ಬ್ರೇಕಿಂಗ್ ನ್ಯೂಸ್
14-03-26 08:20 pm HK News Staffer ಕ್ರೀಡೆ
ನವದೆಹಲಿ, ಮಾರ್ಚ್ 14: ಈ ಬಾರಿಯ ಐಸಿಸಿ ಟಿ20 ವಿಶ್ವಕಪ್ ತಂಡದಲ್ಲಿ ಯುವ ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ ಅವರಿಗೆ ಅವಕಾಶ ಸಿಗಲಿಲ್ಲ. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಮುನ್ನವೇ ಅವರನ್ನು ಭಾರತ ಕ್ರಿಕೆಟ್ ತಂಡದಿಂದ ಹೊರಗಿಡಲಾಗಿತ್ತು. ತಂಡದಿಂದ ಕೈಬಿಟ್ಟ ಬಗ್ಗೆ ಜಿತೇಶ್ ಶರ್ಮಾ ಮಾತನಾಡಿದ್ದಾರೆ.
ತಂಡದಿಂದ, ಅದರಲ್ಲೂ ಟಿ20 ವಿಶ್ವಕಪ್ ತಂಡದಿಂದ ಹೊರಬಿದ್ದಿದ್ದಕ್ಕೆ ನನಗೆ ಈಗ ಯಾವುದೇ ವಿಷಾದವಿಲ್ಲ ಎಂದು ಜಿತೇಶ್ ಹೇಳಿದ್ದಾರೆ. ಏಕೆಂದರೆ ಆ ಸಮಯದಲ್ಲಿ ತಮ್ಮ ತಂದೆಗೆ ನನ್ನ ಅಗತ್ಯ ಹೆಚ್ಚು ಇತ್ತು ಎಂದು ಭಾವನಾತ್ಮಕವಾಗಿ ಹೇಳಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಜಿತೇಶ್ ಶರ್ಮಾ, ಫೆಬ್ರವರಿ 1ರಂದು ತಮ್ಮ ತಂದೆ ಮೋಹನ್ ಶರ್ಮಾ ನಿಧನರಾದರು ಎಂದು ತಿಳಿಸಿದ್ದಾರೆ. ನಾನು ತಂಡಕ್ಕೆ ಆಯ್ಕೆಯಾಗದ ಕಾರಣದಿಂದಲೇ ಅವರ ಕೊನೆಯ ದಿನಗಳಲ್ಲಿ ಅವರ ಜೊತೆಗೆ ಇರಲು ಸಾಧ್ಯವಾಯಿತು. “ನನ್ನ ತಂದೆಗೆ ವಿಶ್ವಕಪ್ಗಿಂತ ಹೆಚ್ಚಾಗಿ ನನ್ನ ಅಗತ್ಯವಿತ್ತು” ಎಂದು ಹೇಳಿದ್ದಾರೆ.
ತಂಡದಿಂದ ಹೊರಬಿದ್ದಾಗ ಆರಂಭದಲ್ಲಿ ಬೇಸರವಾಗಿತ್ತು. ಆದರೆ ತಂದೆಯ ನಿಧನದ ನಂತರ ಆ ನೋವು ಕಡಿಮೆಯಾಯಿತು. ಒಬ್ಬ ಮಗನಾಗಿ ಅವರ ಕೊನೆಯ ಕ್ಷಣಗಳಲ್ಲಿ ಅವರ ಜೊತೆಗೆ ಇರುವ ಅವಕಾಶ ಸಿಕ್ಕಿದ್ದು ನನಗೆ ಸಮಾಧಾನ ನೀಡಿದೆ ಎಂದು ಜಿತೇಶ್ ಭಾವುಕರಾಗಿದ್ದಾರೆ.
ಜಿತೇಶ್ ಶರ್ಮಾ ಅವರ ತಂದೆ ಮೋಹನ್ ಶರ್ಮಾ ಅವರು ಸುದೀರ್ಘ ಕಾಯಿಲೆಯಿಂದ ಬಳಲುತ್ತಿದ್ದರು. ಕಳೆದ ತಿಂಗಳು ಫೆಬ್ರವರಿ 1ರಂದು ಅವರು ನಿಧನರಾದರು. ಅದೇ ಸಮಯದಲ್ಲಿ ಟಿ20 ವಿಶ್ವಕಪ್ಗೆ ಭಾರತ ತಂಡದ ಆಯ್ಕೆ ಪ್ರಕ್ರಿಯೆ ನಡೆಯುತ್ತಿತ್ತು. ತಂಡದಲ್ಲಿ ಸ್ಥಾನ ಸಿಗದಿದ್ದಾಗ ಆರಂಭದಲ್ಲಿ ನಿರಾಸೆ ಉಂಟಾಗಿತ್ತು. ಆದರೆ ತಂದೆಯ ಆರೋಗ್ಯ ಕ್ಷೀಣಿಸುತ್ತಿದ್ದ ಕಾರಣದಿಂದಲೇ ತಮ್ಮ ಕೊನೆಯ ಏಳು ದಿನಗಳ ಕಾಲ ಅವರ ಜೊತೆಗಿರಲು ಸಾಧ್ಯವಾಯಿತು ಎಂದು ಜಿತೇಶ್ ತಿಳಿಸಿದ್ದಾರೆ.
ತಂದೆಯ ನಿಧನದ ಬಳಿಕ ಮನೆಯ ಹಿರಿಯ ಮಗನಾಗಿ ತಮ್ಮ ತಾಯಿ ಮತ್ತು ತಮ್ಮನ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಕ್ರಿಕೆಟ್ ಜೀವನದ ಏರಿಳಿತಗಳಿಗಿಂತ ಕುಟುಂಬದ ಮಹತ್ವ ದೊಡ್ಡದು ಎಂಬುದನ್ನು ಅವರು ಒತ್ತಿ ಹೇಳಿದ್ದಾರೆ.
ಇದೀಗ ಜಿತೇಶ್ ಶರ್ಮಾ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕ್ಯಾಂಪ್ಗೆ ಸೇರಿದ್ದು, ಮುಂಬರುವ ಐಪಿಎಲ್ ಟೂರ್ನಿಗೆ ಸಿದ್ಧತೆ ಆರಂಭಿಸಿದ್ದಾರೆ. ಐಪಿಎಲ್ 2026ರಲ್ಲಿ ತಂಡಕ್ಕೆ ಚಾಂಪಿಯನ್ ಪಟ್ಟ ಉಳಿಸಿಕೊಡುವ ವಿಶ್ವಾಸವನ್ನೂ ವ್ಯಕ್ತಪಡಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm