ಬ್ರೇಕಿಂಗ್ ನ್ಯೂಸ್
24-07-23 04:13 pm Source: News18 Kannada ಕ್ರೀಡೆ
ಇಂಡಿಯನ್ ಪ್ರೀಮಿಯರ್ ಲೀಗ್ 2023 (IPL 2023) ನಂತರ ಹಾರ್ದಿಕ್ ಪಾಂಡ್ಯ ಮತ್ತೆ ಮೈದಾನಕ್ಕೆ ಕಾಲಿಡಲಿಲ್ಲ. ಈ ತಿಂಗಳಾಂತ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಆರಂಭವಾಗಲಿರುವ ಏಕದಿನ ಸರಣಿಯೊಂದಿಗೆ ಮತ್ತೆ ಮೈದಾನಕ್ಕಿಳಿಯಲಿದ್ದಾರೆ.
ನಂತರ ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ನಾಯಕನಾಗಿ ಕಾರ್ಯನಿರ್ವಹಿಸಲಿದ್ದಾರೆ. ಇದರ ನಡುವೆ ಬಿಸಿಸಿಐ ಟಿ20ಯಲ್ಲಿ ಹೊಸ ನಾಯಕನ ಹುಡುಕಾಟ ಆರಂಭಿಸಿದೆ.

ಭಾರತ ಆಗಸ್ಟ್ 18 ರಿಂದ 21ರ ವರೆಗೆ ಐರ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಪ್ರವಾಸದ ವೇಳೆ ಭಾರತ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಆದರೆ ಈ ಸರಣಿಗೆ ಈವರಗೆ ತಂಡವನ್ನು ಘೋಷಣೆ ಮಾಡಿಲ್ಲ.
ಆದರೆ ಆ ಸರಣಿಯಿಂದ ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡಲು ಬಿಸಿಸಿಐ ಚಿಂತನೆ ನಡೆಸಿದೆಯಂತೆ. ಜೊತೆಗೆ ಶುಭ್ಮನ್ ಗಿಲ್ಗೂ ವಿಶ್ರಾಂತಿ ನೀಡುವ ಯೋಜನೆ ಇದೆ ಎಂದು ವರದಿಯಾಗಿದೆ.

ಆದರೆ, ಈ ಬಗ್ಗೆ ಬಿಸಿಸಿಐ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಶೀಘ್ರದಲ್ಲೇ ಹಾರ್ದಿಕ್ ಪಾಂಡ್ಯ ಅವರೊಂದಿಗೆ ಈ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಐರ್ಲೆಂಡ್ ಪ್ರವಾಸದಲ್ಲಿ ಪಾಂಡ್ಯ ಭಾಗವಹಿಸುವುದು ಖಚಿತವಾದರೆ ಅವರೇ ನಾಯಕರಾಗಲಿದ್ದಾರೆ.
ಆದರೆ, ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್ ನೊಂದಿಗೆ ಪಾಂಡ್ಯ ಜತೆಗೆ ಹಿರಿಯ ಆಟಗಾರರಿಗೂ ವಿಶ್ರಾಂತಿ ನೀಡಲು ಬಿಸಿಸಿಐ ಚಿಂತನೆ ನಡೆಸಿದೆಯಂತೆ. ಏಷ್ಯನ್ ಗೇಮ್ಸ್ ಗೆ ಆಯ್ಕೆಯಾಗಿರುವ ತಂಡದೊಂದಿಗೆ ಐರ್ಲೆಂಡ್ ಸರಣಿ ಆಡಿಸುವ ಉದ್ದೇಶ ಹೊಂದಿದೆ ಎಂದು ವರದಿಯಾಗಿದೆ.

ಅಂದಹಾಗೆ, ಐರ್ಲೆಂಡ್ ಪ್ರವಾಸದ ವೇಳೆ ರುತುರಾಜ್ ಗಾಯಕ್ವಾಡ್ ಭಾರತ ತಂಡದ ನಾಯಕರಾಗುವ ಸಾಧ್ಯತೆ ಇದೆ. ಭಾರತೀಯ ಯುವ ತಂಡ ಸೆಪ್ಟೆಂಬರ್ನಲ್ಲಿ ಏಷ್ಯನ್ ಗೇಮ್ಸ್ ಆಡಲು ಚೀನಾಕ್ಕೆ ತೆರಳಲಿದೆ. ಅವರಿಗೆ ಅಭ್ಯಾಸ ನೀಡುವ ಉದ್ದೇಶದಿಂದ ಐರ್ಲೆಂಡ್ ಸರಣಿಗೆ ಆ ತಂಡವನ್ನು ಆಯ್ಕೆ ಮಾಡಲು ಬಿಸಿಸಿಐ ಉದ್ದೇಶಿಸಿದೆ ಎಂದು ವರದಿಯಾಗಿದೆ.
Hardik Pandya rest for Ireland series and Ruturaj Gaikwad as team India captain t20 series
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm