ಬ್ರೇಕಿಂಗ್ ನ್ಯೂಸ್
09-03-26 12:54 pm HK News Staffer ಕ್ರೀಡೆ
ಅಹಮದಾಬಾದ್, ಮಾರ್ಚ್ 9: ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಭಾರತ ಕ್ರಿಕೆಟ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ನಲ್ಲಿ ಭಾರತವು ನ್ಯೂಜಿಲೆಂಡ್ ವಿರುದ್ಧ 96 ರನ್ಗಳ ಅಮೋಘ ಗೆಲುವು ದಾಖಲಿಸಿದೆ.
ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಮೊದಲು ಬೌಲಿಂಗ್ ಆಯ್ದುಕೊಂಡಿತು. ಮೊದಲಿಗೆ ಬ್ಯಾಟಿಂಗ್ ಮಾಡಿದ ಭಾರತ ತಂಡ 20 ಓವರ್ಗಳಲ್ಲಿ 255 ರನ್ಗಳ ಭಾರೀ ಮೊತ್ತ ಕಲೆಹಾಕಿತು. ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ತಂಡ 159 ರನ್ಗಳಿಗೆ ಆಲೌಟ್ ಆಗಿ ಸೋಲೊಪ್ಪಿಕೊಂಡಿತು.
ಈ ಐತಿಹಾಸಿಕ ಗೆಲುವಿನ ಬಳಿಕ ಮಾತನಾಡಿದ ಭಾರತದ ಆಟಗಾರ ಇಶಾನ್ ಕಿಶನ್ ತಮ್ಮ ಜೀವನದ ಅತ್ಯಂತ ಕಠಿಣ ಕ್ಷಣವನ್ನು ಹಂಚಿಕೊಂಡಿದ್ದಾರೆ. ಫೈನಲ್ ಪಂದ್ಯಕ್ಕೂ ಮುನ್ನ ನಡೆದ ರಸ್ತೆ ಅಪಘಾತದಲ್ಲಿ ಇಶಾನ್ ಕಿಶನ್ ಸಹೋದರಿ ವೈಷ್ಣವಿ ಸಿಂಗ್ ಮತ್ತು ಅವರ ಪತಿ ಮೃತಪಟ್ಟಿದ್ದಾರೆ. ಮಾರ್ಚ್ 7ರಂದು ಪಶ್ಚಿಮ ಬಂಗಾಳದ ರಾಷ್ಟ್ರೀಯ ಹೆದ್ದಾರಿ–27ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಈ ದುರ್ಘಟನೆ ನಡೆದಿದ್ದು, ಕಾರಿನಲ್ಲಿದ್ದ ಆರು ತಿಂಗಳ ಹಾಗೂ ಮೂರು ವರ್ಷದ ಇಬ್ಬರು ಪುಟ್ಟ ಮಕ್ಕಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕುಟುಂಬದಲ್ಲಿ ಇಂತಹ ದೊಡ್ಡ ದುರಂತ ಸಂಭವಿಸಿದರೂ, ತಂಡದ ಹಿತದೃಷ್ಟಿಯಿಂದ ಇಶಾನ್ ಕಿಶನ್ ಫೈನಲ್ ಪಂದ್ಯವನ್ನು ಆಡಲು ನಿರ್ಧರಿಸಿದರು. ಈ ಸಂದರ್ಭದಲ್ಲಿ ಸಹ ಆಟಗಾರ ಹಾರ್ದಿಕ್ ಪಾಂಡ್ಯ ಅವರು ಧೈರ್ಯ ತುಂಬಿದ ಕಾರಣ ಅವರು ಮೈದಾನಕ್ಕಿಳಿದಿದ್ದಾರೆ ಎಂದು ತಿಳಿದುಬಂದಿದೆ.
ವೈಯಕ್ತಿಕ ದುಃಖದ ನಡುವೆಯೂ ಇಶಾನ್ ಕಿಶನ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ ಕೇವಲ 25 ಎಸೆತಗಳಲ್ಲಿ 54 ರನ್ ಗಳಿಸಿದರು. ಅವರ ಇನ್ನಿಂಗ್ಸ್ನಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್ ಸೇರಿದ್ದವು. ಜೊತೆಗೆ ಫೀಲ್ಡಿಂಗ್ನಲ್ಲೂ ಉತ್ತಮ ಪ್ರದರ್ಶನ ನೀಡಿ ಪ್ರಮುಖ ಕ್ಯಾಚ್ಗಳನ್ನು ಹಿಡಿದು ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದರು.
ಅರ್ಧಶತಕ ಪೂರೈಸಿದ ಬಳಿಕ ಕಿಶನ್ ಬ್ಯಾಟ್ ಅನ್ನು ಆಕಾಶದ ಕಡೆ ತೋರಿಸಿ ತಮ್ಮ ಸಹೋದರಿಯನ್ನು ಸ್ಮರಿಸಿದರು. ಬಳಿಕ ಮಾತನಾಡಿದ ಅವರು, “ಈ ಗೆಲುವನ್ನು ನನ್ನ ಸಹೋದರಿಗೆ ಅರ್ಪಿಸುತ್ತೇನೆ. ನಾನು ವಿಶ್ವಕಪ್ ಗೆಲ್ಲಬೇಕೆಂಬುದು ಅವಳ ಆಸೆಯಾಗಿತ್ತು,” ಎಂದು ಭಾವುಕರಾಗಿ ಹೇಳಿದರು.
ವೈಯಕ್ತಿಕ ದುಃಖದ ನಡುವೆಯೂ ದೇಶಕ್ಕಾಗಿ ಅದ್ಭುತ ಪ್ರದರ್ಶನ ನೀಡಿದ ಇಶಾನ್ ಕಿಶನ್ ಅವರ ಧೈರ್ಯ ಹಾಗೂ ಸಮರ್ಪಣೆಗೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm