ಬ್ರೇಕಿಂಗ್ ನ್ಯೂಸ್
22-12-20 03:11 pm Source: MYKHEL ಕ್ರೀಡೆ
ಕೊಪ್ಪಳ, ಡಿ.22: ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಪರಿಶಿಷ್ಟ ಜಾತಿ ಉಪಯೋಜನೆ ಯುವಜನರಿಗೆ ಕ್ರೀಡಾ ಅಂಕಣ ಮಾರ್ಕರ್ (ಗುರುತುದಾರರು) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಯುವಜನರಿಗೆ ಕ್ರೀಡಾ ಅಂಕಣ ಮಾರ್ಕರ್ ತರಬೇತಿಗೆ ಕೇಂದ್ರ ಕಛೇರಿ ಆದೇಶದನ್ವಯ ಅರ್ಜಿ ಆಹ್ವಾನಿಸಲಾಗಿದ್ದು, ಕೊಪ್ಪಳ ಜಿಲ್ಲೆಯ ಆಸಕ್ತ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಯುವಜನರು ಡಿ. 28 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ತರಬೇತಿಯನ್ನು ಇಲಾಖೆ ವತಿಯಿಂದ ಕ್ರೀಡಾಶಾಲೆ ಕೂಡಿಗೆ,ಕುಶಾಲ್ ನಗರ, ಕೊಡಗು ಜಿಲ್ಲೆಯಲ್ಲಿ ಆಯೋಜಿಸುತ್ತಾರೆ. ತರಬೇತಿಯು ವಸತಿ ಸಹಿತವಾಗಿದ್ದು, ಹಾಜರಾಗುವ ಯುವಕ/ಯುವತಿಯರಿಗೆ ಪ್ರಮಾಣ ಪತ್ರ, ಕ್ರೀಡಾಗಂಟು, ಊಟೋಪಹಾರ, ವಸತಿ ವ್ಯವಸ್ಥೆ ಹಾಗೂ ಪ್ರಯಾಣ ಭತ್ಯೆಯನ್ನು ಇಲಾಖೆಯಿಂದ ನೀಡಲಾಗುತ್ತದೆ. ಯುವತಿಯರ ಸಂಖ್ಯೆಯನ್ನು ಆಧರಿಸಿ ಪ್ರತ್ಯೇಕವಾಗಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ.
ಆಸಕ್ತ ಯುವಜನರು ತರಬೇತಿಯ ನಿಗದಿತ ನಮೂನೆ ಅರ್ಜಿಗಳನ್ನು ಕಛೇರಿಯಿಂದ ಪಡೆಯಬೇಕು. ತರಬೇತಿಯನ್ನು ಕರ್ನಾಟಕದ ಯುವಜನರಿಗೆ ಮಾತ್ರ ನೀಡಲಾಗುತ್ತದೆ. ಅರ್ಜಿದಾರರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಲಗತ್ತಿಸಬೇಕು.(ಆರ್.ಡಿ.ನಂಬರ್ ಇರುವ ಪ್ರಮಾಣ ಪತ್ರ). ಅರ್ಜಿದಾರರು 18 ರಿಂದ 35 ವರ್ಷ ವಯಸ್ಸಿನವರಾಗಿರಬೇಕು. ಕ್ರೀಡಾ ಅಂಕಣ ಗುರುತುದಾರರು ಕನಿಷ್ಠ 7ನೇ ತರಗತಿ ಓದಿರಬೇಕು. ಅರ್ಜಿದಾರರು ಸ್ವಯಂ ಧೃಡೀಕೃತ ಪ್ರಮಾಣ ಪತ್ರಗಳನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು. ಅರ್ಜಿದಾರರ ಹೆಸರು ಹಾಗೂ ಭಾವಚಿತ್ರವುಳ್ಳ ಆಧಾರ್, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ ಅಥವಾ ಸರ್ಕಾರದಿಂದ ವಿತರಿಸಿರುವ ಗುರುತಿನ ಚೀಟಿಯ ನಕಲನ್ನು ಲಗತ್ತಿಸಬೇಕು. ಬ್ಯಾಂಕ್ ಖಾತೆ ಕಡ್ಡಾಯವಾಗಿ ಅರ್ಜಿದಾರರ ಹೆಸರಿನಲ್ಲಿರಬೇಕು ಸದರಿ ಪ್ರತಿ ಲಗತ್ತಿಸುವುದು. ಅರ್ಜಿದಾರರು ದೈಹಿಕವಾಗಿ ಸಧೃಡ ಹಾಗೂ ಚಟುವಟಿಕೆಯಿಂದ ಕೂಡಿದವರಾಗಿರಬೇಕು. ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಸಂದರ್ಭದಲ್ಲಿ ವೈದ್ಯಕೀಯ ಪ್ರಮಾಣ ಪತ್ರ ಹಾಜರುಪಡಿಸಬೇಕು.
This News Article is a Copy of MYKHEL
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm