹಿತ್ ಶರ್ಮಾ ಸ್ಪಿನ್ನರ್ ಆರ್ಅಶ್ವಿನ್ ಕೈಗೆ ಚೆಂಡನ್ನು ನೀಡಿರು. ಅಶ್ವಿನ್ ತಮ್ಮ ಸ್ಪಿನ್ ಮೋಡಿಯಿಂದ ಭಾರತಕ್ಕೆ ಮೊದಲ ಯಶಸ್ಸು ತಂದುಕೊಟ್ಟರು. ಭಾರತೀಯ ದೈತ್ಯ ಸ್ಪಿನ್ನ ಬಲೆಗೆ ತೇಜ್ನಾರಾಯಣ ಬಲೆಗೆ ಬಿದ್ದರು. ತೇಜ್ 12 ರನ್ ಗಳಿಸಿದ್ದಾಗ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿಕೊಂಡರು. ಭಾರತ ತಂಡದ ಅನುಭವಿ ಸ್ಪಿನ್ನರ್ ಈ ಪಂದ್ಯದಲ್ಲಿ ಮೊದಲ ವಿಕೆಟ್ ಪಡೆಯುವ ಮೂಲಕ ವಿಶೇಷ ಸಾಧನೆ ಮಾಡಿದರು. ಅವರು ಅಂತಾರಾಷ್ಟ್ರೀಯ ತಂಡದಲ್ಲಿ ಆಡಿದ ತಂದೆ ಮತ್ತು ಮಗನ ವಿಕೆಟ್ ಪಡೆದ ಮೊದಲ ಭಾರತೀಯರಾದರು. ಇದಕ್ಕೂ ಮುನ್ನ ಅಶ್ವಿನ್ ಟೆಸ್ಟ್ ಪಂದ್ಯದಲ್ಲಿ ಶಿವನಾರಾಯಣ ಚಂದ್ರಪಾಲ್ ಅವರನ್ನು ಔಟ್ ಮಾಡಿದ್ದರು.


2011ರಲ್ಲಿ ತಂದೆ ಶಿವನಾರಾಯಣ್ ಚಂದ್ರಪಾಲ್ ವಿಕೆಟ್ ಪಡೆದಿದ್ದ ಆರ್ ಅಶ್ವಿನ್, ಡೊಮಿನಿಕಾ ಟೆಸ್ಟ್ನಲ್ಲಿ ಪುತ್ರ ತೇಜ್ನಾರಾಯಣ್ ಅವರನ್ನು ಔಟ್ ಮಾಡುವ ಮೂಲಕ ಇತಿಹಾಸ ಸೃಷ್ಟಿಸಿದ್ದರು. ಅಶ್ವಿನ್ 2011ರ ಸರಣಿಯಲ್ಲಿ ದೆಹಲಿ ಮತ್ತು ಕೋಲ್ಕತ್ತಾ ಟೆಸ್ಟ್ ಪಂದ್ಯಗಳಲ್ಲಿ ತೇಜ್ ತಂದೆ ತಂದೆ ಚಂದ್ರಪಾಲ್ ಅವರ ವಿಕೆಟ್ ಪಡೆದಿದ್ದರು 2011 ರಲ್ಲಿ, ಶಿವನಾರಾಯಣ್ ಚಂದ್ರಪಾಲ್ ದೆಹಲಿ ಟೆಸ್ಟ್ ಪಂದ್ಯದಲ್ಲಿ 47 ರನ್ಗಳಿಗೆ ಅಶ್ವಿನ್ ಬೌಲಿಂಗ್ನಲ್ಲಿ ಎಲ್ಬಿಡಬ್ಲ್ಯೂ ಆಗಿದ್ದರು. ಕೋಲ್ಕತ್ತಾ ಟೆಸ್ಟ್ ಪಂದ್ಯದಲ್ಲಿ ಅವರು 2 ರನ್ಗಳಿಗೆ ವಿಕೆಟ್ನ ವಿಕೆಟ್ ಒಪ್ಪಿಸಿದ್ದರು. ಎರಡೂ ಬಾರಿ ಅಶ್ವಿನ್ ಅವರನ್ನು ಎಲ್ಬಿ ಬಲೆಗೆ ಬೀಳಿಸಿದ್ದರು. ಇದೀಗ ಅವರ ಮಗ ಮೊದಲ ಪಂದ್ಯದಲ್ಲೇ ಕ್ಲೀನ್ ಬೌಲ್ಡ್ ಆಗಿದ್ದಾರೆ
ಪ್ರಸ್ತುತ ವೆಸ್ಟ್ ಇಂಡೀಸ್ 46 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 105 ರನ್ಗಳಿಸಿದೆ. ಅಶ್ವಿನ್ ಹಾಗೂ ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದರೆ, ಶಾರ್ದೂಲ್ ಠಾಕೂರ್ ಒಂದು ವಿಕೆಟ್ ಪಡೆದಿದ್ದಾರೆ.
Cricket India vs West Indies 1st Test live score r Ashwin becomes 1st Indian Bowler to take Wicket of Father and Son in Test.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm