ಬ್ರೇಕಿಂಗ್ ನ್ಯೂಸ್
02-01-21 11:41 am Source: MYKHEL Madhukara Shetty ಕ್ರೀಡೆ
ರಾಂಚಿ, ಜ.2: ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಫ್ರಿನ್ಸ್ ಆಫ್ ರಾಂಚಿ ಎಂದೇ ಖ್ಯಾತರಾಗಿರುವ ಮಹೇಂದ್ರ ಸಿಂಗ್ ಧೋನಿ ಅವರ ವಿಭಿನ್ನ ಅಭಿರುಚಿಗಳು ಕ್ರಿಕೆಟ್ ಪ್ರೇಮಿಗಳಿಗೆ ತಿಳಿದೇ ಇದೆ. ಕ್ರಿಕೆಟ್ ಹೊರತುಪಡಿಸಿ ಕೃಷಿ ಚಟುವಟಿಕೆಗಳ ಬಗ್ಗೆಯೂ ಧೋನಿ ಬಹಳ ಆಸಕ್ತಿ ಹೊಂದಿದವರಾಗಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ರಾಂಚಿಯಲ್ಲಿರುವ ಧೋನಿ ಫಾರ್ಮ್ ಹೌಸ್ನಲ್ಲಿ ತರಕಾರಿಗಳು ಬೆಳೆದು ಕಟಾವಿನ ಹಂತದಲ್ಲಿದೆ.
ಎಂಎಸ್ ಧೋನಿ ಫಾರ್ಮ್ ಹೌಸ್ನಲ್ಲಿ ಬೆಳೆದ ತರಕಾರಿಗಳನ್ನು ವಿದೇಶಕ್ಕೆ ರಫ್ತು ಮಾಡಲು ಸಿದ್ಧತೆಗಳು ನಡೆಯುತ್ತಿದೆ. ಇಲ್ಲಿ ಬೆಳೆದ ತರಕಾರಿಗಳನ್ನು ದುಬೈಗೆ ರವಾನಿಸಲಾಗುತ್ತಿದ್ದು ಅದಕ್ಕೆ ಪೂರಕವಾದ ಅಂತಿಮ ಹಂತದ ಸಿದ್ಧತೆಗಳು ಈಗ ಧೋನಿಯ ಫಾರ್ಮ್ ಹೌಸ್ನಲ್ಲಿ ನಡೆಯುತ್ತಿದೆ.
ಧೋನಿ ಫಾರ್ಮ್ ಹೌಸ್ನಲ್ಲಿ ಬೆಳೆದ ತರಕಾರಿಗಳ ಮಾರಾಟಕ್ಕೆ ಸಂಬಂಧಪಟ್ಟ ಮಾತುಕತೆಗಳು ಅಂತಿಮ ಹಂತದಲ್ಲಿದ್ದು ತರಕಾರಿಗಳನ್ನು ದುಬೈಗೆ ಕಳುಹಿಸಲು ಏಜೇನ್ಸಿಗಳನ್ನು ಕೂಡ ಆಯ್ಕೆ ಮಾಡಿಕೊಳ್ಳಲಾಗಿದೆ. ಝಾರ್ಖಂಡ್ನ ಕೃಷಿ ಇಲಾಕೆ ಎಂಎಸ್ ಧೋನಿ ತೋಟದಲ್ಲಿ ಬೆಳೆದ ತರಕಾರಿಗಳನ್ನು ವಿದೇಶಕ್ಕೆ ರವಾನಿಸುವ ಹೊಣೆಹೊತ್ತುಕೊಂಡಿದೆ.
ಝಾರ್ಖಂಡ್ನ ಸೆಂಬೋ ಗ್ರಾಮದ ರಿಂಗ್ರೋಡ್ಗೆ ಸಮೀಪದಲ್ಲಿ ಎಂಎಸ್ ಧೋನಿಯ ಪಾರ್ಮ್ ಹೌಸ್ ಇದೆ. ಇಲ್ಲಿ ಸ್ಟ್ರಾಬೆರ್ರಿ, ಕ್ಯಾಬೇಜ್, ಟೊಮ್ಯಾಟೋ, ಕೋಸುಗಡ್ಡೆ, ಬಟಾಣಿ ಪಪ್ಪಾಯ ಸೇರಿದಂತೆ ಸಾಕಷ್ಟು ತರಕಾರಿ ಹಣ್ಣುಗಳನ್ನು ಬೆಳೆಯಲಾಗುತ್ತಿದೆ. 43 ಎಕ್ರೆಯಲ್ಲಿರುವ ಪಾರ್ಮ್ ಹೌಸ್ನಲ್ಲಿ 10 ಎಕ್ರೆ ಸ್ಥಳವನ್ನು ಇವುಗಳಿಗಾಗಿಯೇ ಧೋನಿ ಮೀಸಲಿಟ್ಟಿದ್ದಾರೆ.
ಧೋನಿ ತೋಟದಲ್ಲಿ ಬೇಳೆಯಲಾಗುತ್ತಿರುವ ಕ್ಯಾಬೇಜ್, ಟೊಮ್ಯಾಟೋ ಹಾಗೂ ಬಟಾಣಿ ಕಾಳುಗಳಿಗೆ ರಾಂಚಿಯ ಮಾರುಕಟ್ಟೆಯಲ್ಲಿ ಅಪಾರವಾದ ಬೇಡಿಕೆಯಿದೆ. ಈಗ ರಾಂಚಿಯಿಂದ ನೇರವಾಗಿ ದುಬೈಗೆ ಹಾರುವ ಮೂಲಕ ಝಾರ್ಖಂಡ್ ರೈತರಿಗೆ ದುಬೈನಲ್ಲಿ ಮಾರುಕಟ್ಟೆಗೆ ವೇದಿಕೆ ಒದಗಿಸಲು ಈ ಮೂಲಕ ಧೋನಿ ಕೈಜೋಡಿಸಿದ್ದಾರೆ.
This News Article is a Copy of MYKHEL
08-12-25 11:26 am
Bangalore Correspondent
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 11:23 am
Mangalore Correspondent
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm