ಬ್ರೇಕಿಂಗ್ ನ್ಯೂಸ್
23-08-23 12:36 pm Source: News18 Kannada ಕ್ರೀಡೆ
ಜಿಂಬಾಬ್ವೆ ಕ್ರಿಕೆಟ್ನ ದಿಗ್ಗಜ ಆಟಗಾರ ಹೀತ್ ಸ್ಟ್ರೀಕ್ ಕೊನೆಯುಸಿರೆಳೆದಿದ್ದಾರೆ. ಅವರಿಗೆ ಕೇವಲ 49 ವರ್ಷ ವಯಸ್ಸಾಗಿತ್ತು. ಹೀತ್ ಸ್ಟೀಕ್ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಕ್ಯಾನ್ಸರ್ ವಿರುದ್ಧ ಸಾಕಷ್ಟು ಹೋರಾಟದ ಬಳಿಕ ಈ ದಿಗ್ಗಜ ಕ್ರಿಕೆಟಿಗ ಕೊನೆಯುಸಿರೆಳೆದಿದ್ದಾರೆ. ಜಿಂಬಾಬ್ವೆ ಕಂಡ ಸರ್ವಶ್ರೇಷ್ಠ ಕ್ರಿಕೆಟಿಗ ಹೀತ್ ಸ್ಟ್ರೀಕ್ ಎಂದರೆ ತಪ್ಪಾಗಲ್ಲ.
2000-2004ರ ಅವಧಿಯಲ್ಲಿ ತಂಡವನ್ನು ನಾಯಕನಾಗಿಯೂ ಮುನ್ನಡೆಸಿದ್ದರು. ಒಟ್ಟಾರೆಯಾಗಿ ತಮ್ಮ 12 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನದಲ್ಲಿ ಅವರು 65 ಟೆಸ್ಟ್ ಪಂದ್ಯಗಳನ್ನು ಮತ್ತು 189 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಒಂದು ಹಂತದಲ್ಲಿ ಜಿಂಬಾಬ್ವೆ ಕ್ರಿಕೆಟ್ ತಂಡವನ್ನು ಒಬ್ಬರೇ ಮುಂದೆ ನಿಂತು ಗೆಲ್ಲಿಸಿ, ಮೇಲಕ್ಕೆತ್ತುವ ಪ್ರಯತ್ನ ಮಾಡಿದ್ದರು.


ಜಿಂಬಾಬ್ವೆ ತಂಡದ ಪರವಾಗಿ 100 ಟೆಸ್ಟ್ ವಿಕೆಟ್ಗಳನ್ನು ಪಡೆದ ಏಕೈಕ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ. 2005ರಲ್ಲಿ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ಅಂತ್ಯವಾಗಿತ್ತು. ಹೀತ್ ಸ್ಟ್ರೀಕ್ ಅವರ ಮಾಜಿ ಬೌಲಿಂಗ್ ಜೊತೆಗಾರ ಹೆನ್ರಿ ಒಲೊಂಗ ಟ್ವಿಟ್ಟರ್ನಲ್ಲಿ ಕಂಬನಿ ಮಿಡಿದಿದ್ದಾರೆ. "ಬೇಸರದ ಸುದ್ದಿ ಬರುತ್ತಿದ್ದು ಹೀತ್ ಸ್ಟ್ರೀಕ್ ಅವರು ಬದುಕಿನ ಅಧ್ಯಾಯವನ್ನು ಮುಗಿಸಿದ್ದಾರೆ. ಜಿಂಬಾಬ್ವೆ ಕ್ರಿಕೆಟ್ ಕಂಡ ಸರ್ವಶ್ರೇಷ್ಠ ಆಲ್ರೌಂಡರ್ ಇನ್ನಿಲ್ಲ' ಎಂದು ಟ್ವೀಟ್ ಮಾಡಿದ್ದಾರೆ.


ನಿಮ್ಮೊಂದಿಗೆ ಆಡಿದ್ದು ಅತ್ಯುತ್ತವಾದ ಅವಕಾಶ. ನನ್ನ ಬೌಲಿಂಗ್ ಅವಧಿ ಮುಗಿದಾಗ ನಿಮ್ಮೊಂದಿಗೆ ಮತ್ತೊಂದು ಅಧ್ಯಾಯದಲ್ಲಿ ಆಡಲು ಜೊತೆಯಾಗುತ್ತೇನೆ" ಎಂದು ಹೆನ್ರಿ ಒಲೊಂಗಾ ಭಾವುಕರಾಗಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಹಲವಾರು ಸ್ಮರಣೀಯ ಇನ್ನಿಂಗ್ಸ್ ಆಡಿರುವ ಸ್ಟ್ರೀಕ್ ಟೆಸ್ಟ್ ಕ್ರಿಕೆಟ್ನಲ್ಲಿ 1990 ಟೆಸ್ಟ್ ರನ್ ಬಾರಿಸಿದ್ದರೆ ಏಕದಿನ ಮಾದರಿಯಲ್ಲಿ 2943 ರನ್ಗಳನ್ನು ಬಾರಿಸಿದ್ದಾರೆ. ಇನ್ನು ವೆಸ್ಟ್ ಇಂಡೀಸ್ ವಿರುದ್ಧ ಹರಾರೆಯಲ್ಲಿ ಔಟಾಗದೆ 127 ರನ್ ಗಳಿಸಿದ್ದು ಅವರ ಏಕೈಕ ಟೆಸ್ಟ್ ಶತಕವಾಗಿದೆ.
Heath Streak Legendary Zimbabwe Cricketer Dies at 49.
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am