ಬ್ರೇಕಿಂಗ್ ನ್ಯೂಸ್
            
                        31-12-20 02:34 pm Source: MYKHEL ಕ್ರೀಡೆ
            ಗೋವಾ: ಪಂದ್ಯ ಮುಗಿಯುವುದಕ್ಕೆ ಇನ್ನು ಕೆಲವೇ ನಿಮಿಷಗಳು ಬಾಕಿ ಇರುವಾಗ ಮಿಡ್ಫೀಲ್ಡರ್ ಇಶಾನ್ ಪಂಡಿತಾ (87ನೇ ನಿಮಿಷ) ಮತ್ತು ಹೆಚ್ಚುವರಿ ಅವಧಿಯಲ್ಲಿ ಸ್ಟ್ರೈಕರ್ ಇಗೋರ್ ಅಂಗುಲೊ (90+1ನೇ ನಿಮಿಷ) ದಾಖಲಿಸಿದ ಗೋಲ್ಗಳಿಂದ ಆರಂಭಿಕ ಹಿನ್ನಡೆ ಮೆಟ್ಟಿನಿಂತ ಎಫ್ಸಿ ಗೋವಾ ತಂಡ, ಪ್ರಸಕ್ತ ಸಾಲಿನ ಇಂಡಿಯನ್ ಸೂಪರ್ ಲೀಗ್ ಟೂರ್ನಿ 43ನೇ ಲೀಗ್ ಪಂದ್ಯದಲ್ಲಿ ಹೈದರಾಬಾದ್ ಎಫ್ಸಿ ಎದುರು 2-1 ಗೋಲ್ಗಳ ರೋಚಕ ಜಯ ದಾಖಲಿಸಿತು.
ಇಲ್ಲಿನ ತಿಲಕ್ ಮೈದಾನ್ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಹೈದರಾಬಾದ್ ಎಫ್ಸಿ ತಂಡಕ್ಕೆ ಗೆಲ್ಲುವ ಉತ್ತಮ ಅವಕಾಶವಿತ್ತು. 58ನೇ ನಿಮಿಷದಲ್ಲಿ ಸ್ಟರೈಕರ್ ಅರಿದಾನೆ ಸ್ಯಾಂಟಾನ ತಂದುಕೊಟ್ಟ ಅದ್ಭುತ ಗೋಲ್ ನೆರವಿನಿಂದ ಹೈದರಾಬಾದ್ ತಂಡ 1-0 ಅಂತರದ ಮೇಲುಗೈ ಹೊಂದಿತ್ತು.

ಗೆಲುವಿನತ್ತ ಕೊಂಡೊಯ್ದಿತ್ತು 
ನಿರೀಕ್ಷೆಯಂತೆ ಎಫ್ಸಿ ಗೋವಾ ತಂಡದ ಡಿಫೆನ್ಸ್ ವಿಭಾಗದ ವೈಫಲ್ಯದ ಲಾಭ ಪಡೆದಿದ್ದ ಹೈದರಾಬಾದ್ ತಂಡ ಮೇಲುಗೈ ಪಡೆದು ತಂಡವನ್ನು ಗೆಲುವಿನತ್ತ ಕೊಂಡೊಯ್ದಿತ್ತು. ಆದರೆ ಅಂತಿಮ ಘಟ್ಟದಲ್ಲಿ ಮೈಮರೆತ ಪರಿಣಾಮ ಎಫ್ಸಿ ಗೋವಾ ಕೇವಲ 4 ನಿಮಿಷಗಳ ಅಂತರದಲ್ಲಿ ಎರಡು ಗೋಲ್ಗಳನ್ನು ಬಾರಿಸಿ ಹೈದರಾಬಾದ್ ಮುಷ್ಠಿಯಲ್ಲಿದ್ದ ಗೆಲುವನ್ನು ಕಸಿದುಕೊಂಡಿತು.

3ನೇ ಸ್ಥಾನಕ್ಕೆ ಜಿಗಿತ
ಈ ಗೆಲುವಿನೊಂದಿಗೆ ಎಫ್ಸಿ ಗೋವಾ ತಂಡ ಲೀಗ್ನಲ್ಲಿ ಆಡಿದ ಒಟ್ಟು 9 ಪಂದ್ಯಗಳಿಂದ 14 ಅಂಕಗಳನ್ನು ಗಳಿಸುವ ಮೂಲಕ ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಜಿಗಿದಿದೆ. ಮತ್ತೊಂದೆಡೆ ಬ್ಯಾಕ್ ಟು ಬ್ಯಾಕ್ ಸೋಲಿನ ಆಘಾತಕ್ಕೆ ಒಳಗಾಗಿರುವ ಹೈದರಾಬಾದ್ ತಂಡ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲೇ ಉಳಿದುಕೊಂಡಿದೆ.

ಯಶಸ್ಸು ಕೈ ಹಿಡಿಯಲಿಲ್ಲ 
ಪಂದ್ಯದ ಮೊದಲ ಅವಧಿಯಲ್ಲಿ ಒಂದು ಗೋಲ್ ಕೂಡ ದಾಖಲಾಗಲಿಲ್ಲ. ಇತ್ತಂಡಗಳು ಹಲವು ಬಾರಿ ಪ್ರಯತ್ನ ನಡೆಸಿದರೂ ಕೂಡ ಯಶಸ್ಸು ಕೈ ಹಿಡಿಯಲಿಲ್ಲ. ಮತ್ತೊಂದೆಡೆ 2ನೇ ಅವಧಿ ಸಂಪೂರ್ಣ ವಿಭಿನ್ನವಾಗಿತ್ತು. ಗೋಲ್ಗಳ ಸುರಿಮಳೆಗೆ ಸಾಕ್ಷಿಯಾದ ಈ ಅವಧಿಯಲ್ಲಿ ಭರಪೂರ ಮನೋರಂಜೆ ಲಭ್ಯವಾಯೊತು. ಹೈದರಾಬಾದ್ ಆರಂಭಿಕ ಮುನ್ನಡೆ ಗಳಿಸಿದರೂ, ಬ್ಯಾಕ್ ಟು ಬ್ಯಾಕ್ ಗೋಲ್ಗಳೊಂದಿಗೆ ಗೋವಾ ರೋಚಕ ಜಯ ತನ್ನದಾಗಿಸಿಕೊಂಡಿತು.
This News Article is a Copy of MYKHEL
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm