ಬ್ರೇಕಿಂಗ್ ನ್ಯೂಸ್
10-12-20 01:02 pm Source: MYKHEL Sadashiva ಕ್ರೀಡೆ
ಸಿಡ್ನಿ, ಡಿ.10: ಭಾರತ-ಆಸ್ಟ್ರೇಲಿಯಾ ನಡುವಿನ ನಿಯಮಿತ ಓವರ್ಗಳ ಕ್ರಿಕೆಟ್ ಮುಕ್ತಾಯಗೊಂಡಿದೆ. ಮುಂದೆ ಸಾಂಪ್ರದಾಯಿಕ ಕ್ರಿಕೆಟ್ ಮಾದರಿಯಾದ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ನೂತನ ಜೆರ್ಸಿಯೊಂದಿಗೆ ಮೈದಾನಕ್ಕಿಳಿಯಲಿದೆ. ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಭಾರತ ತಂಡಕ್ಕೆ ಹೊಸ ವಿನ್ಯಾಸದ ಕಿಟ್ ನೀಡಿದೆ.
ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲಿವೆ. ನಾಲ್ಕು ಪಂದ್ಯಗಳಲ್ಲಿ ಒಂದು ಡೇ-ನೈಟ್ ಟೆಸ್ಟ್ ಕೂಡ ಸೇರಿದೆ. ಬಹು ನಿರೀಕ್ಷಿತ ಈ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ಡಿಸೆಂಬರ್ 17ರಿಂದ ಆರಂಭಗೊಳ್ಳಲಿದೆ. ಭಾರತದ ನೂತನ ಟೆಸ್ಟ್ ಜೆರ್ಸಿಯಲ್ಲಿ ಪ್ರಮುಖ ಪ್ರಾಯೋಜಕರ ಹೆಸರು/ಲೋಗೋ ಶರ್ಟ್ ಮಧ್ಯದಲ್ಲಿರಲಿದೆ ಮತ್ತು ಎದ್ದು ಕಾಣಲಿದೆ. ಈ ಮೊದಲು ಪ್ರಧಾನ ಪ್ರಾಯೋಜಕರ ಲೋಗೋ ಜೆರ್ಸಿಯ ಬಲ ಮೇಲ್ಭಾಗದಲ್ಲಿತ್ತು. ವಿದ್ಯಾಭ್ಯಾಸ ಸಂಸ್ಥೆ ಬೈಜೂಸ್ ಸದ್ಯ ಟೀಮ್ ಇಂಡಿಯಾದ ಪ್ರಧಾನ ಪ್ರಾಯೋಜಕ. ಇನ್ನು ಕಿಟ್ ಡಿಸೈನರ್ ಸ್ಥಾನವನ್ನು ಎಂಪಿಎಲ್ ಪಡೆದುಕೊಂಡಿದೆ.
ಭಾರತ 'ಎ' ಮತ್ತು ಆಸ್ಟ್ರೇಲಿಯಾ 'ಎ' ನಡುವಿನ ಮೊದಲ ಅಭ್ಯಾಸ ಪಂದ್ಯ ಡ್ರಾದೊಂದಿಗೆ ಅಂತ್ಯಗೊಂಡಿದೆ. ಎರಡನೇ ಅಭ್ಯಾಸ ಪಂದ್ಯ ಡಿಸೆಂಬರ್ 11ರಂದು ನಡೆಯಲಿದೆ. ಟೆಸ್ಟ್ ಸರಣಿಯ ಆರಂಭಿಕ ಪಂದ್ಯದ ಬಳಿಕ ನಾಯಕ ವಿರಾಟ್ ಕೊಹ್ಲಿ ರಜೆ ಪಡೆದುಕೊಳ್ಳಲಿದ್ದಾರೆ. ತಂದೆಯಾಗುವ ನಿರೀಕ್ಷೆಯಿರುವುದರಿಂದ ಕೊಹ್ಲಿ ಈಗಾಗಲೇ ಪಿತೃತ್ವ ರಜೆ ಮಂಜೂರು ಮಾಡಿಕೊಂಡಿದ್ದಾರೆ.
This News Article is a Copy of MYKHEL
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm