ಬ್ರೇಕಿಂಗ್ ನ್ಯೂಸ್
26-06-24 09:34 pm HK News Desk ಕ್ರೀಡೆ
ಪ್ರಾವಿಡೆನ್ಸ್, ಜೂನ್ 26: ಟಿ 20 ಕ್ರಿಕೆಟ್ ವಿಶ್ವಕಪ್ ಟೂರ್ನಿ ಕೊನೇ ಹಂತಕ್ಕೆ ಬಂದಿದ್ದು ಎರಡು ಸೆಮಿಫೈನಲ್ ಪಂದ್ಯಗಳು ಗುರುವಾರ (ಜೂನ್ 27) ನಡೆಯಲಿವೆ. ಭಾರತೀಯ ಕಾಲಮಾನ ಬೆಳಗ್ಗೆ 6 ಗಂಟೆಗೆ ನಡೆಯುವ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದ್ದು, ರಾತ್ರಿ 8ಕ್ಕೆ ನಡೆಯುವ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ಸೆಣಸಾಡಲಿವೆ.
2022ರ ಟೂರ್ನಿಯ ಸೆಮಿಫೈನಲ್ ನಲ್ಲಿ ಭಾರತವನ್ನು ಇಂಗ್ಲೆಂಡ್ 10 ವಿಕೆಟ್ ಗಳಿಂದ ಸೋಲಿಸಿತ್ತು. ಈ ಸೋಲಿಗೆ ಪ್ರತೀಕಾರ ತೀರಿಸಿಕೊಳ್ಳಲು ಭಾರತ ಸಜ್ಜಾಗಿದೆ. ಸೂಪರ್ 8 ಕೊನೆಯ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಮಣಿಸಿದ ಭಾರತ ಏಕದಿನ ವಿಶ್ವಕಪ್ ಫೈನಲಿನ ಸೋಲಿಗೆ ಸೇಡು ತೀರಿಸಿಕೊಂಡದ್ದು ಇನ್ನೂ ಹಸಿರಾಗಿದೆ.
ಪ್ರಾವಿಡೆನ್ಸ್ ಅಂಗಣವು ಸ್ಪಿನ್ನರ್ ಗಳಿಗೆ ನೆರವಾಗಲಿದ್ದು ಕುಲದೀಪ್ ಯಾದವ್, ಅಕ್ಸರ್ ಪಟೇಲ್ ಹಾಗೂ ರವೀಂದ್ರ ಜಡೇಜ ಅವರನ್ನು ಒಳಗೊಂಡಿರುವ ಭಾರತದ ಸ್ಪಿನ್ ಬೌಲಿಂಗ್ ವಿಭಾಗ ಬಲಿಷ್ಠವಾಗಿದೆ. ಇಂಗ್ಲೆಂಡ್ ಆದಿಲ್ ರಶೀದ್ ಜೊತೆಗೆ ಮೊಯಿನ್ ಆಲಿ ಹಾಗೂ ಲಯಮ್ ಲಿವಿಂಗ್ ಸ್ಟೋನ್ ಅವರ ಸೇವೆಯನ್ನೂ ಬಳಸಿಕೊಳ್ಳಲಿದೆ. ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮ ನೇತೃತ್ವದ ಬಾರತದ ಬ್ಯಾಟಿಂಗ್ ವಿಭಾಗ ಕೂಡ ಬಲಶಾಲಿಯಾಗಿದ್ದು, ವಿರಾಟ್ ಕೊಹ್ಲಿ, ರಿಷಬ್ ಪಂತ್, ಸೂರ್ಯ ಕುಮಾರ್, ಶಿವಮ್ ದುಬೆ, ಆಲ್ರೌಂಡರ್ ಗಳಾದ ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ಅಕ್ಸರ್ ಪಟೇಲ್ ಯಾವುದೇ ಬಲಿಷ್ಠ ಬೌಲಿಂಗ್ ಪಡೆಯನ್ನು ತಡೆದು ನಿಲ್ಲಬಲ್ಲರು. ಇಡೀ ಟೂರ್ನಿಯಲ್ಲಿ ನಿಯಂತ್ರಿತ ಬೌಲಿಂಗ್ ದಾಳಿಯ ಜೊತೆಗೆ ಅಗತ್ಯವಿದ್ದಾಗ ವಿಕೆಟ್ ಕೂಡ ಕಬಳಿಸುತ್ತಿರುವ ಜಸ್ಪ್ರೀತ್ ಬುಮ್ರಾಗೆ ಸರಿಯಾದ ಜೊತೆ ನೀಡುತ್ತಿರುವ ಅರ್ಷದೀಪ್ ಸಿಂಗ್ ಭಾರತದ ಬೌಲಿಂಗ್ ಶಕ್ತಿಗಳಾಗಿದ್ದಾರೆ.
ಇಂಗ್ಲೆಂಡ್ ತಂಡವೂ ಸಾಕಷ್ಟು ಬಲಿಷ್ಠವಾಗಿದ್ದು, ಫಿಲ್ ಸಾಲ್ಟ್, ಜೋಸ್ ಬಟ್ಲರ್, ಬೇರ್ ಸ್ಟೋ ಮೊದಲಾದ ಆಟಗಾರರಿಂದ ಕೂಡಿದೆ.
ಮತ್ತೊಂದು ಸೆಮಿಫೈನಲ್ ನಲ್ಲಿ ಅಫ್ಘಾನಿಸ್ತಾನ ವಿರುದ್ಧ ದಕ್ಷಿಣ ಆಫ್ರಿಕಾ ಸೆಣಸಲಿದ್ದು ಈ ಪಂದ್ಯವೂ ಕುತೂಹಲ ಕೆರಳಿಸಿದೆ. ವಿಶ್ವಕಪ್ ನಂಥ ಮಹಾನ್ ಟೂರ್ನಿಯಲ್ಲಿ ಯಾವಾಗಲೂ ಅಂತಿಮ ಹಂತದಲ್ಲಿ ಎಡವುವ ದಕ್ಷಿಣ ಆಫ್ರಿಕಾ ಈ ಬಾರಿಯಾದರೂ ತಮ್ಮ ಚೋಕರ್ಸ್ ಹಣೆಪಟ್ಟಿ ಕಳಚುವುದೇ ಎಂದು ಕಾದು ನೋಡಬೇಕಿದೆ.
The T20 World Cup 2024 has reached its business end with the semi-finals set to start on June 27 with South Africa and Afghanistan locking horns at the Brian Lara Cricket Academy in Trinidad and Tobago. South Africa have won all their matches so far in the tournament, but haven't been convincing with their performances. They had close games against the Netherlands and Nepal and almost had a slip-up against West Indies in their final Super 8 clash.
01-06-25 10:08 pm
HK News Desk
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
Siddaramaiah, HD Kumaraswamy: ಸಿದ್ದರಾಮಯ್ಯನವರೇ...
31-05-25 09:41 pm
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
01-06-25 12:32 pm
Mangalore Correspondent
Mangalore Congress, Notice: ಪಕ್ಷದ ಸೂಚನೆ ಮೀರಿ...
01-06-25 11:59 am
ಕೋಮು ಪ್ರಚೋದಕ ಭಾಷಣಕ್ಕೆ ಕಠಿಣ ಕ್ರಮಕ್ಕೆ ಮುಸ್ಲಿಂ ನ...
31-05-25 11:14 pm
Mangalore Police Chief Sudheer Kumar Reddy, V...
31-05-25 10:57 pm
Mangalore Rain, Ullal, Flood, Death: ಗುಡ್ಡ ಕು...
31-05-25 07:18 pm
01-06-25 07:56 pm
HK News Desk
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm
Mangalore Bantwal Abdul Rehman Murder, Arrest...
29-05-25 06:38 pm