ಬ್ರೇಕಿಂಗ್ ನ್ಯೂಸ್
07-12-20 03:54 pm Source: MYKHEL ಕ್ರೀಡೆ
ಗೋವಾ, ಡಿಸೆಂಬರ್ 6: ಐಗರ್ ಏಂಗುಲೋ (30 ಮತ್ತು 90ನೇ ನಿಮಿಷ) ಮತ್ತು ಜಾರ್ಜ್ ಆರ್ಟಿಜ್ ಮೆಂಡೊನ್ಜಾ (52ನೇ ನಿಮಿಷ) ಗಳಿಸಿದ ಗೋಲುಗಳ ನೆರವಿನಿಂದ ಎಫ್ ಸಿ ಗೋವಾ ತಂಡ ಕೇರಳ ಬ್ಲಾಸ್ಟರ್ಸ್ ವಿರುದ್ಧದ ಹೀರೋ ಇಂಡಿಯನ್ ಸೂಪರ್ ಲೀಗ್ ನಲ್ಲಿ 3-1 ಗೋಲುಗಳ ಅಂತರದಲ್ಲಿ ಜಯ ಗಳಿಸಿತು. ಕೇರಳದ ಪರ ವಿನ್ಸೆಂಟ್ ಗೊಮೇಜ್ (90ನೇ ನಿಮಿಷ) ಗಳಿಸಿದ ಗೋಲು ಸೋಲಿನ ಅಂತರವನ್ನು ಕಡಿಮೆ ಮಾಡಿತು. ಐಗರ್ ಏಂಗುಲೋ 30ನೇ ನಿಮಿಷದಲ್ಲಿ ಗಳಿಸಿದ ಗೋಲಿನ ನೆರವಿನಿಂದ ಕೇರಳ ಬ್ಲಾಸ್ಟರ್ಸ್ ವಿರುದ್ಧದ ಪಂದ್ಯದಲ್ಲಿ ಎಫ್ ಸಿ ಗೋವಾ 1-0 ಗೋಲಿನಿಂದ ಮೇಲುಗೈ ಸಾಧಿಸಿದೆ.
ಕೇರಳ ಕೂಡ ಉತ್ತಮ ರೀತಿಯಲ್ಲಿ ಪ್ರದರ್ಶನ ತೋರಿತ್ತು, ಆದರೆ ಗೋಲು ದಾಖಲಾಗಲಿಲ್ಲ. 10ನೇ ನಿಮಿಷದಲ್ಲಿ ಗೋವಾದ ಮೆಡೊನ್ಜಾ ಅವರಿಗೆ ನೇರವಾಗಿ ಗೋಲು ಗಳಿಸುವ ಅವಕಾಶ ಇದ್ದಿತ್ತು, ಆದರೆ ತುಳಿದ ಚೆಂಡು ಗೋಲ್ ಬಾಕ್ಸನ ಅಂಚಿಗೆ ತಾಗಿ ಹೊರ ನಡೆಯಿತು.

ಅವಕಾಶ ಸಿಕ್ಕರೂ ಗೋಲಾಗಲಿಲ್ಲ 15, 20 ಮತ್ತು 25ನೇ ನಿಮಿಷಗಳಲ್ಲೂ ಗೋವಾಕ್ಕೆ ಅವಕಾಶ ಸಿಕ್ಕರೂ ಗೋಲಾಗಲಿಲ್ಲ. ಆದರೆ 30ನೇ ನಿಮಿಷದಲ್ಲಿ ಸಿಕ್ಕ ಅವಕಾಶ ಗೋವಾಕ್ಕೆ ಯಶಸ್ಸು ತಂದಿತು. ಸಾವಿಯರ್ ನೀಡಿದ ಪಾಸ್ ಮೂಲಕ ಐಗರ್ ಗಳಿಸಿದ ಗೋಲು ಗೋವಾಕ್ಕೆ ಮುನ್ನಡೆ ತಂದುಕೊಟ್ಟಿತು. ಐಗರ್ ಗಳಿಸಿದ ನಾಲ್ಕನೇ ಗೋಲಿನಿಂದಾಗಿ ಅತಿ ಹೆಚ್ಚು ಗೋಲು ಗಳಿಸಿದವರ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದರು.

ಜಯವೊಂದೇ ಮಂತ್ರ ಎಫ್ ಸಿ ಗೋವಾ ಮತ್ತು ಕೇರಳ ಬ್ಲಾಸ್ಟರ್ಸ್ ತಂಡಗಳು ಹೀರೋ ಇಂಡಿಯನ್ ಸೂಪರ್ ಲೀಗ್ ನ ಸೂಪರ್ ಸಂಡೆಯ ಎರಡನೇ ಪಂದ್ಯದಲ್ಲಿ ಮುಖಾಮುಖಿಯಾದವು. ಎರಡೂ ತಂಡಗಳಲ್ಲಿ ಯಾರು ಗೆದ್ದರೂ ಅದು ಆ ತಂಡಕ್ಕೆ ಮೊದಲ ಜಯವಾಗಿರುತ್ತದೆ. ಗೋವಾ ತಂಡ ನಾಲ್ಕು ಗೋಲುಗಳನ್ನು ಗಳಿಸಿದೆ. ಸೆಟ್ ಪೀಸ್ ಮೂಲಕ ನಾಲ್ಕು ಗೋಲುಗಳು ಎದುರಾಳಿಗಳ ಪಾಲಾಗಿದೆ. ಕೇರಳ ಕೂಡ ಸೆಟ್-ಪೀಸ್ ಮೂಲಕ ಎರಡು ಗೋಲುಗಳನ್ನು ಗಳಿಸಿದೆ. ಮಿಡ್ ಫೀಲ್ಡ್ ವಿಭಾಗದಲ್ಲಿ ಲೆನ್ನಿ ರಾಡ್ರಿಗಸ್ ಮತ್ತು ನಾಯಕ ಎಡು ಬೇಡಿಯಾ ಉತ್ತಮ ರೀತಿಯಲ್ಲಿ ಪ್ರದರ್ಶನ ತೋರಿದ್ದಾರೆ. ಅಲ್ಬೆರ್ಟ್ ನೊಗ್ವೆರಾ, ಜಾರ್ಜ್ ಮೆಂಡೊನ್ಜಾ ಮತ್ತು ಬ್ರಂಡಾನ್ ಫೆರ್ನಾಂಡೀಸ್ ಗೋವಾದ ಕೋಚ್ ಜುವಾನ್ ಫೆರಾಂಡೊ ಅವರಿಗೆ ಯಾರನ್ನು ಆಯ್ಕೆ ಮಾಡಬೇಕೆಂಬ ಗೊಂದಲಕ್ಕೆ ಸಿಲುಕಿಸಿರುವುದು ಸ್ಪಷ್ಟ.

ಐಗರ್ ವಿಶ್ವಾಸ ಹೆಚ್ಚಿದೆ ಐಗರ್ ಏಂಗುಲೊ ಅವರು ಈಗಾಗಲೇ ಮೂರು ಗೋಲು ಗಳಿಸಿ ತಮ್ಮ ಸಾಮರ್ಥ್ಯ ಏನೆಂಬುದನ್ನು ತೋರಿಸಿದ್ದಾರೆ. ಚೆನ್ನೈಯಿನ್ ಎಫ್ ಸಿ ವಿರುದ್ಧ ನಡೆದ ಗೋಲಿಲ್ಲದ ಡ್ರಾ ಪಂದ್ಯದಲ್ಲಿ ಕಿಬು ವಿಕುನಾ ಪಡೆ ಅದ್ಭುತ ಪ್ರದರ್ಶನ ತೋರಿತ್ತು. ಗೋಲ್ ಕೀಪರ್ ಅಲ್ಬಿನೊ ಗೋಮ್ಸ್ ಪೆನಾಲ್ಟಿ ಕಿಕ್ ತಡೆದು ತಂಡವನ್ನು ಸೋಲಿನಿಂದ ಪಾರು ಮಾಡಿದ್ದರು. ಬಕಾರಿ ಕೊನ್ ಮತ್ತು ಕೊಸ್ಟಾ ನ್ಹಾಮೊಯ್ನಿಸು ಡಿಫೆನ್ಸ್ ವಿಭಾಗದಲ್ಲಿ ಕೇರಳದ ಶಕ್ತಿ. ಸತ್ಯಸೇನ್ ಸಿಂಗ್, ಸರ್ಗಿಯೊ ಸಿಡೊಂಚಾ ಮಿಡ್ ಫೀಲ್ಡ್ ವಿಭಾಗದ ಪ್ರಮುಖ ಅಸ್ತ್ರ. ಉತ್ತಮ ಆಟಗಾರರಿಂದ ಕೂಡಿದ ತಂಡಗಳ ಹೋರಾಟದಲ್ಲಿ ಉತ್ತಮ ಫುಟ್ಬಾಲ್ ಇರುವುದು ಸಹಜ.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm