ಬ್ರೇಕಿಂಗ್ ನ್ಯೂಸ್
08-12-20 04:23 pm Source: MYKHEL ಕ್ರೀಡೆ
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಅಂತಿಮ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ಮೊದಲಿಗೆ ಬ್ಯಾಟಿಂಗ್ ನಡೆಸಿದ್ದು ಭಾರತಕ್ಕೆ ಸವಾಲಿನ ಗುರಿಯನ್ನು ನೀಡಿದೆ. ಆರಂಭಿಕ ಆಟಗಾರ ಮ್ಯಾಥ್ಯೂ ವೇಡ್ ಹಾಗೂ ಗ್ಲೆನ್ ಮ್ಯಾಕ್ಸ್ವೆಲ್ ಭರ್ಜರಿ ಪ್ರದರ್ಶನದಿಂದ ಆಸ್ಟ್ರೇಲಿಯಾ 5 ವಿಕೆಟ್ ಕಳೆದುಕೊಂಡು 186ರನ್ ಗಳಿಸಿದೆ.
ಆಸ್ಟ್ರೇಲಿಯಾ ತಂಡದ ಪರವಾಗಿ ಮ್ಯಾಥ್ಯೂ ವೇಡ್ ಸತತ ಎರಡನೇ ಪಂದ್ಯದಲ್ಲಿ ಅರ್ಧ ಶತಕದ ಪ್ರದರ್ಶನವನ್ನು ನೀಡಿದ್ದಾರೆ. ಆರಂಭದಿಂದಲೇ ಭರ್ಜರಿ ಹೊಡೆತಕ್ಕೆ ಮುಂದಾದ ವೇಡ್ ಆಸಿಸ್ ಇನ್ನಿಂಗ್ಸ್ನ ಕಡೇ ಹಂತದಲ್ಲಿ ವಿಕೆಟ್ ಒಪ್ಪಿಸಿ ಹೊರನಡೆದರು. ಈ ಸಂದರ್ಭದಲ್ಲಿ 53 ಎಸೆತಗಳನ್ನು ಎದುರಿಸಿ 80 ರನ್ ಗಳ ಕಾಣಿಗೆ ನೀಡಿದ್ದಾರೆ. ಇದರಲ್ಲಿ 7 ಬೌಂಡರಿ ಹಾಗೂ 2 ಸಿಕ್ಸರ್ ಒಳಗೊಂಡಿತ್ತು.

ಆಸಿಸ್ ತಂಡದ ಪರವಾಗಿ ನಾಯಕ ಆರೋನ್ ಫಿಂಚ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಹೊರನಡೆದರು. ಬಳಿಕ ಬಂದ ಸ್ಟೀವ್ ಸ್ಮಿತ್ ಕೂಡ 24 ರನ್ಗಳಿಗೆ ಔಟಾದರು. ಆದರೆ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಮತ್ತೊಂದು ಅದ್ಭುತ ಆಟವನ್ನು ಭಾರತದ ವಿರುದ್ಧ ಪ್ರದರ್ಶಿಸಿದ್ದಾರೆ. ಮೂರನೇ ಟಿ20 ಪಂದ್ಯದಲ್ಲಿ ಮ್ಯಾಕ್ಸ್ವೆಲ್ ಅರ್ಧ ಶತಕವನ್ನು ಬಾರಿಸಿದರು. 36 ಎಸೆತ ಎದುರಿಸಿದ ಮ್ಯಾಕ್ಸ್ವೆಲ್ 54 ರನ್ ಬಾರಿಸಿದರು. ಈ ಮೂಲಕ ತಂಡದ ದೊಡ್ಡ ಮೊತ್ತ ಗಳಿಸಲು ಕಾರಣರಾದರು. ಮೂರು ಬೌಂಡರಿ ಹಾಗೂ ಮೂರು ಸಿಕ್ಸರ್ ಮ್ಯಾಕ್ಸ್ವೆಲ್ ಬ್ಯಾಟ್ನಿಂದ ಸಿಡಿದಿದೆ.

ಟೀಮ್ ಇಂಡಿಯಾ ಪರವಾಗಿ ವಾಶಿಂಗ್ಟನ್ ಸುಂದರ್ 2 ವಿಕೆಟ್ ಕಿತ್ತು ಮಿಂಚಿದ್ದಾರೆ. ಉಳಿದಂತೆ ಟಿ ನಟರಾಜನ್ ಹಾಗೂ ಶಾರ್ದೂಲ್ ಟಾಕೂರ್ ತಲಾ ಒಂದು ವಿಕೆಟ್ ಪಡೆದರು. ಮೂರನೇ ಟಿ20 ಪಂದ್ಯದಲ್ಲೂ ಭಾರತ ಕೆಲ ಜೀವದಾನವನ್ನು ಆಸ್ಟ್ರೇಲಿಯಾ ದಾಂಡಿಗರಿಗೆ ನೀಡಿದೆ.
This News Article is a Copy of MYKHEL
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm