ಬ್ರೇಕಿಂಗ್ ನ್ಯೂಸ್
24-08-25 07:00 pm HK News Desk ಕ್ರೀಡೆ
ಅಹ್ಮದಾಬಾದ್, ಆ.24 : ಭಾರತೀಯ ಟೆಸ್ಟ್ ಕ್ರಿಕೆಟ್ ತಂಡದ ಸ್ಪೆಷಲಿಸ್ಟ್ ಆಟಗಾರ, ರಾಹುಲ್ ದ್ರಾವಿಡ್ ಬಳಿಕ ಭಾರತ ಟೆಸ್ಟ್ ತಂಡದ ಬೆನ್ನೆಲುಬು ಎನಿಸಿದ್ದ ಚೇತೇಶ್ವರ ಪೂಜಾರ ಎಲ್ಲ ಪ್ರಕಾರದ ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸಿದ್ದಾರೆ.
37 ವರ್ಷದ ಪೂಜಾರ ಭಾರತದ ಪರ 2023ರ ವಿಶ್ವ ಟೆಸ್ಟ್ ಸರಣಿಯ ಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಕೊನೆಯ ಬಾರಿ ಆಡಿದ್ದರು. ಆ ಬಳಿಕ ಅವರನ್ನು ತಂಡಕ್ಕೆ ಪರಿಗಣಿಸಿರಲಿಲ್ಲ. ಎರಡು ವರ್ಷಗಳಿಂದ ಟೆಸ್ಟ್ ತಂಡದಲ್ಲಿ ಆಡಿರದಿದ್ದರೂ ಇತ್ತೀಚೆಗೆ ಟೆಸ್ಟ್ ತಂಡಕ್ಕೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್, ರೋಹಿತ್ ಶರ್ಮ, ವಿರಾಟ್ ಕೊಹ್ಲಿ ಅವರ ಸಾಲಿಗೆ ಪೂಜಾರ ಸೇರಿದರು.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಜೆರ್ಸಿ ಧರಿಸಿ ಆಡಿದ್ದು, ಭಾರತೀಯ ಜೆರ್ಸಿಯಲ್ಲಿ ರಾಷ್ಟ್ರಗೀತೆ ಹಾಡಿದ್ದು ಸ್ಮರಣೀಯ ಕ್ಷಣಗಳು. ಅದನ್ನು ಪದಗಳಲ್ಲಿ ವರ್ಣಿಸುವುದು ಕಷ್ಟ. ಆದರೆ ಎಲ್ಲ ಒಳ್ಳೆಯ ಸಂಗತಿಗಳಿಗೆ ಒಂದು ಅಂತ್ಯ ಇದ್ದೇ ಇರುತ್ತದೆ ಎಂದು ಪೂಜಾರ ತಮ್ಮ ನಿವೃತ್ತಿಯ ಸಂದೇಶದಲ್ಲಿ ತಿಳಿಸಿದ್ದಾರೆ.
2010ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿ, ಭಾರತದ ಪರ 103 ಟೆಸ್ಟ್ ಪಂದ್ಯ ಆಡಿರುವ ಪೂಜಾರ, 5 ಏಕದಿನ ಪಂದ್ಯಗಳಲ್ಲೂ ಭಾರತವನ್ನು ಪ್ರತಿನಿಧಿಸಿದ್ದಾರೆ. ರಾಹುಲ್ ದ್ರಾವಿಡ್ ಬಳಿಕ ಮೂರನೇ ಕ್ರಮಾಂಕದ ಸ್ಥಾನ ತುಂಬಿದ ಪೂಜಾರ, ಟೆಸ್ಟ್ ನಲ್ಲಿ 43.60ರ ಸರಾಸರಿಯಲ್ಲಿ 7195 ರನ್ ಬಾರಿಸಿದ್ದು, 19 ಶತಕ, 35 ಅರ್ಧ ಶತಕಗಳನ್ನು ಬಾರಿಸಿದ್ದರು. ಅಫಘಾನಿಸ್ತಾನ ಒಂದನ್ನು ಬಿಟ್ಟು ಟೆಸ್ಟ್ ಆಡುವ ಎಲ್ಲ ದೇಶಗಳ ವಿರುದ್ಧವೂ ಶತಕ ಬಾರಿಸಿದ ಹಿರಿಮೆ ಇವರದ್ದು. ಅದರಲ್ಲೂ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ವಿರುದ್ಧ ತಲಾ 5, ಶ್ರೀಲಂಕಾ ವಿರುದ್ಧ ನಾಲ್ಕು ಶತಕ ಬಾರಿಸಿದ್ದರು. ಏಕದಿನ ಕ್ರಿಕೆಟ್ ನಲ್ಲಿ 51 ರನ್ ಅಷ್ಟೇ ಮಾಡಿದ್ದರು. ಐಪಿಎಲ್ ನಲ್ಲಿ ಕೆಕೆಆರ್, ಆರ್ ಸಿ ಬಿ ಮತ್ತು ಪಂಜಾಬ್ ತಂಡದ ಪರ ಪೂಜಾರ ಆಡಿದ್ದರು.
India’s Test cricket specialist Cheteshwar Pujara, widely regarded as the backbone of the Indian Test team after Rahul Dravid, has officially announced his retirement from all forms of cricket. With an emotional message, the 37-year-old bid farewell to the sport, stating, "All good things must come to an end."
15-05-26 10:30 pm
HK News Desk
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
16-05-26 10:13 pm
HK News Desk
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
16-05-26 10:24 pm
HK News Desk
ಎನ್ಸಿಬಿ ಅಧಿಕಾರಿಗಳಿಂದ ಮುಂದ್ರಾ ಬಂದರು ಮೇಲೆ ದಾಳಿ...
16-05-26 07:25 pm
Bharat Bus fire, Mangalore: ಟೈರ್ ಸ್ಫೋಟ; ಹಾಸನದ...
16-05-26 04:46 pm
ಮೂತ್ರ ವಿಸರ್ಜನೆಗೆ ತೆರಳಿದ್ದ ಗೋವಾ ಕಾಂಗ್ರೆಸ್ ಅಭ್ಯ...
16-05-26 11:46 am
ಮಾರುತಿ ಬ್ರೀಜಾ ಕಾರಿನಲ್ಲಿ ಹಿಂಸಾತ್ಮಕ ಗೋವು ಸಾಗಾಟ...
15-05-26 11:08 pm