ಬ್ರೇಕಿಂಗ್ ನ್ಯೂಸ್
21-12-20 04:52 pm Source: MYKHEL ಕ್ರೀಡೆ
ಗೋವಾ: ಹೀರೋ ಇಂಡಿಯನ್ ಸೂಪರ್ ಲೀಗ್ ನಲ್ಲಿ ಅಜೇಯವಾಗಿ ಮುನ್ನುಗ್ಗುತ್ತಿರುವ ತಂಡ ಬೆಂಗಳೂರು ಎಫ್ ಸಿ ತಂಡ ಸೋಮವಾರ ಫಟೋರ್ಡಾ ಅಂಗಣದಲ್ಲಿ ಕೋಲ್ಕೊತಾದ ಬಲಿಷ್ಠ ತಂಡ ಎಟಿಕೆ ಮೋಹನ್ ಬಾಗನ್ ಎದುರಾಗಲಿದೆ. ಅಂಕಪಟ್ಟಿಯಲ್ಲಿ 2 ಮತ್ತು 3ನೇ ಸ್ಥಾನದಲ್ಲಿರುವ ಎಟಿಕೆಎಂಬಿ ಮತ್ತು ಬೆಂಗಳೂರು ತಂಡದ ಹೋರಾಟದಲ್ಲಿ ಗೆಲ್ಲುವ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ತಲುಪಲಿದೆ.
ಆಡಿರುವ ಆರು ಪಂದ್ಯಗಳಲ್ಲಿ ಮೂರು ಜಯ ಮತ್ತು ಮೂರು ಡ್ರಾ ಕಂಡಿರುವ ಬೆಂಗಳೂರು ಎಫ್ ಸಿ ಅಂಕಪಟ್ಟಿಯಲ್ಲಿ 12 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ, ನಾಳೆಯ ಜಯ ಸುನಿಲ್ ಛೆಟ್ರಿ ಪಡೆಯನ್ನು ಅಗ್ರಸ್ಥಾನಕ್ಕೆ ಕೊಂಡೊಯ್ಯಲಿದೆ.

ಆರು ಪಂದ್ಯಗಳಲ್ಲಿ ನಾಲ್ಕು ಜಯ ಮತ್ತು 1 ಡ್ರಾ ಮತ್ತು 1 ಸೋಲು ಕಂಡಿರುವ ಎಟಿಕೆಎಂಬಿ ಎರಡನೇ ಸ್ಥಾನದಲ್ಲಿದ್ದು ನಾಳೆಯ ಪಂದ್ಯದಲ್ಲಿ ಜಯ ಗಳಿಸಿ ಮುನ್ನಡೆಯುವ ಹಂಬಲದಲ್ಲಿದೆ. ಲೀಗ್ ನ ಎರಡು ಬಲಿಷ್ಠ ತಂಡಗಳು ಮುಖಾಮುಖಿಯಾದಾಗ ಅಲ್ಲಿ ಕುತೂಹಲ ಮನೆ ಮಾಡುವುದು ಸಹಜ.
ಎಟಿಕೆಎಂಬಿ ಉತ್ತಮ ಆಕ್ರಮಣಕಾರಿ ಆಟಗಾರರಿಂದ ಕೂಡಿದೆ., ಅದೇ ರೀತಿ ಡಿಫೆನ್ಸ್ ವಿಭಾಗದಲ್ಲೂ ಯಶಸ್ಸು ಕಂಡಿದೆ. ಬೆಂಗಳೂರಿನ ಅಂಕಿಅಂಶಗಳು ಕೂಡ ಉತ್ತಮವಾಗಿದೆ. ಎರಡೂ ತಂಡಗಳು ಟಾಪ್ 4ರಲ್ಲಿ ಇರುವುದರಿಂದ ಪಂದ್ಯ ಉತ್ತಮ ಹೋರಾಟದಿಂದ ಕೂಡಿರುವುದು ಸಹಜ.
ತಮ್ಮ ತಂಡದ ಸಾಮರ್ಥ್ಯದ ಬಗ್ಗೆ ನಂಬಿಕೆ ಇಟ್ಟುಕೊಂಡಿರುವ ಎಟಿಕೆಎಂಬಿ ಕೋಚ್ ಅಂಟೋನಿಯೋ ಹಬ್ಬಾಸ್ ತಮ್ಮ ತಂಡ ಮೂರು ಅಂಕ ಗಳಿಸುವ ಗುರಿ ಹೊಂದಿದೆ ಎಂದಿದ್ದಾರೆ.
This News Article is a Copy of MYKHEL
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm