ಬ್ರೇಕಿಂಗ್ ನ್ಯೂಸ್
05-12-20 12:51 pm Source: MYKHEL ಕ್ರೀಡೆ
ಗೋವಾ: ಎಟಿಕೆ ಮತ್ತು ಮುಂಬೈ ಸಿಟಿ ಎಫ್ ಸಿ ವಿರುದ್ಧ ಸತತ ಸೋಲಿನ ನಂತರ ಎಸ್ಸಿ ಈಸ್ಟ್ ಬೆಂಗಾಲ್ ತಂಡ ಶನಿವಾರ ಇಲ್ಲಿನ ನಾರ್ಥ್ ಈಸ್ಟ್ ಯುನೈಟೆಡ್ ತಂಡದ ವಿರುದ್ಧ ನಡೆಯಲಿರುವ ಹೀರೊ ಇಂಡಿಯನ್ ಸೂಪರ್ ಲೀಗ್ ನಲ್ಲಿ ಮೊದಲ ಜಯ ಗಳಿಸುವ ಗುರಿ ಹೊಂದಿದೆ. ಕೋಚ್ ರಾಬೀ ಫ್ಲವರ್ ಅವರ ಪಡೆ, ಇದುವೆರೆಗೂ ಎದುರಾಳಿಗಳಿಗೆ 5 ಗೋಲು ಗಳಿಸುವ ಅವಕಾಶ ನೀಡಿರುವ ರಾಬೀ ಫ್ಲವರ್ ಪಡೆ ಇನ್ನೂ ಗೋಲಿನ ಖಾತೆ ತೆರೆಯಲಿಲ್ಲ.

ವೈಯಕ್ತಿಕ ಪ್ರಮಾದಗಳು ತಂಡದ ಸೋಲಿಗೆ ಕಾರಣವಾಯಿತು ಎಂದಿರುವ ಲಿವರ್ ಫೂಲ್ ತಂಡದ ಮಾಜಿ ಸ್ಟ್ರೈಕರ್ ಹೇಳಿದ್ದಾರೆ. "ಪ್ರಾಮಾಣಿಕವಾಗಿ ಹೇಳಬೇಕೆಂದರೆ ಇಂಥ ಆಟಗಾರರನ್ನು ಪಡೆದಿರುವುದಕ್ಕೆ ಖುಷಿಯಾಗುತ್ತಿದೆ. ಅಂಗಣದ ಪ್ರತಿಯೊಂದು ವಿಭಾಗದಲ್ಲೂ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ.
ಆದರೆ ತಂಡದ ವೈಫಲ್ಯಗಳ ಬಗ್ಗೆ ನಾನು ದೂರು ನೀಡಲಾರೆ, ವೈಯಕ್ತಿಕ ಪ್ರಮಾದಗಳು ನಮ್ಮ ಹಿನ್ನಡೆಗೆ ಕಾರಣವಾಯಿತು," ಎಂದು ಫ್ಲವರ್ ಹೇಳಿದರು.

ಮುಂದುವರಿಸುವ ಗುರಿ ಹೊಂದಿದೆ ಈ ಋತುವಿನಲ್ಲಿ ಉತ್ತಮ ಆರಂಭ ಕಂಡಿರುವ ನಾರ್ಥ್ ಈಸ್ಟ್ ಯುನೈಟೆಡ್ ಅದೇ ರೀತಿಯ ಆಟವನ್ನು ಮುಂದುವರಿಸುವ ಗುರಿ ಹೊಂದಿದೆ, "ನಾವು ಸ್ಪರ್ಧೆ ನೀಡುತ್ತೇವೆ. ನಾವು ಉತ್ತಮ ರೀತಿಯ ನಿರ್ದೇಶನದಲ್ಲಿ ಮುಂದೆ ಸಾಗುತ್ತಿದ್ದೇವೆ. ನಾವು ಸಾಕಷ್ಟು ಸುಧಾರಣೆ ಕಂಡುಕೊಳ್ಳಬೇಕಾಗಿದೆ. ಈ ಋತುವಿನಲ್ಲಿ ಗೋಲ್ ಸಾಕಷ್ಟು ಸ್ಪರ್ಧೆಯಿಂದ ಕೂಡಿರುತ್ತದೆ. ನಾವು ಒಂದು ಪಂದ್ಯದ ಬಗ್ಗೆ ಮಾತ್ರ ಗಮನಹರಿಸಬೇಕು. ಜಯಕ್ಕಾಗಿ ನಮ್ಮಿಂದಾದ ಎಲ್ಲ ರೀತಿಯ ಪ್ರಯತ್ನ ಮಾಡುತ್ತೇವೆ," ಎಂದು ನಾರ್ಥ್ ಈಸ್ಟ್ ಯುನೈಟೆಡ್ ನ ಕೋಚ್ ಗೆರಾರ್ಡ್ ನಸ್ ಹೇಳಿದ್ದಾರೆ.
ಸ್ವಲ್ಪ ಮಟ್ಟಿನ ಹಿನ್ನಡೆ ಕಂಡಿದೆ
ನಾರ್ಥ್ ಈಸ್ಟ್ ಯುನೈಟೆಡ್ ತಂಡ ಎಲ್ಲ ರೀತಿಯಲ್ಲೂ ಯಶಸ್ಸಿನ ಹೆಜ್ಜೆ ಇಟ್ಟಿರಬಹುದು, ಆದರೆ, ಓಪನ್ ಪ್ಲೇ ವಿಭಾಗದಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆ ಕಂಡಿದೆ. ಗಳಿಸಿರುವ ನಾಲ್ಕು ಗೋಲುಗಳಲ್ಲಿ ಮೂರು ಗೋಲು ಸೆಟ್-ಪೀಸ್ ಮೂಲಕ ದಾಖಲಾಗಿತ್ತು. "ನಾವು ಓಪನ್ ಪ್ಲೇ ಮತ್ತು ಸೆಟ್ ಪೀಸ್ ಮೂಲಕ ಗೋಲು ಗಳಿಸುವ ಕುರಿತು ಯತ್ನಿಸುತ್ತಿದ್ದೇವೆ. ನಾವು ಕೇವಲ ಒಂದು ಯೋಜನೆಗೆ ಆತುಕೊಂಡಿಲ್ಲ. ನಾವು ನಮ್ಮ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಿದ್ದೇವೆ. ನಾವು ಈಸ್ಟ್ ಬೆಂಗಾಲ್ ತಂಡದ ಆಟವನ್ನು ಗಮನಿಸಿದ್ದೇವೆ, ಅವರು ನಿರೀಕ್ಷಿಸಿದ ಫಲಿತಾಂಶ ಅವರಿಗೆ ಸಿಗಲಿಲ್ಲ. ಆದರೆ ಅದೊಂದು ಅಪಾಯಕಾರಿ ತಂಡ, ಚೆಂಡಿನೊಂದಿಗೆ ಅವರೆಷ್ಟು ಉತ್ತಮ ತಂಡ ಎಂಬುದನ್ನು ನಾವು ಬಲ್ಲೆವು, ಇದು ಕಠಿಣ ಪಂದ್ಯ ಎನಿಸಲಿದೆ. ಅವರದ್ದು ಉತ್ತಮ ರೀತಿಯಲ್ಲಿ ಸಂಘಟಿತ ತಂಡ. ಅವರನ್ನು ತಡೆದು ಅವರ ವಿರುದ್ಧವೇ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಗುರಿ,'' ಎಂದರು.

ಅನೇಕ ಹೊಸ ಮುಖಗಳಿವೆ
"ನಮ್ಮಲ್ಲಿ ಅನೇಕ ಹೊಸ ಮುಖಗಳಿವೆ. ನಮ್ಮಲ್ಲಿ ಆರು ಮಂದಿ ವಿದೇಶಿ ಆಟಗಾರಿದ್ದಾರೆ, ಉಳಿದವರೆಲ್ಲ ಭಾರತದ ಆಟಗಾರರು. ಇದೊಂದು ಅಲ್ಪ ಅವಧಿಯ ಫುಟ್ಬಾಲ್ ಋತು. ಮೊದಲ ದಿನದಿಂದ ನಾವು ಯೋಜನೆಗಳನ್ನು ರೂಪಿಸುತ್ತಿದ್ದೇವೆ.," ಎಂದು ನಸ್ ಹೇಳಿದರು.
This News Article is a Copy of GIZBOT
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 01:11 pm
HK News Staffer
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
23-03-26 11:17 am
HK News Staffer
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm