ಬ್ರೇಕಿಂಗ್ ನ್ಯೂಸ್
10-07-24 09:03 pm HK News Desk ಕ್ರೀಡೆ
ಹರಾರೆ, ಜುಲೈ 10: ಸಂಘಟಿತ ಆಟದ ಪ್ರದರ್ಶನ ನೀಡಿದ ಭಾರತ ತಂಡ ಜಿಂಬಾಬ್ವೆ ವಿರುದ್ಧದ ಟಿ 20 ಸರಣಿಯ ಮೂರನೇ ಪಂದ್ಯದಲ್ಲಿ 23 ರನ್ ಅಂತರದ ಗೆಲುವು ಸಾಧಿಸಿದ್ದು ಐದು ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಪಡೆದಿದೆ.
ಹರಾರೆಯಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಯುವ ಭಾರತ ತಂಡಕ್ಕೆ ನಾಯಕ ಶುಭಮನ್ ಗಿಲ್(66, 49 ಎಸೆತ, 7x4, 3x6) ಮತ್ತು ಯಶಸ್ವಿ ಜೈಸ್ವಾಲ್(36, 27 ಎಸೆತ, 4x4, 2x6) ಭರ್ಜರಿ ಆರಂಭವೊದಗಿಸಿದರು. ಮೂರನೇ ಕ್ರಮಾಂಕದಲ್ಲಿ ಆಡಲಿಳಿದ ಕಳೆದ ಪಂದ್ಯದ ಹೀರೋ ಅಭಿಷೇಕ್ ಶರ್ಮ(10) ಬೇಗನೆ ವಾಪಸಾದರು. ಮೂರನೇ ವಿಕೆಟ್ ಗೆ ಜೊತೆಯಾದ ಗಿಲ್ ಮತ್ತು ಋತುರಾಜ್ ಗಾಯಕ್ವಾಡ್(49, 28 ಎಸೆತ, 4x4, 3x6) 72 ರನ್ ಸೇರಿಸಿ ತಂಡವನ್ನು ಉತ್ತಮ ಮೊತ್ತದೆಡೆಗೆ ಕೊಂಡೊಯ್ದರು. ಅಂತಿಮವಾಗಿ ಭಾರತ 4 ವಿಕೆಟ್ ಗೆ 182 ರನ್ ಸೇರಿಸಿತು.
ಗುರಿ ಬೆನ್ನಟ್ಟಿದ ಜಿಂಬಾಬ್ವೆ ಆರಂಭದಲ್ಲೇ ಆಘಾತ ಅನುಭವಿಸಿತು. ಭಾರತದ ಯುವ ಪಡೆಯ ಬೌಲಿಂಗ್ ದಾಳಿಯ ಮುಂದೆ ದೊಡ್ಡ ಜೊತೆಯಾಟ ಆಡುವಲ್ಲಿ ವಿಫಲವಾದ ಜಿಂಬಾಬ್ವೆ 6 ವಿಕೆಟ್ ಗೆ 159 ರನ್ ಗಳಿಸಲಷ್ಟೇ ಶಕ್ತವಾಗಿ ಪರಾಜಯ ಒಪ್ಪಿಕೊಂಡಿತು. 15ಕ್ಕೆ 3 ವಿಕೆಟ್ ಕಬಳಿಸಿದ ವಾಷಿಂಗ್ಟನ್ ಸುಂದರ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಸಂಕ್ಷಿಪ್ತ ಸ್ಕೋರ್ ಭಾರತ 182/4(ಗಿಲ್ 66, ಋತುರಾಜ್ 49, ಜೈಸ್ವಾಲ್ 36, ಸಂಜು ಸ್ಯಾಮ್ಸನ್ 12*, ಸಿಕಂದರ್ ರಜಾ 24/2, ಮುಝರ್ಬಾನಿ 25/2)
ಜಿಂಬಾಬ್ವೆ 159/6(ಮೈಯರ್ಸ್ 65*, ಮಡಾಂಡೆ 37, ಮಸಕಜ 18* ಸುಂದರ್ 15/3, ಆವೇಶ್ ಖಾನ್ 39/2)
India captain Shubman Gill regained his form with a half-century as the tourists beat Zimbabwe by 23 runs Wednesday in the third Twenty20.
08-12-25 06:58 pm
HK News Desk
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 04:52 pm
Mangalore Correspondent
ಬಂಡವಾಳ ಇಲ್ಲದೆ ಆದಾಯದ ಅವಕಾಶ ; ಎಸ್ಸೆಸ್ಸೆಲ್ಸಿ, ಪಿ...
08-12-25 01:42 pm
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
08-12-25 09:29 pm
Mangalore Correspondent
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm