ಬ್ರೇಕಿಂಗ್ ನ್ಯೂಸ್
10-07-24 09:03 pm HK News Desk ಕ್ರೀಡೆ
ಹರಾರೆ, ಜುಲೈ 10: ಸಂಘಟಿತ ಆಟದ ಪ್ರದರ್ಶನ ನೀಡಿದ ಭಾರತ ತಂಡ ಜಿಂಬಾಬ್ವೆ ವಿರುದ್ಧದ ಟಿ 20 ಸರಣಿಯ ಮೂರನೇ ಪಂದ್ಯದಲ್ಲಿ 23 ರನ್ ಅಂತರದ ಗೆಲುವು ಸಾಧಿಸಿದ್ದು ಐದು ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಪಡೆದಿದೆ.
ಹರಾರೆಯಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಯುವ ಭಾರತ ತಂಡಕ್ಕೆ ನಾಯಕ ಶುಭಮನ್ ಗಿಲ್(66, 49 ಎಸೆತ, 7x4, 3x6) ಮತ್ತು ಯಶಸ್ವಿ ಜೈಸ್ವಾಲ್(36, 27 ಎಸೆತ, 4x4, 2x6) ಭರ್ಜರಿ ಆರಂಭವೊದಗಿಸಿದರು. ಮೂರನೇ ಕ್ರಮಾಂಕದಲ್ಲಿ ಆಡಲಿಳಿದ ಕಳೆದ ಪಂದ್ಯದ ಹೀರೋ ಅಭಿಷೇಕ್ ಶರ್ಮ(10) ಬೇಗನೆ ವಾಪಸಾದರು. ಮೂರನೇ ವಿಕೆಟ್ ಗೆ ಜೊತೆಯಾದ ಗಿಲ್ ಮತ್ತು ಋತುರಾಜ್ ಗಾಯಕ್ವಾಡ್(49, 28 ಎಸೆತ, 4x4, 3x6) 72 ರನ್ ಸೇರಿಸಿ ತಂಡವನ್ನು ಉತ್ತಮ ಮೊತ್ತದೆಡೆಗೆ ಕೊಂಡೊಯ್ದರು. ಅಂತಿಮವಾಗಿ ಭಾರತ 4 ವಿಕೆಟ್ ಗೆ 182 ರನ್ ಸೇರಿಸಿತು.
ಗುರಿ ಬೆನ್ನಟ್ಟಿದ ಜಿಂಬಾಬ್ವೆ ಆರಂಭದಲ್ಲೇ ಆಘಾತ ಅನುಭವಿಸಿತು. ಭಾರತದ ಯುವ ಪಡೆಯ ಬೌಲಿಂಗ್ ದಾಳಿಯ ಮುಂದೆ ದೊಡ್ಡ ಜೊತೆಯಾಟ ಆಡುವಲ್ಲಿ ವಿಫಲವಾದ ಜಿಂಬಾಬ್ವೆ 6 ವಿಕೆಟ್ ಗೆ 159 ರನ್ ಗಳಿಸಲಷ್ಟೇ ಶಕ್ತವಾಗಿ ಪರಾಜಯ ಒಪ್ಪಿಕೊಂಡಿತು. 15ಕ್ಕೆ 3 ವಿಕೆಟ್ ಕಬಳಿಸಿದ ವಾಷಿಂಗ್ಟನ್ ಸುಂದರ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಸಂಕ್ಷಿಪ್ತ ಸ್ಕೋರ್ ಭಾರತ 182/4(ಗಿಲ್ 66, ಋತುರಾಜ್ 49, ಜೈಸ್ವಾಲ್ 36, ಸಂಜು ಸ್ಯಾಮ್ಸನ್ 12*, ಸಿಕಂದರ್ ರಜಾ 24/2, ಮುಝರ್ಬಾನಿ 25/2)
ಜಿಂಬಾಬ್ವೆ 159/6(ಮೈಯರ್ಸ್ 65*, ಮಡಾಂಡೆ 37, ಮಸಕಜ 18* ಸುಂದರ್ 15/3, ಆವೇಶ್ ಖಾನ್ 39/2)
India captain Shubman Gill regained his form with a half-century as the tourists beat Zimbabwe by 23 runs Wednesday in the third Twenty20.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm