ಬ್ರೇಕಿಂಗ್ ನ್ಯೂಸ್
17-12-20 02:55 pm Source: MYKHEL ಕ್ರೀಡೆ
ಗೋವಾ, ಡಿಸೆಂಬರ್ 17: ಪ್ರತಿಯೊಂದು ಪಂದ್ಯದಲ್ಲೂ ಗೋಲು ಗಳಿಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡುತ್ತಿದ್ದ ರಾಯ್ ಕೃಷ್ಣ ಗೋವಾ ವಿರುದ್ಧದ ಪಂದ್ಯದಲ್ಲೂ ಪೆನಾಲ್ಟಿ ಮೂಲಕ ಗೋಲು ಗಳಿಸಿ 1-0 ಅಂತರದ ಜಯಕ್ಕೆ ಕಾರಣರಾದರು. ಇದರೊಂದಿಗೆ ಪ್ರತಿ ಬಾರಿಯೂ ದ್ವಿತಿಯಾರ್ಧದಲ್ಲಿ ಗೋಲು ಗಳಿಸುವ ಎಟಿಕೆಎಂಬಿ ಮತ್ತೊಮ್ಮೆ ಯಶಸ್ಸು ಕಂಡಿತು. ಈ ಜಯದೊಂದಿಗೆ ಎಟಿಕೆಎಂಬಿ ಅಂಕ
ಉತ್ತಮ ಆಟಗಾರರಿಂದ ಕೂಡಿದ ತಂಡಗಳೆರಡು ಪರಸ್ಪರ ಮುಖಾಮುಖಿಯಾದಾಗ ಅಲ್ಲಿ ಗೋಲಿಗೆ ಅವಕಾಶ ಕಡಿಮೆ ಇರುತ್ತದೆ ಎಂಬುದಕ್ಕೆ ಎಟಿಕೆ ಮೂಹನ್ ಬಾಗನ್ ಮತ್ತು ಎಫ್ ಸಿ ಗೋವಾ ನಡುವಿನ ಪಂದ್ಯದ ಪ್ರಥಮಾರ್ಧ ಸಾಕ್ಷಿಯಾಯಿತು. ಈ ಮೂಲಕ ಎಟಿಕೆಎಂಬಿ ಮತ್ತೊಮ್ಮೆ ಪ್ರಥಮಾರ್ಧದಲ್ಲಿ ಗೋಲು ಗಳಿಸುವಲ್ಲಿ ವಿಫಲವಾಯಿತು.

ಆರಂಭದಲ್ಲೇ ಎಟಿಕೆಎಂಬಿ ಆಕ್ರಮಣಕಾರಿ ಆಟಕ್ಕೆ ಮನಮಾಡಿತು ಪರಿಣಾಮ ತಿರಿ ಮತ್ತು ಡೇವಿಡ್ ವಿಲಿಯಮ್ಸ್ ಗೆ ಹಳದಿ ಕಾರ್ಡಿನ ಫಲ. ಎಟಿಕೆ ಮೋಹನ್ ಬಾಗನ್ ತಂಡಕ್ಕೆ ಎರಡು ಬಾರಿ ಫ್ರೀ ಕಿಕ್ ಅವಕಾಶ ಸಿಕ್ಕಿತ್ತು. ಆದರೆ ಡೇವಿಡ್ ವಿಲಿಯಮ್ಸ್ ಅದರ ಸದುಪಯೋಗ ಪಡೆಯುವಲ್ಲಿ ವಿಫಲವಾದರು. ಗೋವಾಕ್ಕೆ ಸಿಕ್ಕಿದ ಅವಕಾಶ ಕಡಿಮೆ. ಒಂದು ನಿಮಿಷದ ವಿರಾಮದ ನಂತರವೂ ಡೇವಿಡ್ ವಿಲಿಯಮ್ಸ್ ಗೆ ಅದ್ಭುತ ಗೋಲು ಗಳಿಸುವ ಅವಕಾಶ ಸಿಕ್ಕಿತ್ತು. ಆದರೆ ಅದೃಷ್ಟ ಇರಲಿಲ್ಲ. ತುಳಿದ ಚೆಂಡು ಗೋಲ್ ಕೀಪರ್ ನನ್ನು ವಂಚಿಸಿದರೂ ಗೋಲ್ ಬಾಕ್ಸ್ ನ ಕಂಬಕ್ಕೆ ಬಡೆದು ಹೊರ ಸಾಗಿತು. ಇದರೊಂದಿಗೆ ಪ್ರಥಮಾರ್ಧ ಗೋಲಿಲ್ಲದೆ ಕೊನೆಗಗೊಂಡಿತು.

ಹೀರೋ ಇಂಡಿಯನ್ ಸೂಪರ್ ಲೀಗ್ ನಲ್ಲಿ ಬಲಿಷ್ಠರೆನಿಸಿಕೊಂಡಿರುವ ತಂಡಗಳಾದ ಎಫ್ ಸಿ ಗೋವಾ ಹಾಗೂ ಎಟಿಕೆ ಮೂಹನ್ ಬಾಗನ್ ತಂಡಗಳು ಮುಖಾಮುಖಿಯಾದವು. ಹಿಂದಿನ ಎರಡು ಪಂದ್ಯಗಳಲ್ಲಿ ಜಯ ಗಳಿಸಲು ವಿಫಲವಾಗಿರುವ ಎಟಿಕೆ ಇಲ್ಲಿ ಗೆಲ್ಲುವ ಆತ್ಮವಿಶ್ವಾಸ ಹೊಂದಿದೆ. ಆತಿಥೇಯ ಎಟಿಕೆಎಂಬಿ ಸತತ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಉತ್ತಮ ರೀತಿಯಲ್ಲೇ ಋತುವನ್ನು ಆರಂಭಿಸಿತ್ತು. ಆದರೆ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸುವ ಮೂಲಕ ಅಗ್ರ ಸ್ಥಾನದಿಂದ ಕುಸಿಯಿತು. ಪ್ರಥಮಾರ್ಧದಲ್ಲಿ ಕೋಲ್ಕೊತಾ ಮೂಲದ ತಂಡ ಇದುವರೆಗೆ ನಡೆದ ಐದು ಪಂದ್ಯಗಳಲ್ಲಿ ಗೋಲು ಗಳಿಸಿರಲಿಲ್ಲ. ಗಳಿಸಿದ ಎಲ್ಲಾ ಗೋಲುಗಳು ದ್ವಿತಿಯಾರ್ಧದಲ್ಲೇ ದಾಖಲಾದವು. ಇಂದಿನ ಪಂದ್ಯದಲ್ಲಿ ಎಟಿಕೆಎಂಬಿ ದ್ವಿತಿಯಾರ್ಧದಲ್ಲೇ ಎದುರಾಳಿ ತಂಡಕ್ಕೆ ಹೆಚ್ಚು ಗೋಲುಗಳನ್ನು ನೀಡಿರುವ ತಂಡದ ವಿರುದ್ಧ ಆಡುತ್ತಿದೆ
This News Article is a Copy of MYKHEL
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm