ಬ್ರೇಕಿಂಗ್ ನ್ಯೂಸ್
22-08-23 01:52 pm Source: News18 Kannada ಕ್ರೀಡೆ
ಏಷ್ಯಾ ಕಪ್ 2023 ಆಗಸ್ಟ್ 30 ರಿಂದ ಆರಂಭವಾಗಲಿದೆ. ಇಂದು 17 ಸದಸ್ಯರ ಟೀಂ ಇಂಡಿಯಾದ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಇದರ ಬೆನ್ನಲ್ಲೇ ಪ್ಲೇಯಿಂಗ್ 11 ಬಗ್ಗೆ ಸಾಕಷ್ಟು ಚರ್ಚೆ ಶುರುವಾಗಿದೆ. ಪ್ರತಿಷ್ಠಿತ ಟೂರ್ನಿಯಲ್ಲಿ ಮತ್ತೊಮ್ಮೆ ರೋಹಿತ್ ಶರ್ಮಾ ಮತ್ತು ಶುಭಮನ್ ಜೋಡಿ ಇನ್ನಿಂಗ್ಸ್ ಆರಂಭಿಸಬಹುದು. ಹಿಟ್ ಮ್ಯಾನ್ ಬಗ್ಗೆ ಹೆಚ್ಚು ಹೇಳಬೇಕಿಲ್ಲ.
ಯುವ ಬ್ಯಾಟ್ಸ್ಮನ್ ಗಿಲ್ ಪ್ರತಿಭೆ ಕೌಶಲ್ಯಗಳ ಬಗ್ಗೆ ಎಲ್ಲರಿಗೂ ಚೆನ್ನಾಗಿ ತಿಳಿದಿದೆ. ಗಿಲ್ ಏಕಾಂಗಿಯಾಗಿ ಪಂದ್ಯಗಳನ್ನು ಗೆಲ್ಲುವ ಕೌಶಲ್ಯವನ್ನು ಹೊಂದಿದ್ದಾರೆ. ಕಳೆದ ಕೆಲವು ಪಂದ್ಯಗಳಲ್ಲೂ ಇದನ್ನೇ ತೋರಿಸಿದ್ದಾರೆ. ಮಧ್ಯಮ ಕ್ರಮಾಂಕದ ಕಮಾಂಡ್ ವಿಶೇಷವಾಗಿ ವಿರಾಟ್ ಕೊಹ್ಲಿ ಮೇಲೆ ನಿಂತಿದೆ. ವಿರಾಟ್ ಕೊಹ್ಲಿ ಯಾವುದೇ ಸ್ಥಾನದಲ್ಲಿ ಬಂದು ಆಡಿದರೂ, ಅಬ್ಬರಿಸೋದು ಕನ್ಫರ್ಮ್ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರವೇ ಸರಿ.



ಮತ್ತೊಂದೆಡೆ, ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನದಲ್ಲಿ ಆಡುವುದು ಖಚಿತವಾಗಿದೆ. ಇನ್ನೂ ಆರನೇ ಕ್ರಮಾಂಕದಲ್ಲಿ ತಿಲಕ್ ವರ್ಮಾ ಆಡುವ ಸಾಧ್ಯತೆ ಹೆಚ್ಚಿದೆ. ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ಏಷ್ಯಾಕಪ್ನಲ್ಲಿ ಆಡುವುದು ಬಹುತೇಕ ಖಚಿತವಾಗಿದೆ. ಕಾರಣ, ಈ ಇಬ್ಬರೂ ಬ್ಯಾಟ್ಸ್ಮನ್ಗಳು ಬ್ಯಾಟ್ ಮತ್ತು ಬಾಲ್ನಿಂದ ಪಂದ್ಯದ ದಿಕ್ಕನ್ನು ಬದಲಾಯಿಸುವಲ್ಲಿ ನಿಪುಣರು. ಇದನ್ನು ಬಿಟ್ಟರೆ ಫೀಲ್ಡಿಂಗ್ನಲ್ಲಿಯೂ ಎಕ್ಸ್ಪರ್ಟ್ಸ್.




ವೇಗಿಗಳಾದ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ಆಡುವುದು ಖಚಿತವಾಗಿದೆ. ಅದೇ ಸಮಯದಲ್ಲಿ, ಕುಲದೀಪ್ ಯಾದವ್ ಉತ್ತಮ ಲಯದಲ್ಲಿ ಕಾಣಿಸಿಕೊಂಡಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಆಡುವ XI ನಲ್ಲಿ ಅವರು ಕೂಡ ಸ್ಥಾನ ಪಡೆದುಕೊಳ್ಳಬಹುದು. ಏಷ್ಯಾಕಪ್ಗಾಗಿ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಸ್ಟ್ಯಾಂಡ್-ಬೈ ಆಟಗಾರ: ಸಂಜು ಸ್ಯಾಮ್ಸನ್
Asia Cup India Squad 2023 Expected Playing 11 Match Dates Captain check details here.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm