ಬ್ರೇಕಿಂಗ್ ನ್ಯೂಸ್
17-12-20 02:47 pm Source: MYKHEL ಕ್ರೀಡೆ
ಭಾರತದ ದಿಗ್ಗಜ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಟೀಮ್ ಇಂಡಿಯಾದ ಇಬ್ಬರು ದಿಗ್ಗಜ ಆಟಗಾರರ ಬಗ್ಗೆ ಕಟು ಮಾತುಗಳಲ್ಲಿ ಟೀಕೆಯನ್ನು ಮಾಡಿದ್ದಾರೆ. ಟೀಮ್ ಇಂಡಿಯಾದ ಆರಂಭಿಕರಾದ ಪೃಥ್ವಿ ಶಾ ಹಾಗೂ ಮಯಾಂಕ್ ಅಗರ್ವಾಲ್ ಮೊದಲ ಟೆಸ್ಟ್ನಲ್ಲಿ ಭಾರತಕ್ಕೆ ಉತ್ತಮ ಆರಂಭವನ್ನು ನೀಡಲು ವಿಫಲರಾದರು.
ಇಬ್ಬರು ಬ್ಯಾಟ್ಸ್ಮನ್ಗಳ ಬ್ಯಾಟಿಂಗ್ ತಂತ್ರದ ಬಗ್ಗೆ ಗವಾಸ್ಕರ್ ಹರಿಹಾಯ್ದರು. ಇಬ್ಬರು ಬ್ಯಾಟ್ಸ್ಮನ್ಗಳು ಬ್ಯಾಟಿಂಗ್ ಮಾಡುವ ವೇಳೆ ಮಾಡಿದ ದೊಡ್ಡ ತಪ್ಪನ್ನು ಅವರು ಬೊಟ್ಟು ಮಾಡಿ ಹೇಳಿದರು. ಬ್ಯಾಟ್ ಹಾಗೂ ಪ್ಯಾಡ್ನ ಮಧ್ಯೆ ದೊಡ್ಡ ಅಂತರವನ್ನು ಇಟ್ಟು ಬ್ಯಾಟಿಂಗ್ ಮಾಡಿದ್ದಾರೆ. ಆ ಅಂತರದಲ್ಲಿ ಟ್ರಕ್ ಒಂದು ಸಾಗಬಹುದು ಎಂದು ಟೀಕಿಸಿದ್ದಾರೆ.
ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ಪಂದ್ಯದ ಎರಡನೇ ಇನ್ನಿಂಗ್ಸ್ನಲ್ಲಿ ಪೃಥ್ವಿ ಶಾ ಅವರನ್ನು ಶೂನ್ಯಕ್ಕೆ ಬಲಿ ತೆಗೆದುಕೊಂಡರು. ಉತ್ತಮ ಲೆಂತ್ ಎಸೆತವನ್ನು ಬ್ಲಾಕ್ ಮಾಡಲು ಮುಂದಾದ ಶಾ ಅದರಲ್ಲಿ ವಿಫಲರಾದರು. ಬ್ಯಾಟ್ನ ಒಳಭಾಗಕ್ಕೆ ಸವರಿದ ಚೆಂಡು ವಿಕೆಟ್ಗೆ ಬಡಿದಿತ್ತು. ಅದಾದ ಬಳಿಕ 18ನೇ ಓವರ್ನಲ್ಲಿ ಪ್ಯಾಟ್ ಕಮ್ಮಿನ್ಸ್ ಎಸೆದ ತೀಕ್ಷ್ಣವಾದ ಎಸೆತ ಬ್ಯಾಟ್ಅನ್ನು ವಂಚಿಸಿ ವಿಕೆಟ್ಗೆ ಬಡಿದಿತ್ತು. "ನೀವು ಬ್ಯಾಟ್ ಹಾಗೂ ಪ್ಯಾಡ್ನ ನಡುವೆ ಅಷ್ಟು ಅಂತರವನ್ನು ಬಿಡುವುದರ ಜೊತೆಗೆ ತಡವಾಗಿ ಚಲನೆಯನ್ನು ಮಾಡುತ್ತೀರಿ. ಆಗ ಚೆಂಡು ಬ್ಯಾಟ್ನ ಒಳಭಾಗವನ್ನು ಸವರಿಕೊಂಡು ಹೋಗುತ್ತದೆ ಅಥವಾ ಬ್ಯಾಟ್ ಹಾಗೂ ಪ್ಯಾಡ್ನ ಮಧ್ಯೆ ನುಸುಳಿಕೊಮಡು ಹೋಗುತ್ತದೆ" ಎಂದು ಗವಾಸ್ಕರ್ 7 ಕ್ರಿಕೆಟ್ನಲ್ಲಿ ಮಾತನಾಡುತ್ತಾ ಹೇಳಿದ್ದಾರೆ.

ಇನ್ನಿಂಗ್ಸ್ನ ಆರಂಬದಲ್ಲಿ ನೀವು ಬ್ಯಾಟ್ ಹಾಗೂ ಪ್ಯಾಡ್ ಅತ್ಯಂತ ಸಮೀಪದಲ್ಲಿರುವಂತೆ ನೋಡಿಕೊಳ್ಳಬೇಕು. ಅಂದರೆ ಆರಭವದಲಲ್ಇ ನಿಮ್ಮ ಬ್ಯಾಟ್ನ ವೇಗ ಕಡಿಮೆಯಿರಬೇಕು. ಹೆಚ್ಚು ಎಸೆತ ಎದುರಿಸಿದಂತೆ ನಿಮ್ಮ ಆತ್ಮವಿಶ್ವಾಸ ಹೆಚ್ಚಾದಾಗ ನಿಮ್ಮ ಎಂದಿದ ಹೊಡೆತಗಳನ್ನು ನಿಡವು ಬಾರಿಸಬಹುದು. ಆದರೆ ಆರಂಭದಲ್ಲಿ ನೀವಿನ್ನೂ ಲಯಕ್ಕೆ ಮರಳಬೇಕಿದ್ದರೆ ನಿಮ್ಮ ಬ್ಯಾಟ್ನ ವೇಗವನ್ನು ಕಡಿಮೆ ಮಾಡಬೇಕು" ಎಂದು ಗವಾಸ್ಕರ್ ಹೇಳಿಕೆ ನೀಡಿದ್ದಾರೆ.
This News Article is a Copy of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm