ಬ್ರೇಕಿಂಗ್ ನ್ಯೂಸ್
10-08-23 02:30 pm Source: News18 Kannada ಕ್ರೀಡೆ
ವಿಶ್ವಕಪ್ ವೇಳಾಪಟ್ಟಿಗೆ ಸಂಬಂಧಿಸಿದ ಹೈಡ್ರಾಮಾಗೆ ಕೊನೆಗೂ ತೆರೆಬಿದ್ದಿದೆ. ಮೆಗಾ ಟೂರ್ನಿಯ ರೀ ಶೆಡ್ಯೂಲ್ ಅನ್ನು ಐಸಿಸಿ ಬುಧವಾರ ಘೋಷಿಸಿದೆ. ಟೂರ್ನಿಯ ಒಟ್ಟು 9 ಪಂದ್ಯಗಳ ದಿನಾಂಕಗಳಲ್ಲಿ ಬದಲಾವಣೆ ಆಗಿದೆ. ಇದರೊಂದಿಗೆ ಇಡೀ ಕ್ರಿಕೆಟ್ ಜಗತ್ತು ಎದುರು ನೋಡುತ್ತಿದ್ದ ಭಾರತ-ಪಾಕಿಸ್ಥಾನ ಹೈ ವೋಲ್ಟೇಜ್ ಪಂದ್ಯವನ್ನು ಅಕ್ಟೋಬರ್ 14ಕ್ಕೆ ರೀ ಶೆಡ್ಯೂಲ್ ಮಾಡಲಾಗಿದೆ. ದೇವೀ ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ಪಂದ್ಯವನ್ನು ಒಂದು ದಿನ ಮುಂದಕ್ಕೆ ಹಾಕಲಾಗಿದೆ. ಈ ಹಿಂದೆ ಬಿಡುಗಡೆಯಾಗಿದ್ದ ವೇಳಾಪಟ್ಟಿಯಲ್ಲಿ ಇಂಡೋ-ಪಾಕ್ ಪಂದ್ಯ ಅಕ್ಟೋಬರ್ 15 ರಂದು ನಿಗದಿಯಾಗಿತ್ತು. ಆದರೆ ಗುಜರಾತ್ನಲ್ಲಿ ಅದೇ ದಿನ ದೇವಿ ನವರಾತ್ರಿಗಳು ಪ್ರಾರಂಭವಾಗುತ್ತವೆ. ಈ ಹಿನ್ನೆಲೆಯಲ್ಲಿ ಭದ್ರತಾ ಸಮಸ್ಯೆಗಳು ಎದುರಾಗುವ ನಿರೀಕ್ಷೆಯಿಂದ ಪಂದ್ಯವನ್ನು ಮುಂದಕ್ಕೆ ಹಾಕಲಾಗಿದೆ.
ಅಕ್ಟೋಬರ್ 14 ರಂದು ನಡೆಯಬೇಕಾದ ಇಂಗ್ಲೆಂಡ್-ಅಫ್ಗಾನಿಸ್ಥಾನ ಪಂದ್ಯವನ್ನು ಅಕ್ಟೋಬರ್ 15 ರಂದು ರೀಶೆಡ್ಯೂಲ್ ಮಾಡಲಾಗಿದೆ. ಪಾಕಿಸ್ತಾನ-ಶ್ರೀಲಂಕಾ ನಡುವೆ ಹೈದರಾಬಾದ್ನಲ್ಲಿ ಅಕ್ಟೋಬರ್ 12 (ಗುರುವಾರ) ನಡೆಯಬೇಕಿದ್ದ, ಪಂದ್ಯ ಅಕ್ಟೋಬರ್ 10ರಂದು ನಡೆಯಲಿದೆ. ಅಕ್ಟೋಬರ್ 13 ರಂದು ಲಕ್ನೋದಲ್ಲಿ ನಡೆಯಬೇಕಾದ ಆಸ್ಟ್ರೇಲಿಯಾ-ದಕ್ಷಿಣ ಆಫ್ರಿಕಾ ಪಂದ್ಯವನ್ನು ಅಕ್ಟೋಬರ್ 12 ರಂದು ಬದಲಾಯಿಸಲಾಗಿದೆ.



ನವೆಂಬರ್ 12 ರಂದು ಪಾಕಿಸ್ತಾನ-ಇಂಗ್ಲೆಂಡ್ ನಡುವಿನ ಪಂದ್ಯ ಕೋಲ್ಕತ್ತಾದಲ್ಲಿ ನಡೆಯಬೇಕಾದ ಪಂದ್ಯವನ್ನು ಭದ್ರತಾ ಕಾರಣಗಳಿಂದ ನವೆಂಬರ್ 11ಕ್ಕೆ ಬದಲಾಯಿಸಲಾಗಿದೆ. ಕೋಲ್ಕತಾದಲ್ಲಿ ಕಾಳಿ ಪೂಜೆ ಹಿನ್ನೆಲೆಯಲ್ಲಿ ಭದ್ರತಾ ಸಮಸ್ಯೆಗಳು ಎದುರಾಗುವ ನಿರೀಕ್ಷೆಯಿಂದ ಪಂದ್ಯವನ್ನು ಒಂದು ಮುನ್ನವೇ ನಿಗದಿಪಡಿಸಲಾಗಿದೆ. ನೆದರ್ಲ್ಯಾಂಡ್ಸ್ನೊಂದಿಗೆ ಭಾರತ ಆಡುತ್ತಿರುವ ತನ್ನ ಕೊನೆಯ ಲೀಗ್ ಪಂದ್ಯದ ದಿನಾಂಕ ಕೂಡ ಬದಲಾಗಿದ್ದು, ನವೆಂಬರ್ 11 ರಿಂದ 12ಕ್ಕೆ ಮುಂದೂಡಲಾಗಿದೆ. ಪಾಕಿಸ್ತಾನ-ಇಂಗ್ಲೆಂಡ್ ಪಂದ್ಯದ ಬದಲಾವಣೆಯಿಂದಾಗಿ ಭಾರತ-ನೆದರ್ಲೆಂಡ್ಸ್ ಪಂದ್ಯವನ್ನು ರೀ ಶೆಡ್ಯೂಲ್ ಮಾಡಲಾಗಿದೆ.
ಅಕ್ಟೋಬರ್ 5ರಿಂದ ಮೆಗಾ ಟೂರ್ನಿ ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ರನ್ನರ್ ಅಪ್ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೆಗಾ ಟೂರ್ನಿಯ ಆರಂಭಿಕ ಪಂದ್ಯ ನಡೆಯಲಿದೆ. ಅಕ್ಟೋಬರ್ 14 ರಂದು ಪಾಕಿಸ್ತಾನ ತಂಡವನ್ನು ಎದುರಿಸುವ ಮೂಲಕ ಟೀಂ ಇಂಡಿಯಾ ತನ್ನ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಈ ಪಂದ್ಯಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ICC Releases Revised Schedule of World Cup 2023 Clash Between India vs Pakistan Rescheduled to October 14.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm