ಬ್ರೇಕಿಂಗ್ ನ್ಯೂಸ್
29-12-20 03:48 pm Source: MYKHEL ಕ್ರೀಡೆ
ಗೋವಾ: ಪ್ರಸಕ್ತ ಇಂಡಿಯನ್ ಸೂಪರ್ ಲೀಗ್ ಟೂರ್ನಿಯಲ್ಲಿ ಎರಡು ಗೆಲುವಿನ ಬಳಿಕ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ಚೆನ್ನೈಯಿನ್ ಎಫ್ಸಿ ತಂಡ ಇದೀದ ಬಲಿಷ್ಠ ಎಟಿಕೆ ಮೋಹನ್ ಬಗಾನ್ ತಂಡದ ವಿರುದ್ಧವೂ ದಿಟ್ಟ ಪ್ರದರ್ಶನ ನೀಡಲಿದೆ ಎಂದು ತಂಡದ ಮುಖ್ಯ ಕೋಚ್ ಸಾಬಾ ಲಾಝ್ಲೊ ವಿಶ್ವಾಸ ಹೊರಹಾಕಿದ್ದಾರೆ. ಇಲ್ಲಿನ ಜಿಎಮ್ಸಿ ಕ್ರೀಡಾಂಗಣದಲ್ಲಿ ಮಂಗಳವಾರ ಅಂಕಪಟ್ಟಿಯ 7ನೇ ಸ್ಥಾನಿ ಚೆನ್ನೈಯಿನ್ ಎಫ್ಸಿ ತಂಡವು ಅಂಕಪಟ್ಟಿಯ 2ನೇ ಸ್ಥಾನದಲ್ಲಿರುವ ಎಟಿಕೆ ಮೋಹನ್ ಬಗಾನ್ ತಂಡದ ವಿರುದ್ಧ ಪೈಪೋಟಿ ನಡೆಸಲಿದೆ.
ಚೆನ್ನೈ ತಂಡ ಟೂರ್ನಿಯಲ್ಲಿ ಈವರೆಗೆ 7 ಫಮದ್ಯಗಳನ್ನು ಆಡಿದ್ದು ತಲಾ 2 ಗೆಲುವು ಮತ್ತು ಸೋಲಿನೊಂದಿಗೆ 3 ಪಂದ್ಯಗಳಲ್ಲಿ ಡ್ರಾ ಫಲಿಲಾಂಶ ಕಂಡು ಒಟ್ಟು 9 ಅಂಕಗಳನ್ನು ಪಡೆದುಕೊಂಡಿದೆ. ವಿಶೇಷವೆಂದರೆ ಚೆನ್ನೈ ತಂಡದ ಪರ ಎಲ್ಲಾ ವಿಭಾಗಗಳಿಂದಲೂ ಗೋಲ್ ಹರಿದುಬರುತ್ತಿದ್ದು, ಈವರೆಗೆ ಒಟ್ಟು ಆರು ಆಟಗಾರರು ಚೆಂಡನ್ನು ಗೋಲ್ ಪೆಟ್ಟಿಗೆ ಸೇರಿಸಿ ಗಮನ ಸೆಳೆದಿದ್ದಾರೆ. ಆದರೆ, ತಂಡದ ಪ್ರಮುಖ ಸ್ಟ್ರೈಕರ್ಗಳು ಯಶಸ್ಸು ಕಾಣದೇ ಇರುವುದು ಚೆನ್ನೈ ತಂಡದ ಪ್ರಮುಖ ತಲೆಬಿಸಿಯಾಗಿದೆ.
ಈ ಬಾರಿ ಅದ್ಭುತ ಆಟವಾಡುತ್ತಿರುವ ಮೋಹನ್ ಬಗಾನ್ ತಂಡದ ಎದುರು ಚೆನ್ನೈಯಿನ್ ಯಶಸ್ಸು ಕಾಣಬೇಕಾದರೆ ಮುಖ್ಯ ಸ್ಟ್ರೈಕರ್ ಯಾಕುಬ್ ಸಿಲ್ವೆಸ್ಟರ್ ತಮ್ಮ ಹಿಂದಿನ ವೈಫಲ್ಯಗಳಿಂದ ಹೊರಬಂದು ಚೆಂಡನ್ನು ಗುರಿ ಮುಟ್ಟಿಸುವ ಕಡೆಗೆ ಕಾಲ್ಚಳಕ ಪ್ರದರ್ಶಿಸಬೇಕಿದೆ.

ಗೋಲ್ಗಳು ಬರುತ್ತಿರುವುದಕ್ಕೆ ಸಂತಸ ಈ ಬಗ್ಗೆ ಮಾತನಾಡಿರುವ ತಂಡದ ಮುಖ್ಯ ಕೋಚ್ ಲಾಝ್ಲೊ, ಎಲ್ಲಾ ವಿಭಾಗಗಳಿಂದ ಗೋಲ್ಗಳು ಬರುತ್ತಿರುವುದಕ್ಕೆ ಸಂತಸ ಹೊರಹಾಕಿದ್ದಾರೆ. "ನಮ್ಮ ತಂಡದಲ್ಲಿ ಕೇವಲ ಒಬ್ಬ ಆಟಗಾರ ಮಾತ್ರ ಗೋಲ್ ಗಳಿಸುತ್ತಿಲ್ಲ. ಎಲ್ಲಾ ಮೂಲೆಗಳಿಂದಲೂ ನಮಗೆ ಗೋಲ್ಗಳು ಬರುತ್ತಿವೆ. ಎಡ, ಬಲ ಮಧ್ಯ ಎಲ್ಲ ವಿಭಾಗಗಳಲ್ಲೂ ಆಟಗಾರರು ಗೋಲ್ ತಂದುಕೊಟ್ಟಿದ್ದಾರೆ. ಇದು ಒಂದು ರೀತಿ ನಮ್ಮ ತಂಡದ ರಣತಂತ್ರ ಕೂಡ," ಎಂದು ಲಾಝ್ಲೊ ಹೇಳಿದ್ದಾರೆ. ಹೇಳಿದ್ದಾರೆ. ಆದರೆ, ಇದೇ ವೇಳೆ ಪ್ರಮುಖ ಸ್ಟ್ರೈಕರ್ಗಳು ಅವಕಾಶ ಬಳಸಿಕೊಳ್ಳದೇ ಇರುವ ಬಗ್ಗೆಯೂ ಲಾಝ್ಲೊ ಮಾತನಾಡಿದ್ದಾರೆ. ಅದರಲ್ಲಿ ಸ್ಟ್ರೈಕರ್ ಲಾಲಿಯಾನ್ಜುವಾಲ ಚಾಂಗ್ಟೆ ಹಲವು ಬಾರಿ ಗೋಲ್ ಗಳಿಸುವ ಉತ್ತಮ ಸ್ಥಿತಿಯಲ್ಲಿ ಇದ್ದರೂ ಕೂಡ ಅದನ್ನು ಪರಿವರ್ತಿಸದೇ ಹೋದರು. ಆದರೂ ಎಸ್ಸಿ ಈಸ್ಟ್ ಬೆಂಗಾಲ್ ಎದುರು ಯಶಸ್ಸು ಕಂಡರು. ಮತ್ತೊಂದೆಡೆ ಸಿಲ್ವೆಸ್ಟರ್ ಹೀನಾಯ ಪ್ರದರ್ಶನ ನೀಡಿದ್ದುಅತ್ಯಂತ ಕಡಿಮೆ ಗೋಕ್ ಗಳಿಕೆಯ ಸರಾಸರಿ (5.26) ಹೊಂದಿದ್ದಾರೆ.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm