ಬ್ರೇಕಿಂಗ್ ನ್ಯೂಸ್
03-12-20 03:56 pm Source: MYKHEL ಕ್ರೀಡೆ
ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾದಲ್ಲಿ ಟಿ ನಟರಾಜನ್ ಪದಾರ್ಪಣೆಯನ್ನು ಮಾಡಿದ್ದರೆ ಅತ್ತ ಆಸ್ಟ್ರೇಲಿಯಾ ತಂಡದ ಪರವಾಗಿ ಕ್ಯಾಮರೂನ್ ಗ್ರೀನ್ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲ ಚೊಚ್ಚಲ ಪಂದ್ಯವನ್ನು ಆಡಿದ್ದರು. ಈ ಸ್ಮರಣೀಯ ಸಂದರ್ಭದಲ್ಲಿ ಆತಂಕದಲ್ಲಿದ್ದ ಕ್ಯಾಮರೂನ್ ಗ್ರೀನ್ಗೆ ಭಾರತದ ವಿಕೆಟ್ ಕೀಪರ್ ಕೆಎಲ್ ರಾಹುಲ್ ಸ್ಪೂರ್ತಿಯ ಮಾತಿನ ಮೂಲಕ ಹುರಿದುಂಬಿಸಿದ್ದಾರೆ.
ಈ ವಿಚಾರವನ್ನು ಸ್ವತಃ ಕ್ಯಾರೂನ್ ಗ್ರೀನ್ ಹಂಚಿಕೊಂಡಿದ್ದಾರೆ. ಬ್ಯಾಟಿಂಗ್ಗೆ ಇಳಿದಾಗ ಎದುರಾಳಿ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಕೆಎಲ್ ರಾಹುಲ್ ಆಡಿದ ಮಾತನ್ನು ನಾನು ಎಂದಿಗೂ ಮರೆಯಲಾರೆ. ಆ ಕ್ಷಣದಲ್ಲಿ ನನ್ನಲ್ಲಿದ್ದ ಆತಂಕವನ್ನು ಹಿಂದಕ್ಕೆ ಸರಿಯುವಂತೆ ಮಾಡಿದ್ದರು ರಾಹುಲ್ ಎಂದು ಗ್ರೀನ್ ಹೇಳಿದ್ದಾರೆ.
ಸಂಭಾವ್ಯ ತಂಡ, ನೇರಪ್ರಸಾರ "ಕೆಎಲ್ ರಾಹುಲ್ ವಿಕೆಟ್ನ ಹಿಂದೆ ನಿಜಕ್ಕೂ ಅದ್ಭುತವಾಗಿ ಸ್ಪೂರ್ತಿಯನ್ನು ನೀಡಿದರು. ಆತ ನನ್ನಲ್ಲಿ ಕೇಳಿದರು ನೀನು ನರ್ವಸ್ ಆಗಿದ್ದೀಯಾ ಎಂದು ಕೇಳಿದರು. ಅದಕ್ಕೆ ನಾನು ಸ್ವಲ್ಪ ನರ್ವಸ್ ಆಗಿದ್ದೇನೆ ಎಂದು ಉತ್ತರಿಸಿದ್ದೆ. ಅದಕ್ಕೆ ಅವರು ಸ್ಪೂರ್ತಿಯ ಮಾತುಗಳ ಮೂಲಕ ನನಗೆ ಪ್ರೇರಣೆಯನ್ನು ನೀಡಿದರು. 'ಉತ್ತಮವಾಗಿ ಆಡು ಯಂಗ್ಸ್ಟರ್' ಎಂದು ರಾಹುಲ್ ಬೆಂಬಲಿಸಿದರು.
ರಾಹುಲ್ ಆಡಿದ ಮಾತಿನಿಂದ ನಾನು ಪ್ರೇರಣೆ ಪಡೆದೆ" ಎಂದು ಗ್ರೀನ್ ಹೇಳಿದ್ದಾರೆ. ಕ್ಯಾಮರೂನ್ ಗ್ರೀನ್ ಆಸ್ಟ್ರೇಲಿಯಾದ ಏಕದಿನ ಕ್ರಿಕೆಟ್ನಲ್ಲಿ 230ನೇ ಆಟಗಾರನಾಗಿ ಪದಾರ್ಪಣೆಯನ್ನು ಮಾಡಿದ್ದಾರೆ. ಪಂದ್ಯದ ಆರಂಭಕ್ಕೂ ಮುನ್ನ ಅವರಿಗೆ ಮಾಜಿ ನಾಯಕ ಸ್ಟೀವ್ ಸ್ಮಿತ್ ಕ್ಯಾಪ್ ವಿತರಿಸಿದರು. 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಇಳಿದ ಕ್ಯಾಮರೂನ್ 27 ಎಸೆತಗಳಲ್ಲಿ 21 ರನ್ ಬಾರಿಸಿದರು. ಇದರಲ್ಲಿ ಒಂದು ಬೌಂಡರಿ ಹಾಗೂ ಒಂದು ಸಿಕ್ಸರ್ ಸೇರಿತ್ತು.
ಚೊಚ್ಚಲ ಪಂದ್ಯವನ್ನು ಆಡುತ್ತಿರುವ ಕಾರಣ ಎದುರಾಳಿ ಭಾರತದ ಕಡೆಯಿಂದ ಪ್ರತಿಕೂಲ ಸ್ವಾಗತವನ್ನು ಪಡೆಯುವ ನಿರೀಕ್ಷೆಯಲ್ಲಿ ಗ್ರೀನ್ ಇದ್ದರು. ಆದರೆ ಕೆಎಲ್ ರಾಹುಲ್ ಅವರ ವರ್ತನೆಯಿಂದ ಗ್ರೀನ್ ಆಶ್ಚರ್ಯಗೊಂಡರು ಎಂದು 21 ವರ್ಷದ ಯುವ ಆಟಗಾರ ಕ್ಯಾಮರೂನ್ ಗ್ರೀನ್ ಒಪ್ಪಿಕೊಂಡಿದ್ದಾರೆ.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm