ಬ್ರೇಕಿಂಗ್ ನ್ಯೂಸ್
25-06-24 11:54 am HK News Desk ಕ್ರೀಡೆ
ಗ್ರಾಸ್ ಐಲೆಟ್, ಜೂನ್.25: ಕಳೆದ ವರ್ಷದ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಸೋಲಿಗೆ ಸರಿಯಾದ ಪ್ರತೀಕಾರ ತೀರಿಸಿಕೊಂಡ ಭಾರತ ತಂಡ ಟಿ 20 ವಿಶ್ವಕಪ್ ಸೂಪರ್ 8 ವಿಬಾಗದ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 24 ರನ್ ಗಳಿಂದ ಸೋಲಿಸಿದೆ. ಈ ಮಧ್ಯೆ ಅಂತಿಮ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ಬಾಂಗ್ಲಾದೇಶವನ್ನು 8 ರನ್ ಗಳಿಂದ ಸೋಲಿಸಿ ಸೆಮಿಫೈನಲ್ ಪ್ರವೇಶಿಸಿದ್ದು, ಆಸ್ಟ್ರೇಲಿಯಾ ಟೂರ್ನಿಯಿಂದ ಹೊರಬಿದ್ದಿದೆ.
ಮೊದಲು ಬ್ಯಾಟಿಂಗ್ ಮಾಡಿದ ಭಾರತಕ್ಕೆ ನಾಯಕ ರೋಹಿತ್ ಶರ್ಮ(92 ರನ್, 41 ಎಸೆತ, 7x4, 8x6) ಭರ್ಜರಿ ಆರಂಭ ಒದಗಿಸಿದರು. ವಿಶ್ವಕಪ್ ಫೈನಲ್ ಸೋಲಿನ ಒಂದೊಂದು ಎಸೆತಕ್ಕೂ ಲೆಕ್ಕ ಚುಕ್ತಾ ಮಾಡುವಂತೆ ಬ್ಯಾಟಿಂಗ್ ಮಾಡಿದ ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ, ಮಿಚೆಲ್ ಸ್ಟಾರ್ಕ್ ಎಸೆದ ಎರಡನೇ ಓವರ್ನಲ್ಲಿ 29 ರನ್ ದೋಚಿದರು. ಶತಕದ ಗಡುವಿನಲ್ಲಿ ಔಟಾದರೂ ತಂಡವನ್ನು ಸುಸ್ಥಿತಿಗೆ ತಂದಿದ್ದರು. ವಿರಾಟ್ ಕೊಹ್ಲಿ ಖಾತೆ ತೆರೆಯದೆ ಔಟಾದರೂ ರಿಷಬ್ ಪಂತ್(15), ಸೂರ್ಯ ಕುಮಾರ್ ಯಾದವ್ (31, 16 ಎಸೆತ, 3x4, 2x6), ಶಿವಮ್ ದುಬೆ(28), ಹಾರ್ದಿಕ್ ಪಾಂಡ್ಯ(27*, 17 ಎಸೆತ, 1x4, 2x6) ಭಾರತದ ಮೊತ್ತವನ್ನು 5 ವಿಕೆಟ್ ನಷ್ಟಕ್ಕೆ205ಕ್ಕೆ ತಲುಪಿಸಿದರು.
)

ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾಗೆ ಮೊದಲ ಓವರ್ ನಲ್ಲೇ ಅರ್ಷದೀಪ್ ಸಿಂಗ್ ಆಘಾತವಿಕ್ಕಿದರು. ಭಾರತದ ವಿರುದ್ಧ ಪ್ರಮುಖ ಟೂರ್ನಿಗಳಲ್ಲಿ ಯಾವಾಗಲೂ ರನ್ ಮಳೆ ಹರಿಸುವ ಟ್ರಾವಿಸ್ ಹೆಡ್ (76, 43 ಎಸೆತ, 9x4, 4x6) ಎರಡನೇ ವಿಕೆಟ್ ಗೆ ನಾಯಕ ಮಿಚೆಲ್ ಮಾರ್ಷ್ (37) ಜೊತೆ 81 ರನ್ ಸೇರಿಸಿ ಗೆಲುವಿನ ಆಸೆ ಚಿಗುರಿಸಿದರು. ಆದರೆ ಭಾರತದ ಅತ್ಯುತ್ತಮ ಫೀಲ್ಡಿಂಗ್ ಮತ್ತು ಬೌಲಿಂಗ್ ನೆರವಿನಿಂದ ಆಸೀಸ್ ಏಳು ವಿಕೆಟ್ ಗೆ 181 ರನ್ ಮಾಡಿ ಸೋಲಪ್ಪಿತು.
ಸಂಕ್ಷಿಪ್ತ ಸ್ಕೋರ್
ಭಾರತ 205/5( ರೋಹಿತ್ 92, ಸೂರ್ಯ ಕುಮಾರ್ 31, ದುಬೆ 28, ಪಾಂಡ್ಯ 27*, ಸ್ಟಾರ್ಕ್ 45/2)
ಆಸ್ಟ್ರೇಲಿಯಾ 181/7(ಹೆಡ್ 76, ಮಾರ್ಷ್ 37, ಮ್ಯಾಕ್ಸ್ ವೆಲ್ 20, ಅರ್ಷದೀಪ್ 37/3, ಕುಲದೀಪ್ 24/2)
After a dramatic end to the Super Eight stage, with Afghanistan winning a thriller against Bangladesh in St Vincent to knock out Australia, the four semi-finalists of the T20 World Cup 2024 have been confirmed: Group 2 toppers South Africa will take on Afghanistan in the first semi-final, while Group 1 leaders India will face England in the second semi-final.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm