ಬ್ರೇಕಿಂಗ್ ನ್ಯೂಸ್
09-03-26 12:54 pm HK News Staffer ಕ್ರೀಡೆ
ಅಹಮದಾಬಾದ್, ಮಾರ್ಚ್ 9: ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಭಾರತ ಕ್ರಿಕೆಟ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ನಲ್ಲಿ ಭಾರತವು ನ್ಯೂಜಿಲೆಂಡ್ ವಿರುದ್ಧ 96 ರನ್ಗಳ ಅಮೋಘ ಗೆಲುವು ದಾಖಲಿಸಿದೆ.
ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಮೊದಲು ಬೌಲಿಂಗ್ ಆಯ್ದುಕೊಂಡಿತು. ಮೊದಲಿಗೆ ಬ್ಯಾಟಿಂಗ್ ಮಾಡಿದ ಭಾರತ ತಂಡ 20 ಓವರ್ಗಳಲ್ಲಿ 255 ರನ್ಗಳ ಭಾರೀ ಮೊತ್ತ ಕಲೆಹಾಕಿತು. ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ತಂಡ 159 ರನ್ಗಳಿಗೆ ಆಲೌಟ್ ಆಗಿ ಸೋಲೊಪ್ಪಿಕೊಂಡಿತು.
ಈ ಐತಿಹಾಸಿಕ ಗೆಲುವಿನ ಬಳಿಕ ಮಾತನಾಡಿದ ಭಾರತದ ಆಟಗಾರ ಇಶಾನ್ ಕಿಶನ್ ತಮ್ಮ ಜೀವನದ ಅತ್ಯಂತ ಕಠಿಣ ಕ್ಷಣವನ್ನು ಹಂಚಿಕೊಂಡಿದ್ದಾರೆ. ಫೈನಲ್ ಪಂದ್ಯಕ್ಕೂ ಮುನ್ನ ನಡೆದ ರಸ್ತೆ ಅಪಘಾತದಲ್ಲಿ ಇಶಾನ್ ಕಿಶನ್ ಸಹೋದರಿ ವೈಷ್ಣವಿ ಸಿಂಗ್ ಮತ್ತು ಅವರ ಪತಿ ಮೃತಪಟ್ಟಿದ್ದಾರೆ. ಮಾರ್ಚ್ 7ರಂದು ಪಶ್ಚಿಮ ಬಂಗಾಳದ ರಾಷ್ಟ್ರೀಯ ಹೆದ್ದಾರಿ–27ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಈ ದುರ್ಘಟನೆ ನಡೆದಿದ್ದು, ಕಾರಿನಲ್ಲಿದ್ದ ಆರು ತಿಂಗಳ ಹಾಗೂ ಮೂರು ವರ್ಷದ ಇಬ್ಬರು ಪುಟ್ಟ ಮಕ್ಕಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕುಟುಂಬದಲ್ಲಿ ಇಂತಹ ದೊಡ್ಡ ದುರಂತ ಸಂಭವಿಸಿದರೂ, ತಂಡದ ಹಿತದೃಷ್ಟಿಯಿಂದ ಇಶಾನ್ ಕಿಶನ್ ಫೈನಲ್ ಪಂದ್ಯವನ್ನು ಆಡಲು ನಿರ್ಧರಿಸಿದರು. ಈ ಸಂದರ್ಭದಲ್ಲಿ ಸಹ ಆಟಗಾರ ಹಾರ್ದಿಕ್ ಪಾಂಡ್ಯ ಅವರು ಧೈರ್ಯ ತುಂಬಿದ ಕಾರಣ ಅವರು ಮೈದಾನಕ್ಕಿಳಿದಿದ್ದಾರೆ ಎಂದು ತಿಳಿದುಬಂದಿದೆ.
ವೈಯಕ್ತಿಕ ದುಃಖದ ನಡುವೆಯೂ ಇಶಾನ್ ಕಿಶನ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ ಕೇವಲ 25 ಎಸೆತಗಳಲ್ಲಿ 54 ರನ್ ಗಳಿಸಿದರು. ಅವರ ಇನ್ನಿಂಗ್ಸ್ನಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್ ಸೇರಿದ್ದವು. ಜೊತೆಗೆ ಫೀಲ್ಡಿಂಗ್ನಲ್ಲೂ ಉತ್ತಮ ಪ್ರದರ್ಶನ ನೀಡಿ ಪ್ರಮುಖ ಕ್ಯಾಚ್ಗಳನ್ನು ಹಿಡಿದು ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದರು.
ಅರ್ಧಶತಕ ಪೂರೈಸಿದ ಬಳಿಕ ಕಿಶನ್ ಬ್ಯಾಟ್ ಅನ್ನು ಆಕಾಶದ ಕಡೆ ತೋರಿಸಿ ತಮ್ಮ ಸಹೋದರಿಯನ್ನು ಸ್ಮರಿಸಿದರು. ಬಳಿಕ ಮಾತನಾಡಿದ ಅವರು, “ಈ ಗೆಲುವನ್ನು ನನ್ನ ಸಹೋದರಿಗೆ ಅರ್ಪಿಸುತ್ತೇನೆ. ನಾನು ವಿಶ್ವಕಪ್ ಗೆಲ್ಲಬೇಕೆಂಬುದು ಅವಳ ಆಸೆಯಾಗಿತ್ತು,” ಎಂದು ಭಾವುಕರಾಗಿ ಹೇಳಿದರು.
ವೈಯಕ್ತಿಕ ದುಃಖದ ನಡುವೆಯೂ ದೇಶಕ್ಕಾಗಿ ಅದ್ಭುತ ಪ್ರದರ್ಶನ ನೀಡಿದ ಇಶಾನ್ ಕಿಶನ್ ಅವರ ಧೈರ್ಯ ಹಾಗೂ ಸಮರ್ಪಣೆಗೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 08:15 pm
HK News Desk
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm