ಬ್ರೇಕಿಂಗ್ ನ್ಯೂಸ್
29-12-20 03:43 pm Source: MYKHEL Sadashiva ಕ್ರೀಡೆ
ಮೆಲ್ಬರ್ನ್: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಮ್ ಇಂಡಿಯಾ ವಿಶೇಷ ದಾಖಲೆಗೆ ಕಾರಣವಾಗಿದೆ. ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್ನಲ್ಲಿ 8 ವಿಕೆಟ್ ಜಯ ದಾಖಲಿಸಿರುವ ಭಾರತ ಈ ವಿಶೇಷ ದಾಖಲೆ ನಿರ್ಮಿಸಿದೆ. ಪ್ರಮುಖ 5 ಆಟಗಾರರಿಲ್ಲದೆಯೂ ಭಾರತ ತಂಡ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಪಂದ್ಯ ಗೆದ್ದ ಹಿರಿಮೆಗೆ ಪಾತ್ರವಾಗಿದೆ.
ಮೆಲ್ಬರ್ನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ನಲ್ಲಿ 195 ರನ್, ದ್ವಿತೀಯ ಇನ್ನಿಂಗ್ಸ್ನಲ್ಲಿ 200 ರನ್ ಬಾರಿಸಿತ್ತು. ಭಾರತ ತಂಡ ಮೊದಲ ಇನ್ನಿಂಗ್ಸ್ನಲ್ಲಿ 326 ರನ್, ದ್ವಿತೀಯ ಇನ್ನಿಂಗ್ಸ್ನಲ್ಲಿ 70 ರನ್ ಬಾರಿ ಜಯ ಗಳಿಸಿದೆ. ಆರಂಭಿಕ ಪಂದ್ಯದಲ್ಲಿ ಭಾರತ ತಂಡ 8 ವಿಕೆಟ್ ಹೀನಾಯ ಸೋಲು ಕಂಡಿತ್ತು. ಆ ಸೋಲಿಗೆ ಭಾರತ ದ್ವಿತೀಯ ಪಂದ್ಯದಲ್ಲಿ ಪ್ರತೀಕಾರ ತೀರಿಸಿಕೊಂಡಿದೆ. ಮತ್ತೊಂದು ವಿಶೇಷೆಂದರೆ ದ್ವಿತೀಯ ಪಂದ್ಯದಲ್ಲಿ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್ ಇರಲಿಲ್ಲ. ಈ ಪ್ರಮುಖ ಆಟಗಾರರಿಲ್ಲದೆಯೂ ಭಾರತ ಟೆಸ್ಟ್ ಪಂದ್ಯ ಗೆದ್ದಿದೆ.
ವಿರಾಟ್ ಕೊಹ್ಲಿ ಸದ್ಯ ಪಿತೃತ್ವ ರಜೆ ಪಡೆದುಕೊಂಡಿದ್ದಾರೆ. ಗಾಯಕ್ಕೀಡಾಗಿದ್ದ ರೋಹಿತ್ ಶರ್ಮಾ ಇನ್ನಷ್ಟೇ ಟೆಸ್ಟ್ ತಂಡ ಸೇರಿಕೊಳ್ಳಬೇಕಿದೆ. ಇನ್ನು ವೇಗಿ ಮೊಹಮ್ಮದ್ ಶಮಿ ವಿಶ್ರಾಂತಿಯಲ್ಲಿದ್ದರೆ, ಇಶಾಂತ್ ಶರ್ಮಾ ಮತ್ತು ಭುವನೇಶ್ವರ್ ಕುಮಾರ್ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಅಂತೂ ಮೆಲ್ಬರ್ನ್ನಲ್ಲಿ ಭಾರತ ಪ್ರಮುಖ 5 ಆಟಗಾರರ ಹೊರತಾಗಿಯೂ ಪಂದ್ಯ ಗೆದ್ದು ಗಮನ ಸೆಳೆದಿದೆ.
This News Article is a Copy of MYKHEL
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am