ಬ್ರೇಕಿಂಗ್ ನ್ಯೂಸ್
16-12-20 02:39 pm Source: MYKHEL Madhukara Shetty ಕ್ರೀಡೆ
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಶುಕ್ರವಾರ ಅಡಿಲೇಡ್ನಲ್ಲಿ ಈ ಪಂದ್ಯ ಆರಂಭವಾಗಲಿದ್ದು ಈ ಪಂದ್ಯ ಡೇ-ನೈಟ್ ಪಂದ್ಯವಾಗಿ ಸಾಗಲಿದೆ. ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಆಡುವ 11 ಆಟಗಾರರ ಪಟ್ಟಿಯನ್ನು ಬಿಸಿಸಿಐ ಘೋಷಿಸಿದೆ.
ಕೋಹ್ಲಿ ನೇತೃತ್ವದ ಈ ತಂಡದ ಆರಂಭಿಕ ಆಟಗಾರರು ಯಾರು ಎಂಬ ಪ್ರಶ್ನೆಗೆ ಉತ್ತರ ದೊರಕಿದೆ. ಮಯಾಂಕ್ ಅಗರ್ವಾಲ್ ಜೊತೆಗೆ ಪೃಥ್ವಿ ಶಾ ಟೀಮ್ ಇಂಡಿಯಾ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಶುಭ್ಮನ್ ಗಿಲ್ ಹಾಗೂ ಕೆಎಲ್ ರಾಹುಲ್ಗೆ ಈ ತಂಡದಲ್ಲಿ ನಿರಾಸೆ ಉಂಟಾಗಿದೆ.

ಆಡುವ ಬಳಗದಲ್ಲಿಲ್ಲ ರಾಹುಲ್ ಕೆಎಲ್ ರಾಹುಲ್
ಮಯಾಂಕ್ ಅಗರ್ವಾಲ್ ಜೊತೆಗೆ ಇನ್ನಿಂಗ್ಸ್ ಆರಂಭಿಸುವ ನಿರೀಕ್ಷೆಯಿತ್ತು. ಆದರೆ ಈ ತಂಡದಲ್ಲಿ ಕೆಎಲ್ ರಾಹುಲ್ ಅವರನ್ನು ಹೊರಗಿಡಲಾಗಿದೆ. ಸೀಮಿತ ಓವರ್ಗಳಲ್ಲಿ ಅದ್ಭುತ ಫಾರ್ಮ್ನಲ್ಲಿರುವ ರಾಹುಲ್ ಟೆಸ್ಟ್ನಲ್ಲಿ ಸುದೀರ್ಘ ಸಮಯದಿಂದ ಅವಕಾಶವನ್ನು ಪಡೆಯುವಲ್ಲಿ ವಿಫಲರಾಗಿದ್ದಾರೆ.

ಅಗ್ರ ಹಾಗೂ ಮಧ್ಯಮ ಕ್ರಮಾಂಕ
ಅಗ್ರ ಕ್ರಮಾಂಕದಲ್ಲಿ ನಾಯಕ ವಿರಾಟ್ ಕೊಹ್ಲಿಗೆ ಚೇತೇಶ್ವರ್ ಪೂಜಾರ ಸಾಥ್ ನೀಡಲಿದ್ದಾರೆ. ಅಜಿಂಕ್ಯ ರಹಾನೆ, ಹನುಮ ವಿಹಾರಿ, ವೃದ್ಧಿಮಾನ್ ಸಾಹ ಮಧ್ಯಮ ಕ್ರಮಾಂಕದಲ್ಲಿ ಆಸರೆಯಾಗಲಿದ್ದಾರೆ. ವಿಕೆಟ್ ಕೀಪಿಂಗ್ಗೆ ವಿಚಾರವಾಗಿ ಪಂತ್ ಹಾಗೂ ಸಾಹಾ ಮಧ್ಯೆ ಯಾರ ಎಂಬ ಪ್ರಶ್ನೆಗೂ ಸಾಹಾ ಅವರೇ ಮೊದಲ ಆಯ್ಕೆಯಾಗಿದ್ದಾರೆ.

ಬೌಲಿಂಗ್ ವಿಭಾಗ
ಬೌಲಿಂಗ್ ವಿಭಾಗದಲ್ಲಿ ರವಿಚಂದ್ರನ್ ಅಶ್ವಿನ್ ಸ್ಪಿನ್ನರ್ ಆಗಿ ಕಣಕ್ಕಿಳಿಯಲಿದ್ದಾರೆ. ಮೊಹಮ್ಮದ್ ಶಮಿ ಹಾಗೂ ಜಸ್ಪ್ರೀತ್ ಬೂಮ್ರಾಗೆ ಉಮೇಶ್ ಯಾದವ್ ಮೂರನೇ ವೇಗಿಯಾಗಿ ಸಾಥ್ ನೀಡಲಿದ್ದಾರೆ. ಕುತೂಹಲಕಾರಿ ಸಂಗತಿಯೆಂದರೆ ತಂಡದಲ್ಲಿರುವ 11 ಕ್ರಿಕೆಟಿಗರೂ ಕೂಡ ಬಲಗೈ ಆಟಗಾರರಾಗಿದ್ದಾರೆ.

ಸಂಪೂರ್ಣ ಆಟಗಾರರ ಪಟ್ಟಿ
ಟೀಮ್ ಇಂಡಿಯಾ: ವಿರಾಟ್ ಕೊಹ್ಲಿ (ನಾಯಕ), ಮಯಾಂಕ್ ಅಗರ್ವಾಲ್, ಪೃಥ್ವಿ ಶಾ, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ(ಉಪನಾಯಕ), ಹನುಮ ವಿಹಾರಿ, ವೃದ್ಧಿಮಾನ್ ಸಾಹ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬೂಮ್ರಾ
This News Article is a Copy of MYKHEL
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am