ಬ್ರೇಕಿಂಗ್ ನ್ಯೂಸ್
31-08-23 02:26 pm Source: News18 Kannada ಕ್ರೀಡೆ
ಏಷ್ಯಾ ಕಪ್ 2023 (IND vs PAK 2023) ಭಾಗವಾಗಿ ಭಾರತ ಮತ್ತು ಪಾಕಿಸ್ತಾನ (IND vs PAK) ನಡುವಿನ ಪಂದ್ಯವು ಸೆಪ್ಟೆಂಬರ್ 2 ರಂದು ನಡೆಯಲಿದೆ. ಈ ಹೈವೋಲ್ಟೇಜ್ ಪಂದ್ಯಕ್ಕಾಗಿ ಉಭಯ ತಂಡಗಳ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಏಷ್ಯಾ ಕಪ್ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಟ್ರೋಫಿ ನೆಚ್ಚಿನ ತಂಡಗಳಾಗಿವೆ. ಏಷ್ಯಾಕಪ್ನಲ್ಲಿ ಈ ಎರಡು ತಂಡಗಳನ್ನು ಸೋಲಿಸುವ ಮತ್ತೊಂದು ತಂಡವಿಲ್ಲ. ಶ್ರೀಲಂಕಾ ಹಾಲಿ ಚಾಂಪಿಯನ್ ಆಗಿ ಟೂರ್ನಿಯಲ್ಲಿ ಆಡುತ್ತಿದ್ದರೂ ಈ ಬಾರಿ ಪ್ರಶಸ್ತಿ ಗೆಲ್ಲುವ ಅವಕಾಶ ತಂಡಕ್ಕೆ ಇಲ್ಲ ಎನ್ನುತ್ತಿದ್ದಾರೆ ಕ್ರೀಡಾ ಪಂಡಿತರು.
ಇತ್ತೀಚಿಗೆ ಪಾಕಿಸ್ತಾನವು ಭಾರತದ ವಿರುದ್ಧ ಮೈಂಡ್ ಗೇಮ್ಸ್ ಆಡಲು ಆರಂಭಿಸಿದೆ. ಆ ದೇಶದ ಮಾಜಿ ಆಟಗಾರರು ಟೀಂ ಇಂಡಿಯಾ ವಿರುದ್ಧ ಪಂದ್ಯಕ್ಕೂ ಮುನ್ನ ಕೆರಳಿಸುವಂತಹ ಕಮೆಂಟ್ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಫಿಕ್ಸರ್ ಆಗಿ ಜೈಲು ಪಾಲಾಗಿರುವ ಪಾಕಿಸ್ತಾನದ ಮಾಜಿ ನಾಯಕ ಸಲ್ಮಾನ್ ಭಟ್ ಪಾಕಿಸ್ತಾನದ ಪರ ಬ್ಯಾಟ್ ಬೀಸಿದ್ದು, ಈ ಬಾರಿಯ ಏಷ್ಯಾಕಪ್ ಗೆಲ್ಲುವ ಸಾಮರ್ಥ್ಯ ಟೀಂ ಇಂಡಿಯಾಕ್ಕಿಲ್ಲ ಎಂದು ಹೇಳಿದ್ದಾರೆ.



ಪ್ರಸ್ತುತ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಮಾತ್ರ ವಿಶ್ವಾಸಾರ್ಹ ಬ್ಯಾಟ್ಸ್ಮನ್ಗಳು ಎಂದು ಭಟ್ ಹೇಳಿದ್ದಾರೆ. ಇವರಿಬ್ಬರನ್ನೂ ಬೇಗ ಔಟ್ ಮಾಡಿದರೆ ಟೀಂ ಇಂಡಿಯಾದ ಕಥೆ ಮುಗಿಯುತ್ತದೆ ಎಂದು ಕಾಮೆಂಟ್ ಮಾಡಿದ್ದಾರೆ. ಹೈವೋಲ್ಟೇಜ್ ಪಂದ್ಯಗಳಲ್ಲಿ ಆಡುವ ಸಾಮರ್ಥ್ಯ ಹೊಂದಿರುವ ಆಟಗಾರರು ಟೀಂ ಇಂಡಿಯಾದಲ್ಲಿ. ಪಾಕಿಸ್ತಾನದ ವಿಷಯಕ್ಕೆ ಬಂದರೆ, ತಂಡವು ಮ್ಯಾಚ್ ವಿನ್ನರ್ಗಳಿಂದ ತುಂಬಿದೆ ಎಂದು ಅವರು ಹೇಳಿದ್ದಾರೆ.


ಬಾಬರ್ ಆಜಮ್, ರಿಜ್ವಾನ್, ಫಖರ್ ಜಮಾನ್, ಶಾದಾಬ್ ಖಾನ್, ಶಾಹೀನ್ ಮತ್ತು ರವೂಫ್ ಮ್ಯಾಚ್ ವಿನ್ನರ್ಗಳಿಂದ ತುಂಬಿದ್ದಾರೆ ಎಂದು ಭಟ್ ಹೇಳಿದ್ದಾರೆ. 2010ರಲ್ಲಿ ಸ್ಪಾಟ್ ಫಿಕ್ಸಿಂಗ್ ನಲ್ಲಿ ದೋಷಿ ಎಂದು ಸಾಬೀತಾದ ಸಲ್ಮಾನ್ ಭಟ್ ಜೈಲಿನಲ್ಲೇ ಜೀವನ ಕಳೆದಿದ್ದು ಗೊತ್ತೇ ಇದೆ. ಐದು ವರ್ಷಗಳ ನಿಷೇಧವನ್ನೂ ಎದುರಿಸಿದ್ದರು. ಫಿಕ್ಸಿಂಗ್ನಿಂದಾಗಿ ಈಗಾಗಲೇ ಕ್ರಿಕೆಟ್ ಜೀವನ ಅಂತ್ಯಗೊಂಡಿದೆ.
Asia Cup 2023 Ind vs Pak Pakistan Targets india Batting lineup i Virat Kohli and Rohit.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm