ಬ್ರೇಕಿಂಗ್ ನ್ಯೂಸ್
24-07-23 04:13 pm Source: News18 Kannada ಕ್ರೀಡೆ
ಇಂಡಿಯನ್ ಪ್ರೀಮಿಯರ್ ಲೀಗ್ 2023 (IPL 2023) ನಂತರ ಹಾರ್ದಿಕ್ ಪಾಂಡ್ಯ ಮತ್ತೆ ಮೈದಾನಕ್ಕೆ ಕಾಲಿಡಲಿಲ್ಲ. ಈ ತಿಂಗಳಾಂತ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಆರಂಭವಾಗಲಿರುವ ಏಕದಿನ ಸರಣಿಯೊಂದಿಗೆ ಮತ್ತೆ ಮೈದಾನಕ್ಕಿಳಿಯಲಿದ್ದಾರೆ.
ನಂತರ ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ನಾಯಕನಾಗಿ ಕಾರ್ಯನಿರ್ವಹಿಸಲಿದ್ದಾರೆ. ಇದರ ನಡುವೆ ಬಿಸಿಸಿಐ ಟಿ20ಯಲ್ಲಿ ಹೊಸ ನಾಯಕನ ಹುಡುಕಾಟ ಆರಂಭಿಸಿದೆ.

ಭಾರತ ಆಗಸ್ಟ್ 18 ರಿಂದ 21ರ ವರೆಗೆ ಐರ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಪ್ರವಾಸದ ವೇಳೆ ಭಾರತ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಆದರೆ ಈ ಸರಣಿಗೆ ಈವರಗೆ ತಂಡವನ್ನು ಘೋಷಣೆ ಮಾಡಿಲ್ಲ.
ಆದರೆ ಆ ಸರಣಿಯಿಂದ ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡಲು ಬಿಸಿಸಿಐ ಚಿಂತನೆ ನಡೆಸಿದೆಯಂತೆ. ಜೊತೆಗೆ ಶುಭ್ಮನ್ ಗಿಲ್ಗೂ ವಿಶ್ರಾಂತಿ ನೀಡುವ ಯೋಜನೆ ಇದೆ ಎಂದು ವರದಿಯಾಗಿದೆ.

ಆದರೆ, ಈ ಬಗ್ಗೆ ಬಿಸಿಸಿಐ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಶೀಘ್ರದಲ್ಲೇ ಹಾರ್ದಿಕ್ ಪಾಂಡ್ಯ ಅವರೊಂದಿಗೆ ಈ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಐರ್ಲೆಂಡ್ ಪ್ರವಾಸದಲ್ಲಿ ಪಾಂಡ್ಯ ಭಾಗವಹಿಸುವುದು ಖಚಿತವಾದರೆ ಅವರೇ ನಾಯಕರಾಗಲಿದ್ದಾರೆ.
ಆದರೆ, ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್ ನೊಂದಿಗೆ ಪಾಂಡ್ಯ ಜತೆಗೆ ಹಿರಿಯ ಆಟಗಾರರಿಗೂ ವಿಶ್ರಾಂತಿ ನೀಡಲು ಬಿಸಿಸಿಐ ಚಿಂತನೆ ನಡೆಸಿದೆಯಂತೆ. ಏಷ್ಯನ್ ಗೇಮ್ಸ್ ಗೆ ಆಯ್ಕೆಯಾಗಿರುವ ತಂಡದೊಂದಿಗೆ ಐರ್ಲೆಂಡ್ ಸರಣಿ ಆಡಿಸುವ ಉದ್ದೇಶ ಹೊಂದಿದೆ ಎಂದು ವರದಿಯಾಗಿದೆ.

ಅಂದಹಾಗೆ, ಐರ್ಲೆಂಡ್ ಪ್ರವಾಸದ ವೇಳೆ ರುತುರಾಜ್ ಗಾಯಕ್ವಾಡ್ ಭಾರತ ತಂಡದ ನಾಯಕರಾಗುವ ಸಾಧ್ಯತೆ ಇದೆ. ಭಾರತೀಯ ಯುವ ತಂಡ ಸೆಪ್ಟೆಂಬರ್ನಲ್ಲಿ ಏಷ್ಯನ್ ಗೇಮ್ಸ್ ಆಡಲು ಚೀನಾಕ್ಕೆ ತೆರಳಲಿದೆ. ಅವರಿಗೆ ಅಭ್ಯಾಸ ನೀಡುವ ಉದ್ದೇಶದಿಂದ ಐರ್ಲೆಂಡ್ ಸರಣಿಗೆ ಆ ತಂಡವನ್ನು ಆಯ್ಕೆ ಮಾಡಲು ಬಿಸಿಸಿಐ ಉದ್ದೇಶಿಸಿದೆ ಎಂದು ವರದಿಯಾಗಿದೆ.
Hardik Pandya rest for Ireland series and Ruturaj Gaikwad as team India captain t20 series
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm