ಬ್ರೇಕಿಂಗ್ ನ್ಯೂಸ್
10-07-24 09:03 pm HK News Desk ಕ್ರೀಡೆ
ಹರಾರೆ, ಜುಲೈ 10: ಸಂಘಟಿತ ಆಟದ ಪ್ರದರ್ಶನ ನೀಡಿದ ಭಾರತ ತಂಡ ಜಿಂಬಾಬ್ವೆ ವಿರುದ್ಧದ ಟಿ 20 ಸರಣಿಯ ಮೂರನೇ ಪಂದ್ಯದಲ್ಲಿ 23 ರನ್ ಅಂತರದ ಗೆಲುವು ಸಾಧಿಸಿದ್ದು ಐದು ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಪಡೆದಿದೆ.
ಹರಾರೆಯಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಯುವ ಭಾರತ ತಂಡಕ್ಕೆ ನಾಯಕ ಶುಭಮನ್ ಗಿಲ್(66, 49 ಎಸೆತ, 7x4, 3x6) ಮತ್ತು ಯಶಸ್ವಿ ಜೈಸ್ವಾಲ್(36, 27 ಎಸೆತ, 4x4, 2x6) ಭರ್ಜರಿ ಆರಂಭವೊದಗಿಸಿದರು. ಮೂರನೇ ಕ್ರಮಾಂಕದಲ್ಲಿ ಆಡಲಿಳಿದ ಕಳೆದ ಪಂದ್ಯದ ಹೀರೋ ಅಭಿಷೇಕ್ ಶರ್ಮ(10) ಬೇಗನೆ ವಾಪಸಾದರು. ಮೂರನೇ ವಿಕೆಟ್ ಗೆ ಜೊತೆಯಾದ ಗಿಲ್ ಮತ್ತು ಋತುರಾಜ್ ಗಾಯಕ್ವಾಡ್(49, 28 ಎಸೆತ, 4x4, 3x6) 72 ರನ್ ಸೇರಿಸಿ ತಂಡವನ್ನು ಉತ್ತಮ ಮೊತ್ತದೆಡೆಗೆ ಕೊಂಡೊಯ್ದರು. ಅಂತಿಮವಾಗಿ ಭಾರತ 4 ವಿಕೆಟ್ ಗೆ 182 ರನ್ ಸೇರಿಸಿತು.
ಗುರಿ ಬೆನ್ನಟ್ಟಿದ ಜಿಂಬಾಬ್ವೆ ಆರಂಭದಲ್ಲೇ ಆಘಾತ ಅನುಭವಿಸಿತು. ಭಾರತದ ಯುವ ಪಡೆಯ ಬೌಲಿಂಗ್ ದಾಳಿಯ ಮುಂದೆ ದೊಡ್ಡ ಜೊತೆಯಾಟ ಆಡುವಲ್ಲಿ ವಿಫಲವಾದ ಜಿಂಬಾಬ್ವೆ 6 ವಿಕೆಟ್ ಗೆ 159 ರನ್ ಗಳಿಸಲಷ್ಟೇ ಶಕ್ತವಾಗಿ ಪರಾಜಯ ಒಪ್ಪಿಕೊಂಡಿತು. 15ಕ್ಕೆ 3 ವಿಕೆಟ್ ಕಬಳಿಸಿದ ವಾಷಿಂಗ್ಟನ್ ಸುಂದರ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಸಂಕ್ಷಿಪ್ತ ಸ್ಕೋರ್ ಭಾರತ 182/4(ಗಿಲ್ 66, ಋತುರಾಜ್ 49, ಜೈಸ್ವಾಲ್ 36, ಸಂಜು ಸ್ಯಾಮ್ಸನ್ 12*, ಸಿಕಂದರ್ ರಜಾ 24/2, ಮುಝರ್ಬಾನಿ 25/2)
ಜಿಂಬಾಬ್ವೆ 159/6(ಮೈಯರ್ಸ್ 65*, ಮಡಾಂಡೆ 37, ಮಸಕಜ 18* ಸುಂದರ್ 15/3, ಆವೇಶ್ ಖಾನ್ 39/2)
India captain Shubman Gill regained his form with a half-century as the tourists beat Zimbabwe by 23 runs Wednesday in the third Twenty20.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm