ಬ್ರೇಕಿಂಗ್ ನ್ಯೂಸ್
09-12-20 12:41 pm Source: MYKHEL Mahesh Malnad ಕ್ರೀಡೆ
ಪಣಜಿ, ನ. 26: ಫುಟ್ಬಾಲ್ ಅಭಿಮಾನಿಗಳನ್ನು ಅಗಲಿದ ದಿಗ್ಗಜ ಆಟಗಾರ ಅರ್ಜೆಂಟೀನಾದ ಡಿಯಾಗೋ ಮರಡೋನಾ ಅವರನ್ನು ಗೋವಾ ಶೋಕದಲ್ಲಿ ಮುಳುಗಿದೆ. ಅವರ ಸ್ಮರಣಾರ್ಥ ಆಳೆತ್ತರ ಪ್ರತಿಮೆಯನ್ನು ನಿರ್ಮಿಸಲಾಗುವುದು ಎಂದು ಸಚಿವ ಮೈಕಲ್ ಲೋಬೋ ಹೇಳಿದ್ದಾರೆ.
ಮಹಾರಾಷ್ಟ್ರ ಮೂಲದ ಶಿಲ್ಪಿಯೊಬ್ಬರು ಈಗಾಗಲೇ ಪ್ರತಿಮೆ ನಿರ್ಮಾಣದಲ್ಲಿ ತೊಡಗಿದ್ದಾರೆ ಎಂದು ಕಲಂಗುಟ್ ಶಾಸಕ, ಗೋವಾದ ಬಂದರು ಖಾತೆ ಸಚಿವ ಮೈಕಲ್ ಲೋಬೋ ಪಿಟಿಐ ಜೊತೆ ಮಾತನಾಡುತ್ತಾ ಹೇಳಿದರು. 2018ರಲ್ಲೇ ಮರಡೋನಾ ಪ್ರತಿಮೆ ನಿರ್ಮಾಣದ ಬಗ್ಗೆ ಲೋಬೋ ಘೋಷಿಸಿದ್ದರು. ಆದರೆ, ಅನಿವಾರ್ಯ ಕಾರಣಗಳಿಂದ ಪ್ರತಿಮೆ ಪೂರ್ಣಗೊಂಡಿರಲಿಲ್ಲ.
ಪ್ರತಿಮೆ ನಿರ್ಮಾಣವಾದ ಬಳಿಕ ಕಂಡೋಲಿಂ ಅಥವಾ ಕಲಂಗುಟ್ ನಡುವೆ ಸ್ಥಾಪಿಸಲಾಗುವುದು, ಮರಡೋನಾ ಇಂದಿನ ಯುವ ಪೀಳಿಗೆಗೂ ಸ್ಪೂರ್ತಿಯಾಗಲಿ ಎಂಬುದು ನಮ್ಮ ಉದ್ದೇಶ ಎಂದು ಲೋಬೋ ಹೇಳಿದರು.
ಸುಮಾರು 350 ಕೆಜಿ ತೂಗುವ ಪ್ರತಿಮೆ ನಿರ್ಮಾಣದ ಮೂಲಕ ಗೋವಾ ಸರ್ಕಾರವು ರಾಜ್ಯದ ಫುಟ್ಬಾಲ್ ಸಂಸ್ಕೃತಿ ಅಭಿವೃದ್ಧಿಗೆ ಇನ್ನಷ್ಟು ಪ್ರೋತ್ಸಾಹ ನೀಡಲಿದೆ. ಕ್ರಿಸ್ಟಿಯಾನೋ ರೊನಾಲ್ಡೋ ಪ್ರತಿಮೆ ಕೂಡಾ ನಿರ್ಮಾಣವಾಗುತ್ತಿದ್ದು, ಉತ್ತರ ಜಿಲ್ಲೆಗಳಲ್ಲಿ ಸ್ಥಾಪಿಸಲಾಗುವುದು ಎಂದ ಹೇಳಿದರು. 1986 ವಿಶ್ವಕಪ್ ವಿಜೇತ ಮರಡೋನಾ ಅವರು ಅರ್ಜೆಂಟೀನಾದ ಖಾಸಗಿ ಆಸ್ಪತ್ರೆಯಲ್ಲಿ ನವೆಂಬರ್ 25ರಂದು ಹೃದಯ ಸ್ತಂಭನಕ್ಕೊಳಗಾಗಿ ಮೃತಪಟ್ಟಿದ್ದು, ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಅಗಲಿದ್ದಾರೆ.
This News Article is a Copy of MYKHEL
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 03:02 pm
Mangalore Correspondent
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm