ಬ್ರೇಕಿಂಗ್ ನ್ಯೂಸ್
08-12-20 04:23 pm Source: MYKHEL ಕ್ರೀಡೆ
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಅಂತಿಮ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ಮೊದಲಿಗೆ ಬ್ಯಾಟಿಂಗ್ ನಡೆಸಿದ್ದು ಭಾರತಕ್ಕೆ ಸವಾಲಿನ ಗುರಿಯನ್ನು ನೀಡಿದೆ. ಆರಂಭಿಕ ಆಟಗಾರ ಮ್ಯಾಥ್ಯೂ ವೇಡ್ ಹಾಗೂ ಗ್ಲೆನ್ ಮ್ಯಾಕ್ಸ್ವೆಲ್ ಭರ್ಜರಿ ಪ್ರದರ್ಶನದಿಂದ ಆಸ್ಟ್ರೇಲಿಯಾ 5 ವಿಕೆಟ್ ಕಳೆದುಕೊಂಡು 186ರನ್ ಗಳಿಸಿದೆ.
ಆಸ್ಟ್ರೇಲಿಯಾ ತಂಡದ ಪರವಾಗಿ ಮ್ಯಾಥ್ಯೂ ವೇಡ್ ಸತತ ಎರಡನೇ ಪಂದ್ಯದಲ್ಲಿ ಅರ್ಧ ಶತಕದ ಪ್ರದರ್ಶನವನ್ನು ನೀಡಿದ್ದಾರೆ. ಆರಂಭದಿಂದಲೇ ಭರ್ಜರಿ ಹೊಡೆತಕ್ಕೆ ಮುಂದಾದ ವೇಡ್ ಆಸಿಸ್ ಇನ್ನಿಂಗ್ಸ್ನ ಕಡೇ ಹಂತದಲ್ಲಿ ವಿಕೆಟ್ ಒಪ್ಪಿಸಿ ಹೊರನಡೆದರು. ಈ ಸಂದರ್ಭದಲ್ಲಿ 53 ಎಸೆತಗಳನ್ನು ಎದುರಿಸಿ 80 ರನ್ ಗಳ ಕಾಣಿಗೆ ನೀಡಿದ್ದಾರೆ. ಇದರಲ್ಲಿ 7 ಬೌಂಡರಿ ಹಾಗೂ 2 ಸಿಕ್ಸರ್ ಒಳಗೊಂಡಿತ್ತು.

ಆಸಿಸ್ ತಂಡದ ಪರವಾಗಿ ನಾಯಕ ಆರೋನ್ ಫಿಂಚ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಹೊರನಡೆದರು. ಬಳಿಕ ಬಂದ ಸ್ಟೀವ್ ಸ್ಮಿತ್ ಕೂಡ 24 ರನ್ಗಳಿಗೆ ಔಟಾದರು. ಆದರೆ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಮತ್ತೊಂದು ಅದ್ಭುತ ಆಟವನ್ನು ಭಾರತದ ವಿರುದ್ಧ ಪ್ರದರ್ಶಿಸಿದ್ದಾರೆ. ಮೂರನೇ ಟಿ20 ಪಂದ್ಯದಲ್ಲಿ ಮ್ಯಾಕ್ಸ್ವೆಲ್ ಅರ್ಧ ಶತಕವನ್ನು ಬಾರಿಸಿದರು. 36 ಎಸೆತ ಎದುರಿಸಿದ ಮ್ಯಾಕ್ಸ್ವೆಲ್ 54 ರನ್ ಬಾರಿಸಿದರು. ಈ ಮೂಲಕ ತಂಡದ ದೊಡ್ಡ ಮೊತ್ತ ಗಳಿಸಲು ಕಾರಣರಾದರು. ಮೂರು ಬೌಂಡರಿ ಹಾಗೂ ಮೂರು ಸಿಕ್ಸರ್ ಮ್ಯಾಕ್ಸ್ವೆಲ್ ಬ್ಯಾಟ್ನಿಂದ ಸಿಡಿದಿದೆ.

ಟೀಮ್ ಇಂಡಿಯಾ ಪರವಾಗಿ ವಾಶಿಂಗ್ಟನ್ ಸುಂದರ್ 2 ವಿಕೆಟ್ ಕಿತ್ತು ಮಿಂಚಿದ್ದಾರೆ. ಉಳಿದಂತೆ ಟಿ ನಟರಾಜನ್ ಹಾಗೂ ಶಾರ್ದೂಲ್ ಟಾಕೂರ್ ತಲಾ ಒಂದು ವಿಕೆಟ್ ಪಡೆದರು. ಮೂರನೇ ಟಿ20 ಪಂದ್ಯದಲ್ಲೂ ಭಾರತ ಕೆಲ ಜೀವದಾನವನ್ನು ಆಸ್ಟ್ರೇಲಿಯಾ ದಾಂಡಿಗರಿಗೆ ನೀಡಿದೆ.
This News Article is a Copy of MYKHEL
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am