ಬ್ರೇಕಿಂಗ್ ನ್ಯೂಸ್
04-09-23 02:51 pm Source: News18 Kannada ಕ್ರೀಡೆ
ಭಾರತ ಮತ್ತು ನೇಪಾಳ ನಡುವಿನ ಪಂದ್ಯ ಕ್ಯಾಂಡಿಯಲ್ಲಿ ನಡೆಯಲಿದೆ. ಈ ಪಂದ್ಯದಲ್ಲೂ ಮಳೆಯ ಭೀತಿ ಎದುರಾಗಿದೆ. ದಿನವಿಡೀ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಪೂರ್ಣ 50 ಓವರ್ ಆಡುವುದು ಕಷ್ಟ. ಪಂದ್ಯ ರದ್ದಾದರೆ ಉಭಯ ತಂಡಗಳು ತಲಾ ಒಂದು ಅಂಕ ಪಡೆಯಲಿವೆ. ಇಂತಹ ಪರಿಸ್ಥಿತಿಯಲ್ಲಿ ಭಾರತವು 2 ಪಂದ್ಯಗಳ ನಂತರ 2 ಅಂಕಗಳನ್ನು ಹೊಂದಿರುತ್ತದೆ ಮತ್ತು ನೇಪಾಳವು 2 ಪಂದ್ಯಗಳ ನಂತರ 1 ಅಂಕವನ್ನು ಹೊಂದಿರುತ್ತದೆ. ಅಂತಾರಾಷ್ಟ್ರೀಯ ಕ್ರಿಕೆಟ್ನ ಯಾವುದೇ ಮಾದರಿಯಲ್ಲಿ ಭಾರತ ಮತ್ತು ನೇಪಾಳ ನಡುವಿನ ಮೊದಲ ಘರ್ಷಣೆ ಇದಾಗಿದೆ.
ಅಕ್ಯುವೆದರ್ ವರದಿ ಪ್ರಕಾರ ಸೋಮವಾರವೂ ಕ್ಯಾಂಡಿಯಲ್ಲಿ ಶೇ.60ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಮಧ್ಯಾಹ್ನ 1 ರಿಂದ ಸಂಜೆ 7 ರ ನಡುವೆ ಮಳೆಯ ಸಂಭವನೀಯತೆ ಶೇಕಡಾ 65 ಕ್ಕಿಂತ ಹೆಚ್ಚು. ಅಂದರೆ, ಪಾಕಿಸ್ತಾನ ವಿರುದ್ಧದ ಪಂದ್ಯದಂತೆ ಈ ಪಂದ್ಯದಲ್ಲೂ ಎರಡನೇ ಇನಿಂಗ್ಸ್ನಲ್ಲಿ ಮಳೆ ಅಡ್ಡಿಪಡಿಸುವ ಸಂಪೂರ್ಣ ಸಾಧ್ಯತೆಗಳಿವೆ.
ಟೀಂ ಇಂಡಿಯಾ ಬ್ಯಾಟಿಂಗ್ ಮೇಲೆ ಎಲ್ಲರ ಚಿತ್ತ:
ಭಾರತ ತಂಡದ ಅಗ್ರ ಕ್ರಮಾಂಕದ ಬ್ಯಾಟ್ಸ್ಮನ್ಗಳು ನೇಪಾಳ ವಿರುದ್ಧ ಉತ್ತಮ ಪ್ರದರ್ಶನ ನೀಡಲು ಸಿದ್ಧರಾಗಿದ್ದಾರೆ. ಪಾಕಿಸ್ತಾನದ ವಿರುದ್ಧ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಮತ್ತು ಶುಭಮನ್ ಗಿಲ್ ವಿಫಲರಾಗಿದ್ದರು. ಇಶಾನ್ ಕಿಶನ್ ಮತ್ತು ಹಾರ್ದಿಕ್ ಪಾಂಡ್ಯ ಅರ್ಧಶತಕ ಬಾರಿಸುವ ಮೂಲಕ ಇನ್ನಿಂಗ್ಸ್ ಕಟ್ಟಿದ್ದರು. ಇದರ ಜೊತೆಗೆ ಟೀಂ ಇಂಡಿಯಾದ ಪ್ಲೇಯಿಂಗ್-11ರಲ್ಲಿ ಬದಲಾವಣೆ ಆಗಿದೆ. ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ತಂದೆಯಾಗಿದ್ದಾರೆ ಮತ್ತು ಮುಂಬೈಗೆ ಮರಳಿದ್ದಾರೆ.
ಸ್ಟಾರ್ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ಭಾರತ ಮತ್ತು ನೇಪಾಳ ಪಂದ್ಯವನ್ನು ಲೈವ್ ಆಗಿ ವೀಕ್ಷಿಸಬಹುದು. ಇದಲ್ಲದೆ, ಅಭಿಮಾನಿಗಳು ಈ ಮಹತ್ವದ ಪಂದ್ಯವನ್ನು ಹಾಟ್ಸ್ಟಾರ್ನಲ್ಲಿ ಉಚಿತವಾಗಿ ವೀಕ್ಷಿಸಬಹುದು. ಪಂದ್ಯವನ್ನು ಡಿಡಿ ಸ್ಪೋರ್ಟ್ಸ್ನಲ್ಲಿಯೂ ಆನಂದಿಸಬಹುದು.
20 ನೇ ತಂಡದೊಂದಿಗೆ ಭಾರತದ ಪಂದ್ಯ:
ಇಲ್ಲಿಯವರೆಗೆ, ಭಾರತವು ODIಗಳಲ್ಲಿ 19 ತಂಡಗಳ ವಿರುದ್ಧ ಕನಿಷ್ಠ ಒಂದು ಪಂದ್ಯವನ್ನಾದರೂ ಆಡಿದೆ. ನೇಪಾಳ 20ನೇ ತಂಡವಾಗಲಿದೆ. ಶ್ರೀಲಂಕಾ ವಿರುದ್ಧ ಭಾರತ ಗರಿಷ್ಠ 96 ಏಕದಿನ ಪಂದ್ಯಗಳನ್ನು ಗೆದ್ದಿದೆ. ಆಸ್ಟ್ರೇಲಿಯಾ ಗರಿಷ್ಠ 82 ಸೋಲುಗಳನ್ನು ಪಡೆದಿದೆ. ಅಲ್ಲದೇ ನೇಪಾಳ ತಂಡವು ಮೊದಲ ಬಾರಿಗೆ ಏಷ್ಯಾ ಕಪ್ ಪ್ರವೇಶಿಸುತ್ತಿದೆ. ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ಭಾರತ ಮತ್ತು ನೇಪಾಳ ಮೊದಲ ಬಾರಿಗೆ ಮುಖಾಮುಖಿಯಾಗಲಿವೆ.
ಭಾರತ -ನೇಪಾಳ ಪ್ಲೇಯಿಂಗ್ 11:
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
IND vs NEP Asia Cup 2023 Team India Won the Toss and Chose to Bowl First.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am