ಬ್ರೇಕಿಂಗ್ ನ್ಯೂಸ್
15-12-20 04:17 pm Source: MYKHEL ಕ್ರೀಡೆ
ಗೋವಾ: ಜೆಮ್ಷೆಡ್ಪುರ ಎಫ್ ಸಿ ಪರ ನೆರಿಜಸ್ ವಾಸ್ಕಿಸ್ (9ನೇ ನಿಮಿಷ) ಹಾಗೂ ಮುಂಬೈ ಸಿಟಿ ಪರ ಬಾರ್ಥಲೋಮ್ಯೊ ಒಗ್ಬಚೆ (15ನೇ ನಿಮಿಷ) ಗಳಿಸಿದ ಗೋಲುಗಳ ನೆರವಿನಿಂದ ಹೀರೋ ಇಂಡಿಯನ್ ಸೂಪರ್ ಲೀಗ್ ನ 28ನೇ ಪಂದ್ಯ 1-1 ಗೋಲಿನಿಂದ ಡ್ರಾಗೊಂಡಿತು. ನಿರೀಕ್ಷೆಯಂತೆ ಮುಂಬೈ ಸಿಟಿ ಹಾಗೂ ಜೆಮ್ಷೆಡ್ಪುರ ತಂಡಗಳ ನಡುವಿನ ಪ್ರಥಮಾರ್ಧ ಅತ್ಯಂತ ರೋಚಕವಾಗಿ ನಡೆಯಿತು. ಆಕ್ರಮಣಕಾರಿ ಆಟವಾಡಿದ ಇತ್ತಂಡಗಳಿಗೆ ಸಮಬಲದ ಯಶಸ್ಸು.
ಬಾರ್ಥಲೋಮ್ಯೋ ಒಗ್ಬಚೆ ಮಾಡಿದ ಪ್ರಮಾದದಿಂದಾಗಿ ಜೆಎಫ್ ಸಿ 9ನೇ ನಿಮಿಷದಲ್ಲಿ ಗೊಲು ಗಳಿಸಿ ಮುನ್ನಡೆಯಿತು. ನೆರಿಜಸ್ ವಾಸ್ಕಿಸ್ ಗಳಿಸಿ ಗೋಲು ತಂಡಕ್ಕೆ ಮುನ್ನಡೆ ತಂದುಕೊಟ್ಟಿತು. ಪಂದ್ಯದ ಆರಂಭದಲ್ಲಿ ಸಾಮಾನ್ಯ ಪಾಸ್ ಗಳು ಉದಾಸೀನದಿಂದ ಕೂಡಿರುತ್ತದೆ. ಒಗ್ಬಚೆ ನೀಡಿದ ಪಾಸ್ ಅದೇ ರೀತಿಯಿಂದ ಕೂಡಿತ್ತು.
ಜಾಕಿಚಾಂದ್ ಸಿಂಗ್ ಈ ಪಾಸನ್ನು ನಿಯಂತ್ರಿಸಿದರು. ವೇಗದಲ್ಲಿ ಚೆಂಡನ್ನು ಮುನ್ನಡೆಸಿದ ಸಿಂಗ್ ಪೆನಾಲ್ಟಿ ವಲಯಕ್ಕೆ ಚೆಂಡನ್ನು ಪಾಸ್ ಮಾಡಿದರು. ಸಮಯ ಹಾಗೂ ಅಂತರ ಎರಡರ ಸದುಪಯೋಗ ಪಡೆದ ವಾಸ್ಕಿಸ್ ಸುಲಭವಾಗಿ ಗೋಲು ಗಳಿಸಿದರು.
ಸಂಭ್ರಮ ಹೆಚ್ಚು ಕಾಲ ಉಳಿಯಲಿಲ್ಲ ಜೆಎಫ್ ಸಿ ಯ ಈ ಮುನ್ನಡೆಯ ಸಂಭ್ರಮ ಹೆಚ್ಚು ಕಾಲ ಉಳಿಯಲಿಲ್ಲ. ಜೆಎಫ್ ಸಿ ಗೋಲು ಗಳಿಸುವಲ್ಲಿ ಕಾರಣರಾಗಿದ್ದ ಒಗ್ಬಚೆ ತಮ್ಮ ತಂಡಕ್ಕೆ ನೆರವಾಗಿ ಆ ನೋವನ್ನು ಕೂಡಲೇ ಮರೆಯುವಂತೆ ಮಾಡಿದರು. ಲೆ ಫ್ರಾಂಡೆ ಅವರ ಕಾರ್ನರ್ ಕಿಕ್ ಬಿಪಿನ್ ಸಿಂಗ್ ಅವರ ನಿಯಂತ್ರಣಕ್ಕೆ ಸಿಕ್ಕಿತು. ಅವರು ಚೆಂಡನ್ನು ಬಾರ್ಥಲೋಮ್ಯೊ ಒಗ್ಬಚೆಗೆ ನೀಡಿದರು. ಒಗ್ಬಚೆ ಎದುರಾಳಿ ತಂಡದ ಗೋಲ್ ಕೀಪರ್ ಟಿ ಪಿ ರೆಹನೇಶ್ ಅವರನ್ನು ವಂಚಿಸುವಲ್ಲಿ ಸಫಲರಾದರು. ಪಂದ್ಯ 1-1ರಲ್ಲಿ ಸಮಬಲಗೊಂಡಿತು. ಐಟರ್ ಮನ್ರಾಯ್ ಅವರು ಎರಡನೇ ಬಾರಿಗೆ ರೆಡ್ ಹಳದಿ ಕಾರ್ಡ್ ಗಳಿಸಿ ರೆಡ್ ಕಾರ್ಡ್ ಮೂಲಕ ಅಂಗಣದಿಂದ ಹೊರನಡೆದದ್ದು ಟಾಟಾ ಪಡೆಗೆ ತುಂಬಲಾರದ ನಷ್ಟವಾಯಿತು. ಕೇವಲ 10 ಮಂದಿ ಆಟಗಾರರಿದ್ದರೂ ಜೆಎಫ್ ಸಿ ಉತ್ತಮ ರೀತಿಯಲ್ಲಿ ಹೋರಾಟ ನೀಡಿತು.
This News Article is a Copy of MYKHEL
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm