ಬ್ರೇಕಿಂಗ್ ನ್ಯೂಸ್
09-03-26 12:54 pm HK News Staffer ಕ್ರೀಡೆ
ಅಹಮದಾಬಾದ್, ಮಾರ್ಚ್ 9: ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಭಾರತ ಕ್ರಿಕೆಟ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ನಲ್ಲಿ ಭಾರತವು ನ್ಯೂಜಿಲೆಂಡ್ ವಿರುದ್ಧ 96 ರನ್ಗಳ ಅಮೋಘ ಗೆಲುವು ದಾಖಲಿಸಿದೆ.
ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಮೊದಲು ಬೌಲಿಂಗ್ ಆಯ್ದುಕೊಂಡಿತು. ಮೊದಲಿಗೆ ಬ್ಯಾಟಿಂಗ್ ಮಾಡಿದ ಭಾರತ ತಂಡ 20 ಓವರ್ಗಳಲ್ಲಿ 255 ರನ್ಗಳ ಭಾರೀ ಮೊತ್ತ ಕಲೆಹಾಕಿತು. ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ತಂಡ 159 ರನ್ಗಳಿಗೆ ಆಲೌಟ್ ಆಗಿ ಸೋಲೊಪ್ಪಿಕೊಂಡಿತು.
ಈ ಐತಿಹಾಸಿಕ ಗೆಲುವಿನ ಬಳಿಕ ಮಾತನಾಡಿದ ಭಾರತದ ಆಟಗಾರ ಇಶಾನ್ ಕಿಶನ್ ತಮ್ಮ ಜೀವನದ ಅತ್ಯಂತ ಕಠಿಣ ಕ್ಷಣವನ್ನು ಹಂಚಿಕೊಂಡಿದ್ದಾರೆ. ಫೈನಲ್ ಪಂದ್ಯಕ್ಕೂ ಮುನ್ನ ನಡೆದ ರಸ್ತೆ ಅಪಘಾತದಲ್ಲಿ ಇಶಾನ್ ಕಿಶನ್ ಸಹೋದರಿ ವೈಷ್ಣವಿ ಸಿಂಗ್ ಮತ್ತು ಅವರ ಪತಿ ಮೃತಪಟ್ಟಿದ್ದಾರೆ. ಮಾರ್ಚ್ 7ರಂದು ಪಶ್ಚಿಮ ಬಂಗಾಳದ ರಾಷ್ಟ್ರೀಯ ಹೆದ್ದಾರಿ–27ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಈ ದುರ್ಘಟನೆ ನಡೆದಿದ್ದು, ಕಾರಿನಲ್ಲಿದ್ದ ಆರು ತಿಂಗಳ ಹಾಗೂ ಮೂರು ವರ್ಷದ ಇಬ್ಬರು ಪುಟ್ಟ ಮಕ್ಕಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕುಟುಂಬದಲ್ಲಿ ಇಂತಹ ದೊಡ್ಡ ದುರಂತ ಸಂಭವಿಸಿದರೂ, ತಂಡದ ಹಿತದೃಷ್ಟಿಯಿಂದ ಇಶಾನ್ ಕಿಶನ್ ಫೈನಲ್ ಪಂದ್ಯವನ್ನು ಆಡಲು ನಿರ್ಧರಿಸಿದರು. ಈ ಸಂದರ್ಭದಲ್ಲಿ ಸಹ ಆಟಗಾರ ಹಾರ್ದಿಕ್ ಪಾಂಡ್ಯ ಅವರು ಧೈರ್ಯ ತುಂಬಿದ ಕಾರಣ ಅವರು ಮೈದಾನಕ್ಕಿಳಿದಿದ್ದಾರೆ ಎಂದು ತಿಳಿದುಬಂದಿದೆ.
ವೈಯಕ್ತಿಕ ದುಃಖದ ನಡುವೆಯೂ ಇಶಾನ್ ಕಿಶನ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ ಕೇವಲ 25 ಎಸೆತಗಳಲ್ಲಿ 54 ರನ್ ಗಳಿಸಿದರು. ಅವರ ಇನ್ನಿಂಗ್ಸ್ನಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್ ಸೇರಿದ್ದವು. ಜೊತೆಗೆ ಫೀಲ್ಡಿಂಗ್ನಲ್ಲೂ ಉತ್ತಮ ಪ್ರದರ್ಶನ ನೀಡಿ ಪ್ರಮುಖ ಕ್ಯಾಚ್ಗಳನ್ನು ಹಿಡಿದು ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದರು.
ಅರ್ಧಶತಕ ಪೂರೈಸಿದ ಬಳಿಕ ಕಿಶನ್ ಬ್ಯಾಟ್ ಅನ್ನು ಆಕಾಶದ ಕಡೆ ತೋರಿಸಿ ತಮ್ಮ ಸಹೋದರಿಯನ್ನು ಸ್ಮರಿಸಿದರು. ಬಳಿಕ ಮಾತನಾಡಿದ ಅವರು, “ಈ ಗೆಲುವನ್ನು ನನ್ನ ಸಹೋದರಿಗೆ ಅರ್ಪಿಸುತ್ತೇನೆ. ನಾನು ವಿಶ್ವಕಪ್ ಗೆಲ್ಲಬೇಕೆಂಬುದು ಅವಳ ಆಸೆಯಾಗಿತ್ತು,” ಎಂದು ಭಾವುಕರಾಗಿ ಹೇಳಿದರು.
ವೈಯಕ್ತಿಕ ದುಃಖದ ನಡುವೆಯೂ ದೇಶಕ್ಕಾಗಿ ಅದ್ಭುತ ಪ್ರದರ್ಶನ ನೀಡಿದ ಇಶಾನ್ ಕಿಶನ್ ಅವರ ಧೈರ್ಯ ಹಾಗೂ ಸಮರ್ಪಣೆಗೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
13-09-26 07:53 pm
HK News Staffer
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm